Homeಮುಖಪುಟಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ...

ಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ…

- Advertisement -
- Advertisement -

1. ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!
ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಮಾಜಿ ಸಿಜೆಐ ರಂಜನ್ ಗೊಗೊಯ್!
“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


2. ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!ಹಳೆಯದೇನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ. ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ. ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


3. ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆಗಳ ವಿವರ

2020-21ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದು, ಪಿಯು ಪರೀಕ್ಷೆಗಳು ಮೇ. 24 ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, “ಈ ಹಿಂದೆ ಶಿಕ್ಷಣ ಇಲಾಖೆಯು ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೆಯೇ ನೀಟ್, ಜೆಇಇ ಗಳಂತಹ ಮುಂದಿನ ತರಗತಿಗಳ ಪ್ರವೇಶದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

4. 2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ. 2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

5. ಸಂಸತ್ತಿನಲ್ಲಿ ಪ್ರಜ್ವಲಿಸಿದ ಮಹುವಾ ಮೊಯಿತ್ರಾ ರವರ ಭಾಷಣದ ಕನ್ನಡ ಅನುವಾದ

17ನೇ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ಹಲವು ಭಾಷಣಗಳು ದೇಶದ ಗಮನ ಸೆಳೆದಿವೆ. ಆಡಳಿತ ಕೂಟದ ಬಹುತೇಕರ ಭಾಷಣಗಳು ವಾಸ್ತವವನ್ನು ಬಿಚ್ಚಿಡಲಿಲ್ಲ. ಪಶ್ಚಿಮ ಬಂಗಾಳದ ಕೃಷ್ಣನಗರದ ಟಿಎಂಸಿಯ ಸಂಸದೆ ಮಹುವಾ ಮೊಯಿತ್ರ ( Mahua Moitra ) ಅವರ ಭಾಷಣ ದೇಶದ ವಾಸ್ತವ ಪರಿಸ್ಥಿತಿಯನ್ನು ತೆರದಿಟ್ಟಿದ್ದಲ್ಲದೆ, ಎಲ್ಲಡೆ ವೈರಲ್ ಆಗಿದೆ. ದೇಶದ ಹಲವು ವಿಶ್ವಾಸಾರ್ಹ ಮೀಡಿಯಾಗಳು ಮಹುವಾರ ಭಾಷಣವನ್ನು ಅರ್ಥಪೂರ್ಣ ಎಂದು ಬಣ್ಣಿಸಿವೆ. ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ಮಹುನಾರ ಭಾಷಣವನ್ನು ‘ವರ್ಷದ ಭಾಷಣ’ ( Speech of the Year) ಎಂದು ಗುರುತಿಸಿದೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

6. ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಮುಖೇಶ್ ಅಂಬಾನಿಯವರ ನಿವ್ವಳ ಮೌಲ್ಯವು 64.5 ಬಿಲಿಯನ್ ಡಾಲರ್‌ಗೆ ಏರಿದೆ. ವಿಶ್ವದ ಅಗ್ರ 10 ಶ್ರೀಮಂತ ಜನರಲ್ಲಿ ಏಷ್ಯಾದ ‌ಏಕೈಕ ಉದ್ಯಮಿ ಎಂಬ ಹೆಗ್ಗಳಿಕೆಗೆ ಅವರದಾಗಿದೆ. ಅವರು ಒರಾಕಲ್ ಕಾರ್ಪ್‌ನ ಲ್ಯಾರಿ ಎಲಿಸನ್ ಮತ್ತು ಶ್ರೀಮಂತ ಮಹಿಳೆ ಫ್ರಾನ್ಸ್‌ನ ಫ್ರಾಂಕೋಯಿಸ್ ಬೆಟೆನ್ಕೋರ್ಟ್ ಮೇಯರ್ಸ್ ಅವರನ್ನು ಹಿಂದಿಕ್ಕಿ 9 ನೇ ಸ್ಥಾನವನ್ನು ತಲುಪಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

7. ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಪಾರ್ಕಿಂಗ್‌ಗೆ

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

8. ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಚೆಂಡಿನೊಂದಿಗೆ ಆಟವಾಡಲು ಮಿದುಳು/ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ: ನಟ ಚೇತನ್

“ಚೆಂಡಿನೊಂದಿಗೆ ಆಟವಾಡಲು ಮಿದುಳು ಅಥವಾ ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ” ಎಂದು ಕನ್ನಡ ಚಲನಚಿತ್ರ ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ. ರೈತರನ್ನು ಬೆಂಬಲಿಸಿದ ಅಂತರಾಷ್ಟ್ರೀಯ ಗಣ್ಯರ ವಿರುದ್ಧ ಭಾರತೀಯ ಕ್ರಿಕೆಟಿಗರು ನಡೆಸಿದ ಟ್ವೀಟ್ ದಾಳಿಯನ್ನು ಉಲ್ಲೇಖಿಸದೇ ಕ್ರಿಕರೆಟಿಗರನ್ನು ನಟ ಚೇತನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

9. ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತ್ರಿವರ್ಣ

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

10. ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಕೃಷಿ ಕಾಯ್ದೆಗಳ ಪರ ಪ್ರಚಾರಕ್ಕಾಗಿ ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಒಕ್ಕೂಟ ಸರ್ಕಾರದ ಕೃಷಿ ಸಚಿವ ಶುಕ್ರವಾರ ಸಂಸತ್ತಿನಲ್ಲಿ ಸಲ್ಲಿಸಿದ ವಿವರಣೆಯ ಪ್ರಕಾರ, “ಮಂತ್ರಿಗಳು ಮತ್ತು ಇತರರ ಪತ್ರಿಕಾಗೋಷ್ಠಿಗಳು ಮತ್ತು ಮಾಹಿತಿ ಪ್ರಸಾರವನ್ನು ಹೊರತುಪಡಿಸಿ, ವಿವಿಧ ಸರ್ಕಾರಿ ಇಲಾಖೆಗಳು ಕಳೆದ 4-5 ತಿಂಗಳಿನಲ್ಲಿ ಜಾಹೀರಾತು ನೀಡುವ ಸಲುವಾಗಿ ಬಹುಪಾಲು ಮೊತ್ತವನ್ನು ಖರ್ಚು ಮಾಡಿದೆ. ಐಬಿ ಸಚಿವಾಲಯದ ಅಡಿಯಲ್ಲಿ ಗರಿಷ್ಟ 7.25 ಕೋಟಿ ಹಣವನ್ನು ಖರ್ಚು ಮಾಡಲಾಗಿದೆ” ಎಂದು ತಿಳಿದುಬಂದಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...