Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್ - ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ...

ಫ್ಯಾಕ್ಟ್‌‌ಚೆಕ್ – ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ ಹಳೆಯದು!

- Advertisement -
- Advertisement -

ನಟ ಅಮಿತಾಬ್ ಬಚ್ಚನ್ ಅವರು ಸೆಪ್ಟೆಂಬರ್ 8, 2021 ರಂದು ಮುಂಬೈನ ಲಾಲ್‌ಬಾಗ್‌ನಲ್ಲಿ ಈ ವರ್ಷದ ಗಣೇಶ ಮೂರ್ತಿಯ ಮೊದಲ ದರ್ಶನ ಎಂದು ವಿಡಿಯೊವೊಂದನ್ನು ಟ್ವೀಟ್‌ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಗಣೇಶ ಹಬ್ಬವನ್ನು ಬಹಳ ಸಂಭ್ರಮದಿಂದ ಪೂಜಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್‌ಬಾಗ್‌ನಲ್ಲಿರುವ ಗಣಪತಿ ಪೂಜೆಯ ಚಪ್ಪರ ಅತಿದೊಡ್ಡದು ಮತ್ತು ಅತ್ಯಂತ ಜನಪ್ರಿಯವಾಗಿದೆ. ಅಲ್ಲಿ ಕೂರಿಸುವ ಗಣಪತಿಯ ಮೂರ್ತಿಯನ್ನು ‘ಲಾಲ್‌ಬೌಚ ರಾಜಾ’ ಎಂದು ಎಂದು ಕರೆಯುತ್ತಾರೆ. ಅಲ್ಲಿ ಈ ವರ್ಷದ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 10 ರಂದು ಆಚರಿಸಲಾಯಿತು.

ಅಮಿತಾಬ್ ಬಚ್ಚನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅದೇ ವಿಡಿಯೊವನ್ನು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ.

ಅಮಿತಾಬ್ ಅವರು ಟ್ವೀಟ್ ಮಾಡಿರುವ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದಿದ್ದು, ಫೇಸ್‌ಬುಕ್‌ನಲ್ಲಿ ಅವರ ಪೋಸ್ಟ್ 4,500 ಕ್ಕೂ ಹೆಚ್ಚು ಶೇರ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಅಮಿತಾಬ್ ಅವರು ಟ್ವೀಟ್ ಮಾಡಿದ ನಂತರ ಹಲವಾರು ಜನರು ಈ ವಿಡಿಯೊ ಈ ವರ್ಷದ್ದು ಎಂದು ಹಂಚಿಕೊಂಡಿದ್ದಾರೆ. ಕೊರೊನಾ ಪ್ರಯುಕ್ತ ದೊಡ್ಡ ಕೂಟಗಳನ್ನು ನಿಷೇಧಿಸಿದರೂ ಸಹ ಸಾವಿರಾರು ಜನರು ಸೇರಿರುವುದು ವಿಡಿಯದಲ್ಲಿ ಕಾಣುತ್ತಿರುವುದರಿಂದ ಇದು ವಿವಾದವನ್ನೂ ಉಂಟು ಮಾಡಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿ ಕಂಡುಬರುವಂತೆ ಜನಸಮೂಹವು ಯಾವುದೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವಂತೆ ಕಾಣುತ್ತಿಲ್ಲ. ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಸ್ಥಳಗಳನ್ನು ತೆರೆಯಲು ಅನುಮತಿ ನೀಡುವಂತೆ ಮಹಾರಾಷ್ಟ್ರದ ಪ್ರತಿಪಕ್ಷವಾದ ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿತ್ತು. ಈ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ನಡುವೆ ವಿವಾದಗಳೂ ಉಂಟಾಗಿತ್ತು. ಹೀಗಾಗಿ, ವಿಡಿಯೊದಲ್ಲಿನ ಕಾಣುತ್ತಿರುವ ಜನರು ಮಾಸ್ಕ್‌ ಕೂಡಾ ಧರಿಸದೆ ಅಲ್ಲಿ ಭಾಗವಹಿಸಿದ್ದು ವಿವಾದವಾಗಿತ್ತು.

ಈ ಬಗ್ಗೆ ಆಲ್ಟ್ ನ್ಯೂಸ್ ವಿಡಿಯೋವನ್ನು ಫ್ಯಾಕ್ಟ್‌ಚೆಕ್ ನಡೆಸಲು ಅದನ್ನು ರಿವರ್ಸ್ ಇಮೇಜ್‌ ಸರ್ಚ್‌ ಮೂಲಕ ಹುಡುಕಾಡಿದೆ. ಈ ಹುಡುಕಾಟದಲ್ಲಿ ಪ್ರಸ್ತುತ ವಿಡಿಯೊ ಈ ವರ್ಷದ್ದಲ್ಲ ಎಂದು ಆಲ್ಟ್‌ನ್ಯೂಸ್‌ ಕಂಡು ಹಿಡಿದಿದೆ. ಅಮಿತಾಬ್ ಅವರು ಹಂಚಿಕೊಂಡಿರುವ ವಿಡಿಯೊ 2016 ರ ಸೆಪ್ಟೆಂಬರ್‌ನದ್ದು ಎಂದು ಆಲ್ಟ್‌ ನ್ಯೂಸ್ ಕಂಡುಕೊಂಡಿದೆ. 2016 ರ ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊವನ್ನು 2016 ರ ಸೆಪ್ಟೆಂಬರ್ 2 ರಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

 

ಸುದ್ದಿ ಸಂಸ್ಥೆ ಎಎನ್ಐ ಕೂಡಾ ಇದೇ ಘಟನೆಯನ್ನು ಬೇರೆ ಬೇರೆ ಕೋನದಿಂದ ಚಿತ್ರೀಕರಿಸಿದ ವಿಡಿಯೊವನ್ನು 2016 ರ ಸೆಪ್ಟೆಂಬರ್‌ 1 ರಂದು ಟ್ವಿಟರ್‌ಗೆ ಅಪ್ಲೋಡ್ ಮಾಡಿತ್ತು.

ಕೊರೊನಾ ನಿರ್ಬಂಧಗಳ ಹಿನ್ನಲೆಯಲ್ಲಿ ಈ ವರ್ಷವು ಮಹಾರಾಷ್ಟ್ರ ಸರ್ಕಾರವು ಲಾಲ್‌ಬಾಗ್‌ಗೆ ಯಾವುದೇ ಭಕ್ತರಿಗೆ ದೈಹಿಕ ಭೇಟಿಗೆ ಅನುಮತಿ ನೀಡಿರಲಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಲಾಲ್‌ಬೌಚಾ ರಾಜ’ ಸರ್ವಜನಿಕ ಗಣೇಶೋತ್ಸವ ಮಂಡಳಿಯು ವಿಗ್ರಹದ ಆನ್‌ಲೈನ್ ದರ್ಶನವನ್ನು ಸೆಪ್ಟೆಂಬರ್ 10 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆರಂಭಿಸಿತ್ತು.

ವರದಿಯಲ್ಲಿ, ಈ ವರ್ಷದ ಮೂರ್ತಿಯ ಚಿತ್ರವನ್ನೂ ನೀಡಲಾಗಿತ್ತು. ಸಾಮಾನ್ಯವಾಗಿ ಪ್ರತಿಷ್ಟಾಪಿಸುವ 14 ಅಡಿಗಳ ಮೂರ್ತಿಯ ಬದಲಾಗಿ, 4 ಅಡಿ ವಿಗ್ರಹವನ್ನು ಅಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಅಲ್ಲದೆ ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಕಾಣುವ ವಿಗ್ರಹಕ್ಕಿಂತ ಈ ವಿಗ್ರಹವು ವಿಭಿನ್ನವಾಗಿ ಕಾಣುತ್ತದೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಅಮಿತಾಬ್ ಬಚ್ಚನ್ ಅವರ ಟ್ವೀಟ್‌ ಸಂಖ್ಯೆ ‘T 4023’ ಮತ್ತು ‘FB 3053’ ಸಂಖ್ಯೆಯ ಫೇಸ್‌ಬುಕ್ ಪೋಸ್ಟ್ ಮೂಲಕ ಹಂಚಿಕೊಂಡಿರುವ ವಿಡಿಯೊ ಈ ವರ್ಷದ ಲಾಲ್‌ಬಾಗ್‌ನಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಮೂರ್ತಿಯಲ್ಲ. ಅದನ್ನು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ಈ ವಿಡಿಯೊ ತುಣುಕು ಐದು ವರ್ಷಗಳ ಹಿಂದಿನ ಗಣೇಶ ಚತುರ್ಥಿಯ ಆಚರಣೆಯದ್ದಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ರೋಹಿಂಗ್ಯಾ ನಿರಾಶ್ರಿತರಿಗೆ ದೆಹಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸಿದೆ ಎಂದು ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...