Homeಮುಖಪುಟಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ...

ಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ…

- Advertisement -
- Advertisement -

1. ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!
ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಮಾಜಿ ಸಿಜೆಐ ರಂಜನ್ ಗೊಗೊಯ್!
“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


2. ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!ಹಳೆಯದೇನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ. ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ. ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


3. ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆಗಳ ವಿವರ

2020-21ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದು, ಪಿಯು ಪರೀಕ್ಷೆಗಳು ಮೇ. 24 ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, “ಈ ಹಿಂದೆ ಶಿಕ್ಷಣ ಇಲಾಖೆಯು ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೆಯೇ ನೀಟ್, ಜೆಇಇ ಗಳಂತಹ ಮುಂದಿನ ತರಗತಿಗಳ ಪ್ರವೇಶದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

4. 2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ. 2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

5. ಸಂಸತ್ತಿನಲ್ಲಿ ಪ್ರಜ್ವಲಿಸಿದ ಮಹುವಾ ಮೊಯಿತ್ರಾ ರವರ ಭಾಷಣದ ಕನ್ನಡ ಅನುವಾದ

17ನೇ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ಹಲವು ಭಾಷಣಗಳು ದೇಶದ ಗಮನ ಸೆಳೆದಿವೆ. ಆಡಳಿತ ಕೂಟದ ಬಹುತೇಕರ ಭಾಷಣಗಳು ವಾಸ್ತವವನ್ನು ಬಿಚ್ಚಿಡಲಿಲ್ಲ. ಪಶ್ಚಿಮ ಬಂಗಾಳದ ಕೃಷ್ಣನಗರದ ಟಿಎಂಸಿಯ ಸಂಸದೆ ಮಹುವಾ ಮೊಯಿತ್ರ ( Mahua Moitra ) ಅವರ ಭಾಷಣ ದೇಶದ ವಾಸ್ತವ ಪರಿಸ್ಥಿತಿಯನ್ನು ತೆರದಿಟ್ಟಿದ್ದಲ್ಲದೆ, ಎಲ್ಲಡೆ ವೈರಲ್ ಆಗಿದೆ. ದೇಶದ ಹಲವು ವಿಶ್ವಾಸಾರ್ಹ ಮೀಡಿಯಾಗಳು ಮಹುವಾರ ಭಾಷಣವನ್ನು ಅರ್ಥಪೂರ್ಣ ಎಂದು ಬಣ್ಣಿಸಿವೆ. ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ಮಹುನಾರ ಭಾಷಣವನ್ನು ‘ವರ್ಷದ ಭಾಷಣ’ ( Speech of the Year) ಎಂದು ಗುರುತಿಸಿದೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

6. ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಮುಖೇಶ್ ಅಂಬಾನಿಯವರ ನಿವ್ವಳ ಮೌಲ್ಯವು 64.5 ಬಿಲಿಯನ್ ಡಾಲರ್‌ಗೆ ಏರಿದೆ. ವಿಶ್ವದ ಅಗ್ರ 10 ಶ್ರೀಮಂತ ಜನರಲ್ಲಿ ಏಷ್ಯಾದ ‌ಏಕೈಕ ಉದ್ಯಮಿ ಎಂಬ ಹೆಗ್ಗಳಿಕೆಗೆ ಅವರದಾಗಿದೆ. ಅವರು ಒರಾಕಲ್ ಕಾರ್ಪ್‌ನ ಲ್ಯಾರಿ ಎಲಿಸನ್ ಮತ್ತು ಶ್ರೀಮಂತ ಮಹಿಳೆ ಫ್ರಾನ್ಸ್‌ನ ಫ್ರಾಂಕೋಯಿಸ್ ಬೆಟೆನ್ಕೋರ್ಟ್ ಮೇಯರ್ಸ್ ಅವರನ್ನು ಹಿಂದಿಕ್ಕಿ 9 ನೇ ಸ್ಥಾನವನ್ನು ತಲುಪಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

7. ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಪಾರ್ಕಿಂಗ್‌ಗೆ

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

8. ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಚೆಂಡಿನೊಂದಿಗೆ ಆಟವಾಡಲು ಮಿದುಳು/ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ: ನಟ ಚೇತನ್

“ಚೆಂಡಿನೊಂದಿಗೆ ಆಟವಾಡಲು ಮಿದುಳು ಅಥವಾ ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ” ಎಂದು ಕನ್ನಡ ಚಲನಚಿತ್ರ ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ. ರೈತರನ್ನು ಬೆಂಬಲಿಸಿದ ಅಂತರಾಷ್ಟ್ರೀಯ ಗಣ್ಯರ ವಿರುದ್ಧ ಭಾರತೀಯ ಕ್ರಿಕೆಟಿಗರು ನಡೆಸಿದ ಟ್ವೀಟ್ ದಾಳಿಯನ್ನು ಉಲ್ಲೇಖಿಸದೇ ಕ್ರಿಕರೆಟಿಗರನ್ನು ನಟ ಚೇತನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

9. ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತ್ರಿವರ್ಣ

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

10. ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಕೃಷಿ ಕಾಯ್ದೆಗಳ ಪರ ಪ್ರಚಾರಕ್ಕಾಗಿ ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಒಕ್ಕೂಟ ಸರ್ಕಾರದ ಕೃಷಿ ಸಚಿವ ಶುಕ್ರವಾರ ಸಂಸತ್ತಿನಲ್ಲಿ ಸಲ್ಲಿಸಿದ ವಿವರಣೆಯ ಪ್ರಕಾರ, “ಮಂತ್ರಿಗಳು ಮತ್ತು ಇತರರ ಪತ್ರಿಕಾಗೋಷ್ಠಿಗಳು ಮತ್ತು ಮಾಹಿತಿ ಪ್ರಸಾರವನ್ನು ಹೊರತುಪಡಿಸಿ, ವಿವಿಧ ಸರ್ಕಾರಿ ಇಲಾಖೆಗಳು ಕಳೆದ 4-5 ತಿಂಗಳಿನಲ್ಲಿ ಜಾಹೀರಾತು ನೀಡುವ ಸಲುವಾಗಿ ಬಹುಪಾಲು ಮೊತ್ತವನ್ನು ಖರ್ಚು ಮಾಡಿದೆ. ಐಬಿ ಸಚಿವಾಲಯದ ಅಡಿಯಲ್ಲಿ ಗರಿಷ್ಟ 7.25 ಕೋಟಿ ಹಣವನ್ನು ಖರ್ಚು ಮಾಡಲಾಗಿದೆ” ಎಂದು ತಿಳಿದುಬಂದಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...