Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸುತ್ತಿರುವ ಈ ಮಹಿಳೆ ವಾಜಪೇಯಿಯವರ ಸೊಸೆ ಅಲ್ಲ

ಫ್ಯಾಕ್ಟ್‌‌ಚೆಕ್: ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸುತ್ತಿರುವ ಈ ಮಹಿಳೆ ವಾಜಪೇಯಿಯವರ ಸೊಸೆ ಅಲ್ಲ

ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ವಾಜಪೇಯಿ ಅವರ ಸೋದರ ಸೊಸೆ ಕರುಣಾ ಶುಕ್ಲಾ 68 ವರ್ಷ ವಯಸ್ಸಿನವರಾಗಿದ್ದಾರೆ.

- Advertisement -
- Advertisement -

‘ನ್ಯೂಸ್ ಚಾನೆಲ್’ ಒಂದರಲ್ಲಿ ಮಹಿಳೆಯೊಬ್ಬರು ಕೇಂದ್ರ ಸರ್ಕಾರವನ್ನು ಟೀಕಿಸುವ ವಿಡಿಯೋವೊಂದು, ಆ ಮಹಿಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೊಸೆ’ ಎಂದು ವೈರಲ್ ಆಗಿದೆ.

ಆದರೆ ವೀಡಿಯೊದಲ್ಲಿರುವ ಮಹಿಳೆಯು ವಾಸ್ತವವಾಗಿ ಸಮಾಜಿಕ ಕಾರ್ಯಕರ್ತೆ ಅತಿಯಾ ಅಲ್ವಿ ಎಂಬವರಾಗಿದ್ದು, ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಂತರ್ ಮಂತರ್‌ನಲ್ಲಿ ‘ಎಚ್‌ಎನ್‌ಪಿ ನ್ಯೂಸ್’ ಚಾನೆಲ್‌ನಲ್ಲಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಕಾಂಗ್ರೆಸ್ ನಾಯಕಿ, ನಟಿ ನಗ್ಮಾ ”ಅಟಲ್‌‌ ಅವರ ಸೋದರ ಸೊಸೆ ಬಿಜೆಪಿಯ ಆಡಳಿತದ ಬಗ್ಗೆ ಮಾತನಾಡುತ್ತಿದ್ದಾರೆ, ಪುರುಷರು ನಿರುದ್ಯೋಗಿಗಳಾಗಿದ್ದಾರೆ ಮತ್ತು ಮಹಿಳೆಯರು ಅಸುರಕ್ಷಿತರಾಗಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಕ್ಲಿಪ್‌ಅನ್ನು ಹಂಚಿಕೊಂಡಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ

ಸಾಮಾಜಿಕ ಜಾಲತಾಣದ ಬಳಕೆದಾರರು 2020 ರ ಜನವರಿಯಿಂದಲೂ ಈ ವಿಡಿಯೋವನ್ನು, ’ವಾಜಪೇಯಿ ಅವರ ಸೋದರ ಸೊಸೆ ಅಂತಿಮವಾಗಿ ಮೌನವನ್ನು ಮುರಿದಿದ್ದಾರೆ’ ಎಂಬ ಶೀರ್ಷಿಕೆಯಲ್ಲಿ ಹಂಚುತ್ತಲೇ ಇದ್ದಾರೆ.

ಇದರ ಆರ್ಕೈವ್ ಇಲ್ಲಿದೆ
ಇದರ ಆರ್ಕೈವ್ ಇಲ್ಲಿದೆ
ಇದರ ಆರ್ಕೈವ್ ಇಲ್ಲಿದೆ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಫ್ಯಾಕ್ಟ್‌‌ಚೆಕ್

ವೀಡಿಯೊದಲ್ಲಿರುವ ಮಹಿಳೆಯು ಅತಿಯಾ ಅಲ್ವಿಯಾ ಎಂಬವರಾಗಿದ್ದು, ಇವರು ವಾಜಪೇಯಿ ಅವರ ಸೋದರ ಸೊಸೆ ಅಲ್ಲ.

‘ಎಚ್‌ಎನ್‌ಪಿ ನ್ಯೂಸ್’ ಎಂಬ ಕೀವರ್ಡ್ ಮೂಲಕ ಹುಡುಕಾಡಿದಾಗ ಜನವರಿ 3 ರಂದು ಅಪ್‌ಲೋಡ್ ಮಾಡಲಾದ ಯೂಟ್ಯೂಬ್ ವೀಡಿಯೊವನ್ನು ಕಂಡುಕೊಳ್ಳಬಹುದು. ಅಲ್ಲಿಂದ ಈ ವಿಡಿಯೋವನ್ನು ತೆಗೆದುಕೊಳ್ಳಲಾಗಿದೆ.

ಜಂತರ್ ಮಂತರ್‌ನಲ್ಲಿ ನಡೆದ ಸಿಎಎ/ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯಲ್ಲಿ ಇವರು ಭಾಗಿಯಾಗಿದ್ದರು. ತಾನು ವಾಜಪೇಯಿ ಅವರ ಸೋದರ ಸೊಸೆ ಅಲ್ಲ ಎಂದು ಎಂದು ಸ್ವತಃ ಅತಿಯಾ ಅಲ್ವೀ ಹೇಳಿದ್ದಾರೆಂದು ದಿ ಕ್ವಿಂಟ್ ವರದಿ ಮಾಡಿದೆ.

ವಾಜಪೇಯಿ ಅವರ ಸೋದರ ಸೊಸೆ ಕರುಣಾ ಶುಕ್ಲಾ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವುದು ನಿಜ. ಆದರೆ ಅವರು 68 ವರ್ಷದವರಾಗಿದ್ದು, ವೈರಲ್ ವೀಡಿಯೊದಲ್ಲಿರುವ ಮಹಿಳೆಯು ಕಡಿಮೆ ವಯಸ್ಸಿನವರಾಗಿದ್ದಾರೆ.

ಮಧ್ಯದಲ್ಲಿರುವ ಮಹಿಳೆ ಕರುಣಾ ಶುಕ್ಲಾ ಆಗಿದ್ದು ಇವರು ಮಾಜಿ ಪ್ರಧಾನಿ ವಾಜಪೇಯಿ ಅವರ ಸೋದರ ಸೊಸೆ.(PC:PTI)

ಸ್ಪಷ್ಟವಾಗಿ ಹೇಳಬೇಕೆಂದರೆ ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸುವ ಮಹಿಳೆಯನ್ನು ಮಾಜಿ ಪ್ರಧಾನಿ ವಾಜಪೇಯಿ ಅವರ ಸೋದರ ಸೊಸೆ ಎಂದು ತಪ್ಪಾಗಿ ಹೇಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ವಿಡಿಯೋನೋಡಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...