Homeಮುಖಪುಟಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ನೇತೃತ್ವದಲ್ಲಿ ರಾಜ್ಯದ ಹಲವಾರು ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ವರ್ಷ ನಡೆಯುವ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಬಾರಿ ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು (ಮಾರ್ಚ್‌ 07 & 08) ನಡೆಯಲಿದೆ.

2013ರಲ್ಲಿ ಉಡುಪಿಯಿಂದ ಆರಂಭವಾದ ಎಲ್ಲಾ ಸಂಘಟನೆಗಳು ಕೂಡಿ ಆಚರಿಸುವ ಈ ಪ್ರಕ್ರಿಯೆ ಪ್ರತಿ ವರ್ಷಕ್ಕೂ ವಿಭಿನ್ನವಾಗಿ ನಡೆದುಕೊಂಡು ಬರುತ್ತಿದೆ. 2014ರಲ್ಲಿ ಮೈಸೂರು, 2015ರಲ್ಲಿ ಬೆಂಗಳೂರು, 2016ರಲ್ಲಿ ವಿಜಯಪುರ, 2017ರಲ್ಲಿ ಕೊಪ್ಪಳ, 2018ರಲ್ಲಿ ಶಿವಮೊಗ್ಗ ಮತ್ತು 2019ರಲ್ಲಿ ಧಾರವಾಡದಲ್ಲಿ ಯಶಸ್ವಿಯಾಗಿ ಮಹಿಳಾ ದಿನ ನಡೆದಿದೆ.

ಕೊಪ್ಪಳದಲ್ಲಿ 2017ರಲ್ಲಿ ನಡೆದ ಮಹಿಳಾ ದಿನಾಚರಣೆ

ಉಡುಪಿಯ ಕಾರ್ಯಕ್ರಮಕ್ಕೆ 2013ರಲ್ಲಿ ದಿಟ್ಟ ಹೋರಾಟಗಾರ್ತಿ ಭಂವ್ರಿದೇವಿ ಚಾಲನೆ ನೀಡಿದ್ದರು. ಮಣಿಪುರದ ಹೋರಾಟಗಾರ್ತಿಯರು, ಕವಿತಾ ಕೃಷ್ಣನ್‌ ಸೇರಿದಂತೆ ಹಲವು ಚಿಂತಕರು, ಹೋರಾಟಗಾರ್ತಿಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನದ ಮಹತ್ವವನ್ನು ಹೆಚ್ಚಿಸಿದ್ದರು. ಈ ಬಾರಿ ಮಂಡ್ಯದ ಕಾರ್ಯಕ್ರಮಕ್ಕೆ ದೆಹಲಿ ಸಾಮಾಜಿಕ ಹೋರಾಟಗಾರ್ತಿ ಮತ್ತು ಚಿಂತಕಿ ಶಬ್ನಂ ಹಶ್ಮಿ ಮತ್ತು ಹೈದರಾಬಾದ್‌ನ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ರೂಪುಗೊಳ್ಳುವ ಮೊದಲು ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಮಾತ್ರ ಮಹಿಳಾ ದಿನಾಚರಣೆ ಆಚರಿಸುತ್ತಿದ್ದರು. ಆದರೆ ಈಗ ಅವರೆಲ್ಲರೂ ಒಟ್ಟಾಗಿ ಭಾಗವಹಿಸುವುದಲ್ಲದೇ ಅವರ ಸಂಘಟನೆಗಳ ವ್ಯಾಪ್ತಿಯಲ್ಲಿಯೂ ಸಹ ಆಚರಿಸುತ್ತಿದ್ದಾರೆ. ಎಲ್ಲರನ್ನು ಒಂದು ವೇದಿಕೆಗೆ ತಂದ ಶ್ರೇಯ ಈ ವೇದಿಕೆಗೆ ಸಲ್ಲುತ್ತದೆ.

ಪ್ರತಿ ವರ್ಷವೂ ಎರಡು ದಿನ ಕಾರ್ಯಕ್ರಮ ನಡೆಯುತ್ತಿದೆ. ಅದಕ್ಕು ಮೊದಲೇ ಆರು ತಿಂಗಳಿನಿಂದ ಕಾರ್ಯಕ್ರಮದ ತಯಾರಿ ನಡೆದಿರುತ್ತದೆ. ಯಾವ ಊರಿನಲ್ಲಿ ಕಾರ್ಯಕ್ರಮ ನಡೆಯುತ್ತದೆಯೇ ಅಲ್ಲಿಯ ಸಂಘಟನೆಗಳೊಂದಿಗೆ ಸಭೆ, ಆ ಊರಿನ ಮಹಿಳಾ ಸಮಸ್ಯೆಯ ಕುರಿತು ಚರ್ಚೆ, ಕಾರ್ಯಗಾರ, ಪ್ರಚಾರಾಂದೋಲನಗಳು ನಡೆಯುತ್ತವೆ. ಸಾಮಾನ್ಯವಾಗಿ ಕಾರ್ಯಕ್ರಮದ ಮೊದಲ ದಿನ ಮಹಿಳಾ ಸಮಸ್ಯೆಗಳ ಪ್ರಚಲಿತ ವಿಚಾರದ ಕುರಿತು ವಿಚಾರ ಸಂಕಿರಣ ಮತ್ತು ಕಪ್ಪುಡುಗೆಯಲ್ಲಿ ಮಹಿಳೆಯರು ಮೌನ ಪ್ರತಿಭಟನೆ ನಡೆಯುತ್ತದೆ. ಎರಡನೆಯ ದಿನ ಮೆರವಣಿಗೆ ಮತ್ತು ಬಹಿರಂಗ ಸಮಾವೇಶ ಜರುಗುತ್ತದೆ.

ಪ್ರಚಾರಾಂದೋಲನ

ಸಮತೆಯೆಡೆಗೆ ನಮ್ಮ ನಡಿಗೆ, ನನ್ನ ಮತ ನನ್ನ ಆಯ್ಕೆ, ಇರಲಿ ಹೆಣ್ಣೋಟಕ್ಕೆ ಹೆಗ್ಗಳಿಕೆ ಎಂಬ ವಿಷಯದ ಸುತ್ತಾ ಧಾರವಾಡದ ಮಹಿಳಾ ದಿನ ನಡೆದರೆ, ಕೊಪ್ಪಳದಲ್ಲಿ ಸಮತೆಯೆಡೆಗೆ ನಮ್ಮ ನಡಿಗೆ, ನಮ್ಮ ಮಗಳು ಜಗದ ಬೆಳಕು, ನಮ್ಮ ದೇಹ ನಮ್ಮ ಹಕ್ಕು ಎಂಬ ವಿಷಯದ ಸುತ್ತಾ ಕೇಂದ್ರೀಕರಿಸಿತ್ತು. ಈ ಬಾರಿಯ ಮಂಡ್ಯದ ಮಹಿಳಾ ದಿನಾಚರಣೆಯಲ್ಲಿ ಗಟ್ಟಿ ದನಿ, ದಿಟ್ಟ ನಡೆ, ಘನತೆವೆತ್ತ ಬದುಕು ವಿಷಯದ ಕುರಿತು ನಡೆಯುತ್ತಿದೆ.

ಪ್ರತಿ ವರ್ಷವೂ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಮುಟ್ಟು, ಮಹಿಳಾ ಮೀಸಲಾತಿ, ಇತ್ಯಾದಿ ವಿಚಾರಗಳ ಕುರಿತು ಚಿಕ್ಕ ಪುಸ್ತಿಕೆಗಳನ್ನು ಮುದ್ರಿಸಿ ಜನರಿಗೆ ತಲುಪಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಬೀದಿನಾಟಕಗಳು, ಹಾಡುಗಳ ಮೂಲಕ ಜಾಗೃತಿ ಮೂಡಿಸುತ್ತಾ ಕೇವಲ ಎರಡು ದಿನ ಮಹಿಳಾ ದಿನಚರಣೆ ಮಾಡದೇ ಇದನ್ನೊಂದು ನಿರಂತರ ತಿಳಿವಿನ ಪ್ರಕ್ರಿಯೆಯಾಗಿ ವೇದಿಕೆ ಕೆಲಸ ಮಾಡುತ್ತಿದೆ.

ದುಡಿಯುವ ಮಹಿಳೆಯರ ದಿನ ಎಂದೇ ಖ್ಯಾತಿಯಾದ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುತ್ತಾ, ಜಾಗೃತಿ ಮೂಡಿಸುತ್ತಾ ವೇದಿಕೆ ಆಚರಿಸುತ್ತಿದೆ. ಸಾವಿರಾರು ಜನ ಪಾಲ್ಗೊಂಡು ಅರಿವಿನ ಪಯಣದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಈ ಬಾರಿಯ ಮಾರ್ಚ್‌ 07ರ ಶನಿವಾರ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ “ಮಹಿಳಾ ಬದುಕು ಪಲ್ಲಟಗಳು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯುತ್ತಿದೆ. ಮಾರ್ಚ್‌ 08ರ ಭಾನುವಾರ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೇ ನಿಲ್ದಾಣದ ಬಳಿಯ ಸಿಲ್ವರ್‌ ಜ್ಯುಬಿಲಿ ಪಾರ್ಕ್‌‌ನಲ್ಲಿ ಬಹಿರಂಗ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹ್ವಾನ ಪತ್ರಿಕೆ ಕೆಳಗಿವೆ ಓದಿ.

ಎಲ್ಲರೂ ತಪ್ಪದೇ ಬಂದು ಭಾಗವಹಿಸಿ… ನಿಮ್ಮ ಆಗಮನದ ನಿರೀಕ್ಷೆಯಲ್ಲಿದ್ದೇವೆ#international_women's_day#march_7_8_Mandya#ಅಂತಾರಾಷ್ಟ್ರೀಯ_ಮಹಿಳಾ_ದಿನಾಚರಣೆ

Posted by Karnataka Rajya Mahila Dourjanya virodhi Okkuta on Saturday, February 29, 2020

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...