Homeಮುಖಪುಟಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ನೇತೃತ್ವದಲ್ಲಿ ರಾಜ್ಯದ ಹಲವಾರು ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ವರ್ಷ ನಡೆಯುವ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಬಾರಿ ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು (ಮಾರ್ಚ್‌ 07 & 08) ನಡೆಯಲಿದೆ.

2013ರಲ್ಲಿ ಉಡುಪಿಯಿಂದ ಆರಂಭವಾದ ಎಲ್ಲಾ ಸಂಘಟನೆಗಳು ಕೂಡಿ ಆಚರಿಸುವ ಈ ಪ್ರಕ್ರಿಯೆ ಪ್ರತಿ ವರ್ಷಕ್ಕೂ ವಿಭಿನ್ನವಾಗಿ ನಡೆದುಕೊಂಡು ಬರುತ್ತಿದೆ. 2014ರಲ್ಲಿ ಮೈಸೂರು, 2015ರಲ್ಲಿ ಬೆಂಗಳೂರು, 2016ರಲ್ಲಿ ವಿಜಯಪುರ, 2017ರಲ್ಲಿ ಕೊಪ್ಪಳ, 2018ರಲ್ಲಿ ಶಿವಮೊಗ್ಗ ಮತ್ತು 2019ರಲ್ಲಿ ಧಾರವಾಡದಲ್ಲಿ ಯಶಸ್ವಿಯಾಗಿ ಮಹಿಳಾ ದಿನ ನಡೆದಿದೆ.

ಕೊಪ್ಪಳದಲ್ಲಿ 2017ರಲ್ಲಿ ನಡೆದ ಮಹಿಳಾ ದಿನಾಚರಣೆ

ಉಡುಪಿಯ ಕಾರ್ಯಕ್ರಮಕ್ಕೆ 2013ರಲ್ಲಿ ದಿಟ್ಟ ಹೋರಾಟಗಾರ್ತಿ ಭಂವ್ರಿದೇವಿ ಚಾಲನೆ ನೀಡಿದ್ದರು. ಮಣಿಪುರದ ಹೋರಾಟಗಾರ್ತಿಯರು, ಕವಿತಾ ಕೃಷ್ಣನ್‌ ಸೇರಿದಂತೆ ಹಲವು ಚಿಂತಕರು, ಹೋರಾಟಗಾರ್ತಿಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನದ ಮಹತ್ವವನ್ನು ಹೆಚ್ಚಿಸಿದ್ದರು. ಈ ಬಾರಿ ಮಂಡ್ಯದ ಕಾರ್ಯಕ್ರಮಕ್ಕೆ ದೆಹಲಿ ಸಾಮಾಜಿಕ ಹೋರಾಟಗಾರ್ತಿ ಮತ್ತು ಚಿಂತಕಿ ಶಬ್ನಂ ಹಶ್ಮಿ ಮತ್ತು ಹೈದರಾಬಾದ್‌ನ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ರೂಪುಗೊಳ್ಳುವ ಮೊದಲು ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಮಾತ್ರ ಮಹಿಳಾ ದಿನಾಚರಣೆ ಆಚರಿಸುತ್ತಿದ್ದರು. ಆದರೆ ಈಗ ಅವರೆಲ್ಲರೂ ಒಟ್ಟಾಗಿ ಭಾಗವಹಿಸುವುದಲ್ಲದೇ ಅವರ ಸಂಘಟನೆಗಳ ವ್ಯಾಪ್ತಿಯಲ್ಲಿಯೂ ಸಹ ಆಚರಿಸುತ್ತಿದ್ದಾರೆ. ಎಲ್ಲರನ್ನು ಒಂದು ವೇದಿಕೆಗೆ ತಂದ ಶ್ರೇಯ ಈ ವೇದಿಕೆಗೆ ಸಲ್ಲುತ್ತದೆ.

ಪ್ರತಿ ವರ್ಷವೂ ಎರಡು ದಿನ ಕಾರ್ಯಕ್ರಮ ನಡೆಯುತ್ತಿದೆ. ಅದಕ್ಕು ಮೊದಲೇ ಆರು ತಿಂಗಳಿನಿಂದ ಕಾರ್ಯಕ್ರಮದ ತಯಾರಿ ನಡೆದಿರುತ್ತದೆ. ಯಾವ ಊರಿನಲ್ಲಿ ಕಾರ್ಯಕ್ರಮ ನಡೆಯುತ್ತದೆಯೇ ಅಲ್ಲಿಯ ಸಂಘಟನೆಗಳೊಂದಿಗೆ ಸಭೆ, ಆ ಊರಿನ ಮಹಿಳಾ ಸಮಸ್ಯೆಯ ಕುರಿತು ಚರ್ಚೆ, ಕಾರ್ಯಗಾರ, ಪ್ರಚಾರಾಂದೋಲನಗಳು ನಡೆಯುತ್ತವೆ. ಸಾಮಾನ್ಯವಾಗಿ ಕಾರ್ಯಕ್ರಮದ ಮೊದಲ ದಿನ ಮಹಿಳಾ ಸಮಸ್ಯೆಗಳ ಪ್ರಚಲಿತ ವಿಚಾರದ ಕುರಿತು ವಿಚಾರ ಸಂಕಿರಣ ಮತ್ತು ಕಪ್ಪುಡುಗೆಯಲ್ಲಿ ಮಹಿಳೆಯರು ಮೌನ ಪ್ರತಿಭಟನೆ ನಡೆಯುತ್ತದೆ. ಎರಡನೆಯ ದಿನ ಮೆರವಣಿಗೆ ಮತ್ತು ಬಹಿರಂಗ ಸಮಾವೇಶ ಜರುಗುತ್ತದೆ.

ಪ್ರಚಾರಾಂದೋಲನ

ಸಮತೆಯೆಡೆಗೆ ನಮ್ಮ ನಡಿಗೆ, ನನ್ನ ಮತ ನನ್ನ ಆಯ್ಕೆ, ಇರಲಿ ಹೆಣ್ಣೋಟಕ್ಕೆ ಹೆಗ್ಗಳಿಕೆ ಎಂಬ ವಿಷಯದ ಸುತ್ತಾ ಧಾರವಾಡದ ಮಹಿಳಾ ದಿನ ನಡೆದರೆ, ಕೊಪ್ಪಳದಲ್ಲಿ ಸಮತೆಯೆಡೆಗೆ ನಮ್ಮ ನಡಿಗೆ, ನಮ್ಮ ಮಗಳು ಜಗದ ಬೆಳಕು, ನಮ್ಮ ದೇಹ ನಮ್ಮ ಹಕ್ಕು ಎಂಬ ವಿಷಯದ ಸುತ್ತಾ ಕೇಂದ್ರೀಕರಿಸಿತ್ತು. ಈ ಬಾರಿಯ ಮಂಡ್ಯದ ಮಹಿಳಾ ದಿನಾಚರಣೆಯಲ್ಲಿ ಗಟ್ಟಿ ದನಿ, ದಿಟ್ಟ ನಡೆ, ಘನತೆವೆತ್ತ ಬದುಕು ವಿಷಯದ ಕುರಿತು ನಡೆಯುತ್ತಿದೆ.

ಪ್ರತಿ ವರ್ಷವೂ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಮುಟ್ಟು, ಮಹಿಳಾ ಮೀಸಲಾತಿ, ಇತ್ಯಾದಿ ವಿಚಾರಗಳ ಕುರಿತು ಚಿಕ್ಕ ಪುಸ್ತಿಕೆಗಳನ್ನು ಮುದ್ರಿಸಿ ಜನರಿಗೆ ತಲುಪಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಬೀದಿನಾಟಕಗಳು, ಹಾಡುಗಳ ಮೂಲಕ ಜಾಗೃತಿ ಮೂಡಿಸುತ್ತಾ ಕೇವಲ ಎರಡು ದಿನ ಮಹಿಳಾ ದಿನಚರಣೆ ಮಾಡದೇ ಇದನ್ನೊಂದು ನಿರಂತರ ತಿಳಿವಿನ ಪ್ರಕ್ರಿಯೆಯಾಗಿ ವೇದಿಕೆ ಕೆಲಸ ಮಾಡುತ್ತಿದೆ.

ದುಡಿಯುವ ಮಹಿಳೆಯರ ದಿನ ಎಂದೇ ಖ್ಯಾತಿಯಾದ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುತ್ತಾ, ಜಾಗೃತಿ ಮೂಡಿಸುತ್ತಾ ವೇದಿಕೆ ಆಚರಿಸುತ್ತಿದೆ. ಸಾವಿರಾರು ಜನ ಪಾಲ್ಗೊಂಡು ಅರಿವಿನ ಪಯಣದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಈ ಬಾರಿಯ ಮಾರ್ಚ್‌ 07ರ ಶನಿವಾರ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ “ಮಹಿಳಾ ಬದುಕು ಪಲ್ಲಟಗಳು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯುತ್ತಿದೆ. ಮಾರ್ಚ್‌ 08ರ ಭಾನುವಾರ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೇ ನಿಲ್ದಾಣದ ಬಳಿಯ ಸಿಲ್ವರ್‌ ಜ್ಯುಬಿಲಿ ಪಾರ್ಕ್‌‌ನಲ್ಲಿ ಬಹಿರಂಗ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹ್ವಾನ ಪತ್ರಿಕೆ ಕೆಳಗಿವೆ ಓದಿ.

ಎಲ್ಲರೂ ತಪ್ಪದೇ ಬಂದು ಭಾಗವಹಿಸಿ… ನಿಮ್ಮ ಆಗಮನದ ನಿರೀಕ್ಷೆಯಲ್ಲಿದ್ದೇವೆ#international_women's_day#march_7_8_Mandya#ಅಂತಾರಾಷ್ಟ್ರೀಯ_ಮಹಿಳಾ_ದಿನಾಚರಣೆ

Posted by Karnataka Rajya Mahila Dourjanya virodhi Okkuta on Saturday, February 29, 2020

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...