Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

ಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

- Advertisement -
- Advertisement -

ಸುಳ್ಳು ಸುದ್ದಿಗಳ ಹರಡವಿಕೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲಿಯೂ ಕೊರೊನಾ ಸೋಂಕಿನ ನಂತರವಂತು ಅವುಗಳ ಸಂಖ್ಯೆ ದ್ವಿಗುಣವಾಗಿದೆ. ಈ ನಿಟ್ಟಿನಲ್ಲಿ ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ವಾಸ್ತವಾಂಶಗಳು ಇಲ್ಲಿವೆ.

  1. ಐಸಿಎಂಆರ್ ನೀಡಿದ ಪ್ರಮುಖ ಮುನ್ನೆಚ್ಚರಿಕೆಗಳು ನಿಜವೇ?

ಐಸಿಎಂಆರ್ ನವದೆಹಲಿ ಕೊರೊನಾ ತಡೆಯಲು ನೀಡಿದ ಪ್ರಮುಖ ಮುನ್ನೆಚ್ಚರಿಕೆಗಳು ಎಂಬ ಬರಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತು ಐಸಿಎಂಆರ್ ನಿರ್ದೇಶಕರಾದ ಡಾ.ರಜನಿಕಾಂತ್‌ರವರ ಸ್ಪಷ್ಟನೆ ನೀಡಿ ವೈರಲ್ ಬರಹ ಸಂಪೂರ್ಣ ಸುಳ್ಳು ಎಂದಿದ್ದಾರೆ. ನಾವು ಆ ರೀತಿಯ ಯಾವುದೇ ಮುನ್ನೆಚ್ಚರಿಕೆಗಳನ್ನು ನೀಡಿಲ್ಲ. ನಮ್ಮ ಪತ್ರಿಕಾ ಹೇಳಿಕೆಗಳು ವೆಬ್‌ಸೈಟ್‌ನಲ್ಲಿ ಮೀಡಿಯಾ ವಿಭಾಗದಲ್ಲಿದ್ದು ಅವು ಮಾತ್ರ ಸತ್ಯ ಎಂದು ಸ್ಪಷ್ಟಪಡಿಸಿದ್ದಾರೆ.

2 ಕೊರೊನಾ ಕಾಲದಲ್ಲಿಯೂ ತೆಲಂಗಾಣದಲ್ಲಿ ಸರ್ಕಾರದಿಂದ ಈದ್ ಮುಬಾರಕ್ ಗಿಫ್ಟ್ ಹಂಚಿಕೆ?

ಸುದರ್ಶನ್ ನ್ಯೂಸ್‌ನ ಸಂಪಾದಕ ಸುರೇಶ್ ಚವಾಂಕೆಯವರು ಕಳೆದ ಭಾನುವಾರ ಟ್ವೀಟ್ ಮಾಡಿ “ತೆಲಗಾಂಣ ಸರ್ಕಾರ ಈದ್ ಹಬ್ಬಕ್ಕಾಗಿ ಮುಸ್ಲಿಮರಿಗೆ ಗಿಫ್ಟ್ ನೀಡುತ್ತಿದೆ. ಆದರೆ ಹಿಂದೂಗಳ ಹಬ್ಬವಾದ ರಾಮನವಮಿ, ಯುಗಾದಿ, ಹನುಮಾನ್ ಜಯಂತಿಯ ದಿನ ಹಿಂದೂಗಳನ್ನು ಮನೆಯಿಂದ ಹೊರಗೆ ಬರಲು ಸಹ ಬಿಡಲಿಲ್ಲ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಗಾಳಿಸುದ್ದಿಗಳು ಹಬ್ಬಿದಾಗ ತೆಲಂಗಾಣ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿ “ಕೊರೊನಾ ಕಾರಣದಿಂದ ಈ ವರ್ಷ ರಂಜಾನ್ ಹಬ್ಬಕ್ಕೆ ಸರ್ಕಾರದಿಂದ ಯಾವುದೇ ಗಿಫ್ಟ್ ನೀಡುತ್ತಿಲ್ಲ” ಎಂದು ಸ್ಪಷ್ಟೀಕರಣ ನೀಡಿದೆ.

ಹಾಗಾದರೆ ಸುರೇಶ್ ಚವಾಂಕೆಯವರು ಮಾಡಿರುವ ಟ್ವೀಟ್‌ನಲ್ಲಿ ಫೋಟೊ ಯಾವುದೆಂದು ಹುಡುಕಿದಾಗ ಅದು 5 ವರ್ಷದ ಹಳೆಯ ಫೋಟೊ ಎಂದು ತಿಳಿದುಬಂದಿದೆ. ಜೊತೆಗೆ ಅವರು ಹೇಳಿದಂತೆ ಕೇವಲ ಮುಸ್ಲಿಮರ ಹಬ್ಬಕ್ಕೆ ಮಾತ್ರ ಸರ್ಕಾರ ಗಿಫ್ಟ್ಗಳನ್ನು ನೀಡದೇ ಹಿಂದೂಗಳ ಭತುಕಮ್ಮ ಹಬ್ಬ ಮತ್ತು ಕ್ರಿಶ್ಚಿಯನ್ನರ ಕ್ರಿಸ್‌ಮಸ್ ಹಬ್ಬಕ್ಕೂ ಸರ್ಕಾರ ಗಿಫ್ಟ್ಗಳನ್ನು ನೀಡಿದೆ. ಈ ಕೆಳಗಿನ ಪತ್ರಿಕಾ ವರದಿಗಳನ್ನು ಗಮನಿಸಿ.

3 ಗಿಲ್ಗಿಟ್-ಬಾಲ್ಟಿಸ್ತಾನ್ ಸ್ವತಂತ್ರ ಅಫಿಶಿಯಲ್ ಟ್ವಿಟ್ಟರ್ ಅಕೌಂಟ್ ಹೊಂದಿದೆಯೇ?

ಮೇ 4 ರಂದು ವಿದೇಶಾಂಗ ಸಚಿವಾಲಯ (ಎಂಎಚ್‌ಎ) ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ “ಭಾರತದ ಭೂಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನ ಆಕ್ರಮಿತ ಪ್ರದೇಶಗಳನ್ನು” ಖಾಲಿ ಮಾಡುವಂತೆ ಪಾಕಿಸ್ತಾನವನ್ನು ಕೇಳಿದೆ. ಮೇ 12 ರಂದು, ಗಿಲ್ಗಿಟ್-ಬಾಲ್ಟಿಸ್ತಾನ್, ಲಡಾಖ್ ಕೇಂದ್ರಾಡಳಿತ ಪ್ರದೇಶದ ಅಧಿಕೃತ ಖಾತೆಯನ್ನು ಸರ್ಕಾರವು ಸ್ಥಾಪಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ನಡೆದಿತ್ತು.

 

ಮೋದಿ ಸರ್ಕಾರವೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶವನ್ನು ವಾಪಸ್ ಪಡೆದಿದೆ ಎಂದೆಲ್ಲಾ ಸಂಭ್ರಮಿಸಲಾಗಿತ್ತು.

ಪಿಐಬಿ (ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್ ಚೆಕ್ ವಿಂಗ್) ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ. ಅಲ್ಲದೇ ವಿದೇಶಾಂಗ ಸಚಿವಾಲಯವು ಕೂಡ ಸ್ಪಷ್ಟನೆ ನೀಡಿದ್ದು, ಲಡಾಖ್ ಪ್ರದೇಶವು ಕೇವಲ 2 ಅಧಿಕೃತ ಟ್ವಿಟರ್ ಹ್ಯಾಂಡಲ್‌ಗಳನ್ನು ಹೊಂದಿದೆ, ಅಂದರೆ @DIPR_Leh & @ InformationDep4. ಗಿಲ್ಗಿಟ್-ಬಾಲ್ಟಿಸ್ತಾನ್ ಖಾತೆಯೂ ನಕಲಿ ಖಾತೆಯಾಗಿದೆ ಎಂದಿದೆ.

4. ಈ ವೈರಲ್ ಫೋಟೊ ವಲಸೆ ಕಾರ್ಮಿಕರದ್ದಲ್ಲ. ಮತ್ತೆ?

ಲಾಕ್‌ಡೌನ್ ಘೋಷಣೆಯಾದಾಗಿನಿಂದ ವಲಸೆ ಕಾರ್ಮಿಕರು ಬೀದಿಗೆ ಬಿದ್ದಿದ್ದು, ನೂರಾರು, ಸಾವಿರಾರು ಕಿ.ಮೀ ಗಟ್ಟಲೇ ನಡೆದು ಸಾಗುತ್ತಿರುವ ಮನಕಲಕುವ ಫೋಟೊಗಳು ಎಲ್ಲೆಡೆ ವೈರಲ್ ಆಗಿವೆ. ಅದರಲ್ಲಿಯೂ ರೈಲು ಸೇವೆ ಪ್ರಾರಂಭಿಸುತ್ತೇವೆ ಎಂದು ಹೇಳಿ ಸಮರ್ಪಕ ವ್ಯವಸ್ಥೆ ಮಾಡದೇ ಹೋದಾಗ ಮತ್ತಷ್ಟು ಕಾರ್ಮಿಕರು ನಡೆದು ಹೊರಟಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ತುಂಬಿ ಹೋಗಿವೆ. ಈ ನಡಿಗೆಯಲ್ಲಿ ಬಹಳಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ ಕೂಡ.

ಅದೇ ರೀತಿಯಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ನಡೆಯುತ್ತಿರುವ ಚಿತ್ರ ಎಲ್ಲರ ಮನಕರಗಿಸಿತ್ತು. ಇದು ವಲಸೆ ಕಾರ್ಮಿಕರ ಸ್ಥಿತಿಗತಿಯೆಂದು ಸಾವಿರಾರು ಜನ ಅದನ್ನು ಹಂಚಿಕೊಂಡಿದ್ದರು.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ವಲಸೆ ಕಾರ್ಮಿಕರ ಫೋಟೊ ಅಲ್ಲ ಎಂದು ತಿಳಿದುಬಂದಿದೆ. ಅದು 2017ರ ಚಿತ್ರವಾಗಿದ್ದು ಬಾಂಗ್ಲಾದೇಶದ ರೋಹಿಂಗ್ಯ ಮುಸ್ಲಿಂ ನಿರಾಶ್ರಿತರ ಫೋಟೊ ಆಗಿದೆ. ರೋಹಿಂಗ್ಯಾ ಮುಸ್ಲಿಂ ಒಸಿಯೂರ್ ರೆಹಮಾನ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯು ತನ್ನ ತಾಯಿಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ಹೊರಟಾಗಿನ ಫೋಟೊ ಇದಾಗಿದೆ. ಈ ಕುರಿತ ವಿಡಿಯೋ ಸಾಕ್ಷ್ಯ ಇಲ್ಲಿದೆ.

#টেকনাফ সীমান্তের হোয়াইক্যং লম্বাবিল সীমান্ত দিয়ে মা'কে কাঁধে নিয়ে বাংলাদেশে প্রবেশ করা এক রোহিঙ্গার কান্না। #লম্বাবিল সীমান্ত থেকে সরওয়ার আলম শাহীন।

Posted by UkhiyaNews.Com on Wednesday, September 6, 2017

5. ಡಿಎಂಕೆ ಮುಖಂಡ ವೈದ್ಯೆಯೊಬ್ಬಳಿಗೆ ಕಾಲಿನಿಂದ ಒದ್ದರೆ? ಈ ಸುದ್ದಿ ನಿಜವಲ್ಲ..

ತಮಿಳುನಾಡಿನ ಡಿಎಂಕೆ ಮುಖಂಡ ವೈದ್ಯೆಯೊಬ್ಬಳಿಗೆ ಕಾಲಿನಿಂದ ಒದ್ದು ಅವಮಾನಿಸಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ಆ ವಿಡಿಯೋದಲ್ಲಿ ಬಿಳಿಅಂಗಿ ಮತ್ತು ಬಿಳಿ ಪಂಚೆ ತೊಟ್ಟ ವ್ಯಕ್ತಿಯೊಬ್ಬ ಮಹಿಳೆಗೆ ಒದೆಯುತ್ತಿರುವ ದೃಶ್ಯಗಳನ್ನು ವೈದ್ಯೆಯ ಮೇಲೆ ಹಲ್ಲೆ ಎಂದು ಸುದ್ದಿ ಹರಡಲಾಗಿದೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಹಲ್ಲೆನಡೆಸಿದ ವ್ಯಕ್ತಿ ಡಿಎಂಕೆ ಪಕ್ಷದ ಕೌನ್ಸಿಲರ್ ಸೆಲ್ವಕುಮಾರ್ ಎಂದು ತಿಳಿದುಬಂದಿದೆ. ಆದರೆ ಹಲ್ಲೆಗೊಳಗಾದ ಮಹಿಳೆ ವೈದ್ಯಳಲ್ಲ ಬದಲಿಗೆ ಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಹೊಂದಿರುವ ಬ್ಯೂಟಿಪಾರ್ಲರ್ ನಡೆಸುವ ಮಹಿಳೆಯಾಗಿದ್ದಾರೆ. ಅಲ್ಲದೇ ಇದು ಎರಡು ವರ್ಷಗಳಷ್ಟು ಹಿಂದಿನ ಹಳೆಯ ವಿಡಿಯೋವಾಗಿದೆ. ಇವರಿರ್ವರ ನಡುವೆ ವಯಕ್ತಿಕ ಹಣಕಾಸಿನ ವಿಷಯಕ್ಕೆ ಜಗಳವಿದ್ದ ಕಾರಣ ಹಲ್ಲೆ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ಮತ್ತು ಎಎನ್‌ಐ 2018ರಲ್ಲಿಯೇ ವರದಿ ಮಾಡಿವೆ.

ಇವಿಷ್ಟು ಈ ವಾರದವು. ನಾವು ಮೋಸ ಹೋಗಬಾರದು. ಯಾವುದೇ ಸುದ್ದಿ ಹಂಚುವ ಮುನ್ನ ಪರಿಶೀಲಿಸಿ ಹಂಚಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ಗೌರಿ.ಕಾಂ ನಲ್ಲಿ ಬರುತ್ತಿರುವ ಸುದ್ದಿಗಳು ಎಲ್ಲವೂ ನೂರಕ್ಕೆ 98 ಭಾಗ BJP ಪಕ್ಷ ದವರು ವಿರುದ್ಧ ಆರೋಪಗಳನ್ನು ಮಾಡುತ್ತಿದಿರಿ ಇದು ಸರಿ ಯಗಿ ಇಲ್ಲ ನೀವು ನಿಮ್ಮ ನಡುವಳಿಕೆ ಬದಲಾಯಿಸ ಬೇಕು ಇಲ್ಲ ಅಂದ್ರೆ ನಿಮ್ಮ ಭವಿಷ್ಯ ನೋಡಲು ಯಾರು ಕಾಣಿಸಲಿಲ್ಲ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....