Homeಮುಖಪುಟಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ...

ಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ…

- Advertisement -
- Advertisement -

1. ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!
ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಮಾಜಿ ಸಿಜೆಐ ರಂಜನ್ ಗೊಗೊಯ್!
“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


2. ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!ಹಳೆಯದೇನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ. ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ. ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


3. ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆಗಳ ವಿವರ

2020-21ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದು, ಪಿಯು ಪರೀಕ್ಷೆಗಳು ಮೇ. 24 ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, “ಈ ಹಿಂದೆ ಶಿಕ್ಷಣ ಇಲಾಖೆಯು ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೆಯೇ ನೀಟ್, ಜೆಇಇ ಗಳಂತಹ ಮುಂದಿನ ತರಗತಿಗಳ ಪ್ರವೇಶದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

4. 2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ. 2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

5. ಸಂಸತ್ತಿನಲ್ಲಿ ಪ್ರಜ್ವಲಿಸಿದ ಮಹುವಾ ಮೊಯಿತ್ರಾ ರವರ ಭಾಷಣದ ಕನ್ನಡ ಅನುವಾದ

17ನೇ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ಹಲವು ಭಾಷಣಗಳು ದೇಶದ ಗಮನ ಸೆಳೆದಿವೆ. ಆಡಳಿತ ಕೂಟದ ಬಹುತೇಕರ ಭಾಷಣಗಳು ವಾಸ್ತವವನ್ನು ಬಿಚ್ಚಿಡಲಿಲ್ಲ. ಪಶ್ಚಿಮ ಬಂಗಾಳದ ಕೃಷ್ಣನಗರದ ಟಿಎಂಸಿಯ ಸಂಸದೆ ಮಹುವಾ ಮೊಯಿತ್ರ ( Mahua Moitra ) ಅವರ ಭಾಷಣ ದೇಶದ ವಾಸ್ತವ ಪರಿಸ್ಥಿತಿಯನ್ನು ತೆರದಿಟ್ಟಿದ್ದಲ್ಲದೆ, ಎಲ್ಲಡೆ ವೈರಲ್ ಆಗಿದೆ. ದೇಶದ ಹಲವು ವಿಶ್ವಾಸಾರ್ಹ ಮೀಡಿಯಾಗಳು ಮಹುವಾರ ಭಾಷಣವನ್ನು ಅರ್ಥಪೂರ್ಣ ಎಂದು ಬಣ್ಣಿಸಿವೆ. ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ಮಹುನಾರ ಭಾಷಣವನ್ನು ‘ವರ್ಷದ ಭಾಷಣ’ ( Speech of the Year) ಎಂದು ಗುರುತಿಸಿದೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

6. ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಮುಖೇಶ್ ಅಂಬಾನಿಯವರ ನಿವ್ವಳ ಮೌಲ್ಯವು 64.5 ಬಿಲಿಯನ್ ಡಾಲರ್‌ಗೆ ಏರಿದೆ. ವಿಶ್ವದ ಅಗ್ರ 10 ಶ್ರೀಮಂತ ಜನರಲ್ಲಿ ಏಷ್ಯಾದ ‌ಏಕೈಕ ಉದ್ಯಮಿ ಎಂಬ ಹೆಗ್ಗಳಿಕೆಗೆ ಅವರದಾಗಿದೆ. ಅವರು ಒರಾಕಲ್ ಕಾರ್ಪ್‌ನ ಲ್ಯಾರಿ ಎಲಿಸನ್ ಮತ್ತು ಶ್ರೀಮಂತ ಮಹಿಳೆ ಫ್ರಾನ್ಸ್‌ನ ಫ್ರಾಂಕೋಯಿಸ್ ಬೆಟೆನ್ಕೋರ್ಟ್ ಮೇಯರ್ಸ್ ಅವರನ್ನು ಹಿಂದಿಕ್ಕಿ 9 ನೇ ಸ್ಥಾನವನ್ನು ತಲುಪಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

7. ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಪಾರ್ಕಿಂಗ್‌ಗೆ

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

8. ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಚೆಂಡಿನೊಂದಿಗೆ ಆಟವಾಡಲು ಮಿದುಳು/ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ: ನಟ ಚೇತನ್

“ಚೆಂಡಿನೊಂದಿಗೆ ಆಟವಾಡಲು ಮಿದುಳು ಅಥವಾ ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ” ಎಂದು ಕನ್ನಡ ಚಲನಚಿತ್ರ ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ. ರೈತರನ್ನು ಬೆಂಬಲಿಸಿದ ಅಂತರಾಷ್ಟ್ರೀಯ ಗಣ್ಯರ ವಿರುದ್ಧ ಭಾರತೀಯ ಕ್ರಿಕೆಟಿಗರು ನಡೆಸಿದ ಟ್ವೀಟ್ ದಾಳಿಯನ್ನು ಉಲ್ಲೇಖಿಸದೇ ಕ್ರಿಕರೆಟಿಗರನ್ನು ನಟ ಚೇತನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

9. ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತ್ರಿವರ್ಣ

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

10. ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಕೃಷಿ ಕಾಯ್ದೆಗಳ ಪರ ಪ್ರಚಾರಕ್ಕಾಗಿ ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಒಕ್ಕೂಟ ಸರ್ಕಾರದ ಕೃಷಿ ಸಚಿವ ಶುಕ್ರವಾರ ಸಂಸತ್ತಿನಲ್ಲಿ ಸಲ್ಲಿಸಿದ ವಿವರಣೆಯ ಪ್ರಕಾರ, “ಮಂತ್ರಿಗಳು ಮತ್ತು ಇತರರ ಪತ್ರಿಕಾಗೋಷ್ಠಿಗಳು ಮತ್ತು ಮಾಹಿತಿ ಪ್ರಸಾರವನ್ನು ಹೊರತುಪಡಿಸಿ, ವಿವಿಧ ಸರ್ಕಾರಿ ಇಲಾಖೆಗಳು ಕಳೆದ 4-5 ತಿಂಗಳಿನಲ್ಲಿ ಜಾಹೀರಾತು ನೀಡುವ ಸಲುವಾಗಿ ಬಹುಪಾಲು ಮೊತ್ತವನ್ನು ಖರ್ಚು ಮಾಡಿದೆ. ಐಬಿ ಸಚಿವಾಲಯದ ಅಡಿಯಲ್ಲಿ ಗರಿಷ್ಟ 7.25 ಕೋಟಿ ಹಣವನ್ನು ಖರ್ಚು ಮಾಡಲಾಗಿದೆ” ಎಂದು ತಿಳಿದುಬಂದಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...