Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

ಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

- Advertisement -
- Advertisement -

ಸುಳ್ಳು ಸುದ್ದಿಗಳ ಹರಡವಿಕೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲಿಯೂ ಕೊರೊನಾ ಸೋಂಕಿನ ನಂತರವಂತು ಅವುಗಳ ಸಂಖ್ಯೆ ದ್ವಿಗುಣವಾಗಿದೆ. ಈ ನಿಟ್ಟಿನಲ್ಲಿ ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ವಾಸ್ತವಾಂಶಗಳು ಇಲ್ಲಿವೆ.

  1. ಐಸಿಎಂಆರ್ ನೀಡಿದ ಪ್ರಮುಖ ಮುನ್ನೆಚ್ಚರಿಕೆಗಳು ನಿಜವೇ?

ಐಸಿಎಂಆರ್ ನವದೆಹಲಿ ಕೊರೊನಾ ತಡೆಯಲು ನೀಡಿದ ಪ್ರಮುಖ ಮುನ್ನೆಚ್ಚರಿಕೆಗಳು ಎಂಬ ಬರಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತು ಐಸಿಎಂಆರ್ ನಿರ್ದೇಶಕರಾದ ಡಾ.ರಜನಿಕಾಂತ್‌ರವರ ಸ್ಪಷ್ಟನೆ ನೀಡಿ ವೈರಲ್ ಬರಹ ಸಂಪೂರ್ಣ ಸುಳ್ಳು ಎಂದಿದ್ದಾರೆ. ನಾವು ಆ ರೀತಿಯ ಯಾವುದೇ ಮುನ್ನೆಚ್ಚರಿಕೆಗಳನ್ನು ನೀಡಿಲ್ಲ. ನಮ್ಮ ಪತ್ರಿಕಾ ಹೇಳಿಕೆಗಳು ವೆಬ್‌ಸೈಟ್‌ನಲ್ಲಿ ಮೀಡಿಯಾ ವಿಭಾಗದಲ್ಲಿದ್ದು ಅವು ಮಾತ್ರ ಸತ್ಯ ಎಂದು ಸ್ಪಷ್ಟಪಡಿಸಿದ್ದಾರೆ.

2 ಕೊರೊನಾ ಕಾಲದಲ್ಲಿಯೂ ತೆಲಂಗಾಣದಲ್ಲಿ ಸರ್ಕಾರದಿಂದ ಈದ್ ಮುಬಾರಕ್ ಗಿಫ್ಟ್ ಹಂಚಿಕೆ?

ಸುದರ್ಶನ್ ನ್ಯೂಸ್‌ನ ಸಂಪಾದಕ ಸುರೇಶ್ ಚವಾಂಕೆಯವರು ಕಳೆದ ಭಾನುವಾರ ಟ್ವೀಟ್ ಮಾಡಿ “ತೆಲಗಾಂಣ ಸರ್ಕಾರ ಈದ್ ಹಬ್ಬಕ್ಕಾಗಿ ಮುಸ್ಲಿಮರಿಗೆ ಗಿಫ್ಟ್ ನೀಡುತ್ತಿದೆ. ಆದರೆ ಹಿಂದೂಗಳ ಹಬ್ಬವಾದ ರಾಮನವಮಿ, ಯುಗಾದಿ, ಹನುಮಾನ್ ಜಯಂತಿಯ ದಿನ ಹಿಂದೂಗಳನ್ನು ಮನೆಯಿಂದ ಹೊರಗೆ ಬರಲು ಸಹ ಬಿಡಲಿಲ್ಲ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಗಾಳಿಸುದ್ದಿಗಳು ಹಬ್ಬಿದಾಗ ತೆಲಂಗಾಣ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿ “ಕೊರೊನಾ ಕಾರಣದಿಂದ ಈ ವರ್ಷ ರಂಜಾನ್ ಹಬ್ಬಕ್ಕೆ ಸರ್ಕಾರದಿಂದ ಯಾವುದೇ ಗಿಫ್ಟ್ ನೀಡುತ್ತಿಲ್ಲ” ಎಂದು ಸ್ಪಷ್ಟೀಕರಣ ನೀಡಿದೆ.

ಹಾಗಾದರೆ ಸುರೇಶ್ ಚವಾಂಕೆಯವರು ಮಾಡಿರುವ ಟ್ವೀಟ್‌ನಲ್ಲಿ ಫೋಟೊ ಯಾವುದೆಂದು ಹುಡುಕಿದಾಗ ಅದು 5 ವರ್ಷದ ಹಳೆಯ ಫೋಟೊ ಎಂದು ತಿಳಿದುಬಂದಿದೆ. ಜೊತೆಗೆ ಅವರು ಹೇಳಿದಂತೆ ಕೇವಲ ಮುಸ್ಲಿಮರ ಹಬ್ಬಕ್ಕೆ ಮಾತ್ರ ಸರ್ಕಾರ ಗಿಫ್ಟ್ಗಳನ್ನು ನೀಡದೇ ಹಿಂದೂಗಳ ಭತುಕಮ್ಮ ಹಬ್ಬ ಮತ್ತು ಕ್ರಿಶ್ಚಿಯನ್ನರ ಕ್ರಿಸ್‌ಮಸ್ ಹಬ್ಬಕ್ಕೂ ಸರ್ಕಾರ ಗಿಫ್ಟ್ಗಳನ್ನು ನೀಡಿದೆ. ಈ ಕೆಳಗಿನ ಪತ್ರಿಕಾ ವರದಿಗಳನ್ನು ಗಮನಿಸಿ.

3 ಗಿಲ್ಗಿಟ್-ಬಾಲ್ಟಿಸ್ತಾನ್ ಸ್ವತಂತ್ರ ಅಫಿಶಿಯಲ್ ಟ್ವಿಟ್ಟರ್ ಅಕೌಂಟ್ ಹೊಂದಿದೆಯೇ?

ಮೇ 4 ರಂದು ವಿದೇಶಾಂಗ ಸಚಿವಾಲಯ (ಎಂಎಚ್‌ಎ) ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ “ಭಾರತದ ಭೂಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನ ಆಕ್ರಮಿತ ಪ್ರದೇಶಗಳನ್ನು” ಖಾಲಿ ಮಾಡುವಂತೆ ಪಾಕಿಸ್ತಾನವನ್ನು ಕೇಳಿದೆ. ಮೇ 12 ರಂದು, ಗಿಲ್ಗಿಟ್-ಬಾಲ್ಟಿಸ್ತಾನ್, ಲಡಾಖ್ ಕೇಂದ್ರಾಡಳಿತ ಪ್ರದೇಶದ ಅಧಿಕೃತ ಖಾತೆಯನ್ನು ಸರ್ಕಾರವು ಸ್ಥಾಪಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ನಡೆದಿತ್ತು.

 

ಮೋದಿ ಸರ್ಕಾರವೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶವನ್ನು ವಾಪಸ್ ಪಡೆದಿದೆ ಎಂದೆಲ್ಲಾ ಸಂಭ್ರಮಿಸಲಾಗಿತ್ತು.

ಪಿಐಬಿ (ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್ ಚೆಕ್ ವಿಂಗ್) ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ. ಅಲ್ಲದೇ ವಿದೇಶಾಂಗ ಸಚಿವಾಲಯವು ಕೂಡ ಸ್ಪಷ್ಟನೆ ನೀಡಿದ್ದು, ಲಡಾಖ್ ಪ್ರದೇಶವು ಕೇವಲ 2 ಅಧಿಕೃತ ಟ್ವಿಟರ್ ಹ್ಯಾಂಡಲ್‌ಗಳನ್ನು ಹೊಂದಿದೆ, ಅಂದರೆ @DIPR_Leh & @ InformationDep4. ಗಿಲ್ಗಿಟ್-ಬಾಲ್ಟಿಸ್ತಾನ್ ಖಾತೆಯೂ ನಕಲಿ ಖಾತೆಯಾಗಿದೆ ಎಂದಿದೆ.

4. ಈ ವೈರಲ್ ಫೋಟೊ ವಲಸೆ ಕಾರ್ಮಿಕರದ್ದಲ್ಲ. ಮತ್ತೆ?

ಲಾಕ್‌ಡೌನ್ ಘೋಷಣೆಯಾದಾಗಿನಿಂದ ವಲಸೆ ಕಾರ್ಮಿಕರು ಬೀದಿಗೆ ಬಿದ್ದಿದ್ದು, ನೂರಾರು, ಸಾವಿರಾರು ಕಿ.ಮೀ ಗಟ್ಟಲೇ ನಡೆದು ಸಾಗುತ್ತಿರುವ ಮನಕಲಕುವ ಫೋಟೊಗಳು ಎಲ್ಲೆಡೆ ವೈರಲ್ ಆಗಿವೆ. ಅದರಲ್ಲಿಯೂ ರೈಲು ಸೇವೆ ಪ್ರಾರಂಭಿಸುತ್ತೇವೆ ಎಂದು ಹೇಳಿ ಸಮರ್ಪಕ ವ್ಯವಸ್ಥೆ ಮಾಡದೇ ಹೋದಾಗ ಮತ್ತಷ್ಟು ಕಾರ್ಮಿಕರು ನಡೆದು ಹೊರಟಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ತುಂಬಿ ಹೋಗಿವೆ. ಈ ನಡಿಗೆಯಲ್ಲಿ ಬಹಳಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ ಕೂಡ.

ಅದೇ ರೀತಿಯಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ನಡೆಯುತ್ತಿರುವ ಚಿತ್ರ ಎಲ್ಲರ ಮನಕರಗಿಸಿತ್ತು. ಇದು ವಲಸೆ ಕಾರ್ಮಿಕರ ಸ್ಥಿತಿಗತಿಯೆಂದು ಸಾವಿರಾರು ಜನ ಅದನ್ನು ಹಂಚಿಕೊಂಡಿದ್ದರು.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ವಲಸೆ ಕಾರ್ಮಿಕರ ಫೋಟೊ ಅಲ್ಲ ಎಂದು ತಿಳಿದುಬಂದಿದೆ. ಅದು 2017ರ ಚಿತ್ರವಾಗಿದ್ದು ಬಾಂಗ್ಲಾದೇಶದ ರೋಹಿಂಗ್ಯ ಮುಸ್ಲಿಂ ನಿರಾಶ್ರಿತರ ಫೋಟೊ ಆಗಿದೆ. ರೋಹಿಂಗ್ಯಾ ಮುಸ್ಲಿಂ ಒಸಿಯೂರ್ ರೆಹಮಾನ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯು ತನ್ನ ತಾಯಿಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ಹೊರಟಾಗಿನ ಫೋಟೊ ಇದಾಗಿದೆ. ಈ ಕುರಿತ ವಿಡಿಯೋ ಸಾಕ್ಷ್ಯ ಇಲ್ಲಿದೆ.

#টেকনাফ সীমান্তের হোয়াইক্যং লম্বাবিল সীমান্ত দিয়ে মা'কে কাঁধে নিয়ে বাংলাদেশে প্রবেশ করা এক রোহিঙ্গার কান্না। #লম্বাবিল সীমান্ত থেকে সরওয়ার আলম শাহীন।

Posted by UkhiyaNews.Com on Wednesday, September 6, 2017

5. ಡಿಎಂಕೆ ಮುಖಂಡ ವೈದ್ಯೆಯೊಬ್ಬಳಿಗೆ ಕಾಲಿನಿಂದ ಒದ್ದರೆ? ಈ ಸುದ್ದಿ ನಿಜವಲ್ಲ..

ತಮಿಳುನಾಡಿನ ಡಿಎಂಕೆ ಮುಖಂಡ ವೈದ್ಯೆಯೊಬ್ಬಳಿಗೆ ಕಾಲಿನಿಂದ ಒದ್ದು ಅವಮಾನಿಸಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ಆ ವಿಡಿಯೋದಲ್ಲಿ ಬಿಳಿಅಂಗಿ ಮತ್ತು ಬಿಳಿ ಪಂಚೆ ತೊಟ್ಟ ವ್ಯಕ್ತಿಯೊಬ್ಬ ಮಹಿಳೆಗೆ ಒದೆಯುತ್ತಿರುವ ದೃಶ್ಯಗಳನ್ನು ವೈದ್ಯೆಯ ಮೇಲೆ ಹಲ್ಲೆ ಎಂದು ಸುದ್ದಿ ಹರಡಲಾಗಿದೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಹಲ್ಲೆನಡೆಸಿದ ವ್ಯಕ್ತಿ ಡಿಎಂಕೆ ಪಕ್ಷದ ಕೌನ್ಸಿಲರ್ ಸೆಲ್ವಕುಮಾರ್ ಎಂದು ತಿಳಿದುಬಂದಿದೆ. ಆದರೆ ಹಲ್ಲೆಗೊಳಗಾದ ಮಹಿಳೆ ವೈದ್ಯಳಲ್ಲ ಬದಲಿಗೆ ಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಹೊಂದಿರುವ ಬ್ಯೂಟಿಪಾರ್ಲರ್ ನಡೆಸುವ ಮಹಿಳೆಯಾಗಿದ್ದಾರೆ. ಅಲ್ಲದೇ ಇದು ಎರಡು ವರ್ಷಗಳಷ್ಟು ಹಿಂದಿನ ಹಳೆಯ ವಿಡಿಯೋವಾಗಿದೆ. ಇವರಿರ್ವರ ನಡುವೆ ವಯಕ್ತಿಕ ಹಣಕಾಸಿನ ವಿಷಯಕ್ಕೆ ಜಗಳವಿದ್ದ ಕಾರಣ ಹಲ್ಲೆ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ಮತ್ತು ಎಎನ್‌ಐ 2018ರಲ್ಲಿಯೇ ವರದಿ ಮಾಡಿವೆ.

ಇವಿಷ್ಟು ಈ ವಾರದವು. ನಾವು ಮೋಸ ಹೋಗಬಾರದು. ಯಾವುದೇ ಸುದ್ದಿ ಹಂಚುವ ಮುನ್ನ ಪರಿಶೀಲಿಸಿ ಹಂಚಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ಗೌರಿ.ಕಾಂ ನಲ್ಲಿ ಬರುತ್ತಿರುವ ಸುದ್ದಿಗಳು ಎಲ್ಲವೂ ನೂರಕ್ಕೆ 98 ಭಾಗ BJP ಪಕ್ಷ ದವರು ವಿರುದ್ಧ ಆರೋಪಗಳನ್ನು ಮಾಡುತ್ತಿದಿರಿ ಇದು ಸರಿ ಯಗಿ ಇಲ್ಲ ನೀವು ನಿಮ್ಮ ನಡುವಳಿಕೆ ಬದಲಾಯಿಸ ಬೇಕು ಇಲ್ಲ ಅಂದ್ರೆ ನಿಮ್ಮ ಭವಿಷ್ಯ ನೋಡಲು ಯಾರು ಕಾಣಿಸಲಿಲ್ಲ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...