Homeಮುಖಪುಟಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ನೇತೃತ್ವದಲ್ಲಿ ರಾಜ್ಯದ ಹಲವಾರು ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ವರ್ಷ ನಡೆಯುವ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಬಾರಿ ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು (ಮಾರ್ಚ್‌ 07 & 08) ನಡೆಯಲಿದೆ.

2013ರಲ್ಲಿ ಉಡುಪಿಯಿಂದ ಆರಂಭವಾದ ಎಲ್ಲಾ ಸಂಘಟನೆಗಳು ಕೂಡಿ ಆಚರಿಸುವ ಈ ಪ್ರಕ್ರಿಯೆ ಪ್ರತಿ ವರ್ಷಕ್ಕೂ ವಿಭಿನ್ನವಾಗಿ ನಡೆದುಕೊಂಡು ಬರುತ್ತಿದೆ. 2014ರಲ್ಲಿ ಮೈಸೂರು, 2015ರಲ್ಲಿ ಬೆಂಗಳೂರು, 2016ರಲ್ಲಿ ವಿಜಯಪುರ, 2017ರಲ್ಲಿ ಕೊಪ್ಪಳ, 2018ರಲ್ಲಿ ಶಿವಮೊಗ್ಗ ಮತ್ತು 2019ರಲ್ಲಿ ಧಾರವಾಡದಲ್ಲಿ ಯಶಸ್ವಿಯಾಗಿ ಮಹಿಳಾ ದಿನ ನಡೆದಿದೆ.

ಕೊಪ್ಪಳದಲ್ಲಿ 2017ರಲ್ಲಿ ನಡೆದ ಮಹಿಳಾ ದಿನಾಚರಣೆ

ಉಡುಪಿಯ ಕಾರ್ಯಕ್ರಮಕ್ಕೆ 2013ರಲ್ಲಿ ದಿಟ್ಟ ಹೋರಾಟಗಾರ್ತಿ ಭಂವ್ರಿದೇವಿ ಚಾಲನೆ ನೀಡಿದ್ದರು. ಮಣಿಪುರದ ಹೋರಾಟಗಾರ್ತಿಯರು, ಕವಿತಾ ಕೃಷ್ಣನ್‌ ಸೇರಿದಂತೆ ಹಲವು ಚಿಂತಕರು, ಹೋರಾಟಗಾರ್ತಿಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನದ ಮಹತ್ವವನ್ನು ಹೆಚ್ಚಿಸಿದ್ದರು. ಈ ಬಾರಿ ಮಂಡ್ಯದ ಕಾರ್ಯಕ್ರಮಕ್ಕೆ ದೆಹಲಿ ಸಾಮಾಜಿಕ ಹೋರಾಟಗಾರ್ತಿ ಮತ್ತು ಚಿಂತಕಿ ಶಬ್ನಂ ಹಶ್ಮಿ ಮತ್ತು ಹೈದರಾಬಾದ್‌ನ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ರೂಪುಗೊಳ್ಳುವ ಮೊದಲು ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಮಾತ್ರ ಮಹಿಳಾ ದಿನಾಚರಣೆ ಆಚರಿಸುತ್ತಿದ್ದರು. ಆದರೆ ಈಗ ಅವರೆಲ್ಲರೂ ಒಟ್ಟಾಗಿ ಭಾಗವಹಿಸುವುದಲ್ಲದೇ ಅವರ ಸಂಘಟನೆಗಳ ವ್ಯಾಪ್ತಿಯಲ್ಲಿಯೂ ಸಹ ಆಚರಿಸುತ್ತಿದ್ದಾರೆ. ಎಲ್ಲರನ್ನು ಒಂದು ವೇದಿಕೆಗೆ ತಂದ ಶ್ರೇಯ ಈ ವೇದಿಕೆಗೆ ಸಲ್ಲುತ್ತದೆ.

ಪ್ರತಿ ವರ್ಷವೂ ಎರಡು ದಿನ ಕಾರ್ಯಕ್ರಮ ನಡೆಯುತ್ತಿದೆ. ಅದಕ್ಕು ಮೊದಲೇ ಆರು ತಿಂಗಳಿನಿಂದ ಕಾರ್ಯಕ್ರಮದ ತಯಾರಿ ನಡೆದಿರುತ್ತದೆ. ಯಾವ ಊರಿನಲ್ಲಿ ಕಾರ್ಯಕ್ರಮ ನಡೆಯುತ್ತದೆಯೇ ಅಲ್ಲಿಯ ಸಂಘಟನೆಗಳೊಂದಿಗೆ ಸಭೆ, ಆ ಊರಿನ ಮಹಿಳಾ ಸಮಸ್ಯೆಯ ಕುರಿತು ಚರ್ಚೆ, ಕಾರ್ಯಗಾರ, ಪ್ರಚಾರಾಂದೋಲನಗಳು ನಡೆಯುತ್ತವೆ. ಸಾಮಾನ್ಯವಾಗಿ ಕಾರ್ಯಕ್ರಮದ ಮೊದಲ ದಿನ ಮಹಿಳಾ ಸಮಸ್ಯೆಗಳ ಪ್ರಚಲಿತ ವಿಚಾರದ ಕುರಿತು ವಿಚಾರ ಸಂಕಿರಣ ಮತ್ತು ಕಪ್ಪುಡುಗೆಯಲ್ಲಿ ಮಹಿಳೆಯರು ಮೌನ ಪ್ರತಿಭಟನೆ ನಡೆಯುತ್ತದೆ. ಎರಡನೆಯ ದಿನ ಮೆರವಣಿಗೆ ಮತ್ತು ಬಹಿರಂಗ ಸಮಾವೇಶ ಜರುಗುತ್ತದೆ.

ಪ್ರಚಾರಾಂದೋಲನ

ಸಮತೆಯೆಡೆಗೆ ನಮ್ಮ ನಡಿಗೆ, ನನ್ನ ಮತ ನನ್ನ ಆಯ್ಕೆ, ಇರಲಿ ಹೆಣ್ಣೋಟಕ್ಕೆ ಹೆಗ್ಗಳಿಕೆ ಎಂಬ ವಿಷಯದ ಸುತ್ತಾ ಧಾರವಾಡದ ಮಹಿಳಾ ದಿನ ನಡೆದರೆ, ಕೊಪ್ಪಳದಲ್ಲಿ ಸಮತೆಯೆಡೆಗೆ ನಮ್ಮ ನಡಿಗೆ, ನಮ್ಮ ಮಗಳು ಜಗದ ಬೆಳಕು, ನಮ್ಮ ದೇಹ ನಮ್ಮ ಹಕ್ಕು ಎಂಬ ವಿಷಯದ ಸುತ್ತಾ ಕೇಂದ್ರೀಕರಿಸಿತ್ತು. ಈ ಬಾರಿಯ ಮಂಡ್ಯದ ಮಹಿಳಾ ದಿನಾಚರಣೆಯಲ್ಲಿ ಗಟ್ಟಿ ದನಿ, ದಿಟ್ಟ ನಡೆ, ಘನತೆವೆತ್ತ ಬದುಕು ವಿಷಯದ ಕುರಿತು ನಡೆಯುತ್ತಿದೆ.

ಪ್ರತಿ ವರ್ಷವೂ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಮುಟ್ಟು, ಮಹಿಳಾ ಮೀಸಲಾತಿ, ಇತ್ಯಾದಿ ವಿಚಾರಗಳ ಕುರಿತು ಚಿಕ್ಕ ಪುಸ್ತಿಕೆಗಳನ್ನು ಮುದ್ರಿಸಿ ಜನರಿಗೆ ತಲುಪಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಬೀದಿನಾಟಕಗಳು, ಹಾಡುಗಳ ಮೂಲಕ ಜಾಗೃತಿ ಮೂಡಿಸುತ್ತಾ ಕೇವಲ ಎರಡು ದಿನ ಮಹಿಳಾ ದಿನಚರಣೆ ಮಾಡದೇ ಇದನ್ನೊಂದು ನಿರಂತರ ತಿಳಿವಿನ ಪ್ರಕ್ರಿಯೆಯಾಗಿ ವೇದಿಕೆ ಕೆಲಸ ಮಾಡುತ್ತಿದೆ.

ದುಡಿಯುವ ಮಹಿಳೆಯರ ದಿನ ಎಂದೇ ಖ್ಯಾತಿಯಾದ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುತ್ತಾ, ಜಾಗೃತಿ ಮೂಡಿಸುತ್ತಾ ವೇದಿಕೆ ಆಚರಿಸುತ್ತಿದೆ. ಸಾವಿರಾರು ಜನ ಪಾಲ್ಗೊಂಡು ಅರಿವಿನ ಪಯಣದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಈ ಬಾರಿಯ ಮಾರ್ಚ್‌ 07ರ ಶನಿವಾರ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ “ಮಹಿಳಾ ಬದುಕು ಪಲ್ಲಟಗಳು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯುತ್ತಿದೆ. ಮಾರ್ಚ್‌ 08ರ ಭಾನುವಾರ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೇ ನಿಲ್ದಾಣದ ಬಳಿಯ ಸಿಲ್ವರ್‌ ಜ್ಯುಬಿಲಿ ಪಾರ್ಕ್‌‌ನಲ್ಲಿ ಬಹಿರಂಗ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹ್ವಾನ ಪತ್ರಿಕೆ ಕೆಳಗಿವೆ ಓದಿ.

ಎಲ್ಲರೂ ತಪ್ಪದೇ ಬಂದು ಭಾಗವಹಿಸಿ… ನಿಮ್ಮ ಆಗಮನದ ನಿರೀಕ್ಷೆಯಲ್ಲಿದ್ದೇವೆ#international_women's_day#march_7_8_Mandya#ಅಂತಾರಾಷ್ಟ್ರೀಯ_ಮಹಿಳಾ_ದಿನಾಚರಣೆ

Posted by Karnataka Rajya Mahila Dourjanya virodhi Okkuta on Saturday, February 29, 2020

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...