Homeಮುಖಪುಟಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ...

ಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ…

- Advertisement -
- Advertisement -

1. ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!
ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಮಾಜಿ ಸಿಜೆಐ ರಂಜನ್ ಗೊಗೊಯ್!
“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


2. ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!ಹಳೆಯದೇನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ. ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ. ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


3. ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆಗಳ ವಿವರ

2020-21ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದು, ಪಿಯು ಪರೀಕ್ಷೆಗಳು ಮೇ. 24 ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, “ಈ ಹಿಂದೆ ಶಿಕ್ಷಣ ಇಲಾಖೆಯು ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೆಯೇ ನೀಟ್, ಜೆಇಇ ಗಳಂತಹ ಮುಂದಿನ ತರಗತಿಗಳ ಪ್ರವೇಶದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

4. 2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ. 2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

5. ಸಂಸತ್ತಿನಲ್ಲಿ ಪ್ರಜ್ವಲಿಸಿದ ಮಹುವಾ ಮೊಯಿತ್ರಾ ರವರ ಭಾಷಣದ ಕನ್ನಡ ಅನುವಾದ

17ನೇ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ಹಲವು ಭಾಷಣಗಳು ದೇಶದ ಗಮನ ಸೆಳೆದಿವೆ. ಆಡಳಿತ ಕೂಟದ ಬಹುತೇಕರ ಭಾಷಣಗಳು ವಾಸ್ತವವನ್ನು ಬಿಚ್ಚಿಡಲಿಲ್ಲ. ಪಶ್ಚಿಮ ಬಂಗಾಳದ ಕೃಷ್ಣನಗರದ ಟಿಎಂಸಿಯ ಸಂಸದೆ ಮಹುವಾ ಮೊಯಿತ್ರ ( Mahua Moitra ) ಅವರ ಭಾಷಣ ದೇಶದ ವಾಸ್ತವ ಪರಿಸ್ಥಿತಿಯನ್ನು ತೆರದಿಟ್ಟಿದ್ದಲ್ಲದೆ, ಎಲ್ಲಡೆ ವೈರಲ್ ಆಗಿದೆ. ದೇಶದ ಹಲವು ವಿಶ್ವಾಸಾರ್ಹ ಮೀಡಿಯಾಗಳು ಮಹುವಾರ ಭಾಷಣವನ್ನು ಅರ್ಥಪೂರ್ಣ ಎಂದು ಬಣ್ಣಿಸಿವೆ. ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ಮಹುನಾರ ಭಾಷಣವನ್ನು ‘ವರ್ಷದ ಭಾಷಣ’ ( Speech of the Year) ಎಂದು ಗುರುತಿಸಿದೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

6. ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಮುಖೇಶ್ ಅಂಬಾನಿಯವರ ನಿವ್ವಳ ಮೌಲ್ಯವು 64.5 ಬಿಲಿಯನ್ ಡಾಲರ್‌ಗೆ ಏರಿದೆ. ವಿಶ್ವದ ಅಗ್ರ 10 ಶ್ರೀಮಂತ ಜನರಲ್ಲಿ ಏಷ್ಯಾದ ‌ಏಕೈಕ ಉದ್ಯಮಿ ಎಂಬ ಹೆಗ್ಗಳಿಕೆಗೆ ಅವರದಾಗಿದೆ. ಅವರು ಒರಾಕಲ್ ಕಾರ್ಪ್‌ನ ಲ್ಯಾರಿ ಎಲಿಸನ್ ಮತ್ತು ಶ್ರೀಮಂತ ಮಹಿಳೆ ಫ್ರಾನ್ಸ್‌ನ ಫ್ರಾಂಕೋಯಿಸ್ ಬೆಟೆನ್ಕೋರ್ಟ್ ಮೇಯರ್ಸ್ ಅವರನ್ನು ಹಿಂದಿಕ್ಕಿ 9 ನೇ ಸ್ಥಾನವನ್ನು ತಲುಪಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

7. ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಪಾರ್ಕಿಂಗ್‌ಗೆ

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

8. ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಚೆಂಡಿನೊಂದಿಗೆ ಆಟವಾಡಲು ಮಿದುಳು/ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ: ನಟ ಚೇತನ್

“ಚೆಂಡಿನೊಂದಿಗೆ ಆಟವಾಡಲು ಮಿದುಳು ಅಥವಾ ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ” ಎಂದು ಕನ್ನಡ ಚಲನಚಿತ್ರ ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ. ರೈತರನ್ನು ಬೆಂಬಲಿಸಿದ ಅಂತರಾಷ್ಟ್ರೀಯ ಗಣ್ಯರ ವಿರುದ್ಧ ಭಾರತೀಯ ಕ್ರಿಕೆಟಿಗರು ನಡೆಸಿದ ಟ್ವೀಟ್ ದಾಳಿಯನ್ನು ಉಲ್ಲೇಖಿಸದೇ ಕ್ರಿಕರೆಟಿಗರನ್ನು ನಟ ಚೇತನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

9. ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತ್ರಿವರ್ಣ

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

10. ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಕೃಷಿ ಕಾಯ್ದೆಗಳ ಪರ ಪ್ರಚಾರಕ್ಕಾಗಿ ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಒಕ್ಕೂಟ ಸರ್ಕಾರದ ಕೃಷಿ ಸಚಿವ ಶುಕ್ರವಾರ ಸಂಸತ್ತಿನಲ್ಲಿ ಸಲ್ಲಿಸಿದ ವಿವರಣೆಯ ಪ್ರಕಾರ, “ಮಂತ್ರಿಗಳು ಮತ್ತು ಇತರರ ಪತ್ರಿಕಾಗೋಷ್ಠಿಗಳು ಮತ್ತು ಮಾಹಿತಿ ಪ್ರಸಾರವನ್ನು ಹೊರತುಪಡಿಸಿ, ವಿವಿಧ ಸರ್ಕಾರಿ ಇಲಾಖೆಗಳು ಕಳೆದ 4-5 ತಿಂಗಳಿನಲ್ಲಿ ಜಾಹೀರಾತು ನೀಡುವ ಸಲುವಾಗಿ ಬಹುಪಾಲು ಮೊತ್ತವನ್ನು ಖರ್ಚು ಮಾಡಿದೆ. ಐಬಿ ಸಚಿವಾಲಯದ ಅಡಿಯಲ್ಲಿ ಗರಿಷ್ಟ 7.25 ಕೋಟಿ ಹಣವನ್ನು ಖರ್ಚು ಮಾಡಲಾಗಿದೆ” ಎಂದು ತಿಳಿದುಬಂದಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...