Homeಮುಖಪುಟಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ನೇತೃತ್ವದಲ್ಲಿ ರಾಜ್ಯದ ಹಲವಾರು ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ವರ್ಷ ನಡೆಯುವ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಬಾರಿ ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು (ಮಾರ್ಚ್‌ 07 & 08) ನಡೆಯಲಿದೆ.

2013ರಲ್ಲಿ ಉಡುಪಿಯಿಂದ ಆರಂಭವಾದ ಎಲ್ಲಾ ಸಂಘಟನೆಗಳು ಕೂಡಿ ಆಚರಿಸುವ ಈ ಪ್ರಕ್ರಿಯೆ ಪ್ರತಿ ವರ್ಷಕ್ಕೂ ವಿಭಿನ್ನವಾಗಿ ನಡೆದುಕೊಂಡು ಬರುತ್ತಿದೆ. 2014ರಲ್ಲಿ ಮೈಸೂರು, 2015ರಲ್ಲಿ ಬೆಂಗಳೂರು, 2016ರಲ್ಲಿ ವಿಜಯಪುರ, 2017ರಲ್ಲಿ ಕೊಪ್ಪಳ, 2018ರಲ್ಲಿ ಶಿವಮೊಗ್ಗ ಮತ್ತು 2019ರಲ್ಲಿ ಧಾರವಾಡದಲ್ಲಿ ಯಶಸ್ವಿಯಾಗಿ ಮಹಿಳಾ ದಿನ ನಡೆದಿದೆ.

ಕೊಪ್ಪಳದಲ್ಲಿ 2017ರಲ್ಲಿ ನಡೆದ ಮಹಿಳಾ ದಿನಾಚರಣೆ

ಉಡುಪಿಯ ಕಾರ್ಯಕ್ರಮಕ್ಕೆ 2013ರಲ್ಲಿ ದಿಟ್ಟ ಹೋರಾಟಗಾರ್ತಿ ಭಂವ್ರಿದೇವಿ ಚಾಲನೆ ನೀಡಿದ್ದರು. ಮಣಿಪುರದ ಹೋರಾಟಗಾರ್ತಿಯರು, ಕವಿತಾ ಕೃಷ್ಣನ್‌ ಸೇರಿದಂತೆ ಹಲವು ಚಿಂತಕರು, ಹೋರಾಟಗಾರ್ತಿಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನದ ಮಹತ್ವವನ್ನು ಹೆಚ್ಚಿಸಿದ್ದರು. ಈ ಬಾರಿ ಮಂಡ್ಯದ ಕಾರ್ಯಕ್ರಮಕ್ಕೆ ದೆಹಲಿ ಸಾಮಾಜಿಕ ಹೋರಾಟಗಾರ್ತಿ ಮತ್ತು ಚಿಂತಕಿ ಶಬ್ನಂ ಹಶ್ಮಿ ಮತ್ತು ಹೈದರಾಬಾದ್‌ನ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ರೂಪುಗೊಳ್ಳುವ ಮೊದಲು ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಮಾತ್ರ ಮಹಿಳಾ ದಿನಾಚರಣೆ ಆಚರಿಸುತ್ತಿದ್ದರು. ಆದರೆ ಈಗ ಅವರೆಲ್ಲರೂ ಒಟ್ಟಾಗಿ ಭಾಗವಹಿಸುವುದಲ್ಲದೇ ಅವರ ಸಂಘಟನೆಗಳ ವ್ಯಾಪ್ತಿಯಲ್ಲಿಯೂ ಸಹ ಆಚರಿಸುತ್ತಿದ್ದಾರೆ. ಎಲ್ಲರನ್ನು ಒಂದು ವೇದಿಕೆಗೆ ತಂದ ಶ್ರೇಯ ಈ ವೇದಿಕೆಗೆ ಸಲ್ಲುತ್ತದೆ.

ಪ್ರತಿ ವರ್ಷವೂ ಎರಡು ದಿನ ಕಾರ್ಯಕ್ರಮ ನಡೆಯುತ್ತಿದೆ. ಅದಕ್ಕು ಮೊದಲೇ ಆರು ತಿಂಗಳಿನಿಂದ ಕಾರ್ಯಕ್ರಮದ ತಯಾರಿ ನಡೆದಿರುತ್ತದೆ. ಯಾವ ಊರಿನಲ್ಲಿ ಕಾರ್ಯಕ್ರಮ ನಡೆಯುತ್ತದೆಯೇ ಅಲ್ಲಿಯ ಸಂಘಟನೆಗಳೊಂದಿಗೆ ಸಭೆ, ಆ ಊರಿನ ಮಹಿಳಾ ಸಮಸ್ಯೆಯ ಕುರಿತು ಚರ್ಚೆ, ಕಾರ್ಯಗಾರ, ಪ್ರಚಾರಾಂದೋಲನಗಳು ನಡೆಯುತ್ತವೆ. ಸಾಮಾನ್ಯವಾಗಿ ಕಾರ್ಯಕ್ರಮದ ಮೊದಲ ದಿನ ಮಹಿಳಾ ಸಮಸ್ಯೆಗಳ ಪ್ರಚಲಿತ ವಿಚಾರದ ಕುರಿತು ವಿಚಾರ ಸಂಕಿರಣ ಮತ್ತು ಕಪ್ಪುಡುಗೆಯಲ್ಲಿ ಮಹಿಳೆಯರು ಮೌನ ಪ್ರತಿಭಟನೆ ನಡೆಯುತ್ತದೆ. ಎರಡನೆಯ ದಿನ ಮೆರವಣಿಗೆ ಮತ್ತು ಬಹಿರಂಗ ಸಮಾವೇಶ ಜರುಗುತ್ತದೆ.

ಪ್ರಚಾರಾಂದೋಲನ

ಸಮತೆಯೆಡೆಗೆ ನಮ್ಮ ನಡಿಗೆ, ನನ್ನ ಮತ ನನ್ನ ಆಯ್ಕೆ, ಇರಲಿ ಹೆಣ್ಣೋಟಕ್ಕೆ ಹೆಗ್ಗಳಿಕೆ ಎಂಬ ವಿಷಯದ ಸುತ್ತಾ ಧಾರವಾಡದ ಮಹಿಳಾ ದಿನ ನಡೆದರೆ, ಕೊಪ್ಪಳದಲ್ಲಿ ಸಮತೆಯೆಡೆಗೆ ನಮ್ಮ ನಡಿಗೆ, ನಮ್ಮ ಮಗಳು ಜಗದ ಬೆಳಕು, ನಮ್ಮ ದೇಹ ನಮ್ಮ ಹಕ್ಕು ಎಂಬ ವಿಷಯದ ಸುತ್ತಾ ಕೇಂದ್ರೀಕರಿಸಿತ್ತು. ಈ ಬಾರಿಯ ಮಂಡ್ಯದ ಮಹಿಳಾ ದಿನಾಚರಣೆಯಲ್ಲಿ ಗಟ್ಟಿ ದನಿ, ದಿಟ್ಟ ನಡೆ, ಘನತೆವೆತ್ತ ಬದುಕು ವಿಷಯದ ಕುರಿತು ನಡೆಯುತ್ತಿದೆ.

ಪ್ರತಿ ವರ್ಷವೂ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಮುಟ್ಟು, ಮಹಿಳಾ ಮೀಸಲಾತಿ, ಇತ್ಯಾದಿ ವಿಚಾರಗಳ ಕುರಿತು ಚಿಕ್ಕ ಪುಸ್ತಿಕೆಗಳನ್ನು ಮುದ್ರಿಸಿ ಜನರಿಗೆ ತಲುಪಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಬೀದಿನಾಟಕಗಳು, ಹಾಡುಗಳ ಮೂಲಕ ಜಾಗೃತಿ ಮೂಡಿಸುತ್ತಾ ಕೇವಲ ಎರಡು ದಿನ ಮಹಿಳಾ ದಿನಚರಣೆ ಮಾಡದೇ ಇದನ್ನೊಂದು ನಿರಂತರ ತಿಳಿವಿನ ಪ್ರಕ್ರಿಯೆಯಾಗಿ ವೇದಿಕೆ ಕೆಲಸ ಮಾಡುತ್ತಿದೆ.

ದುಡಿಯುವ ಮಹಿಳೆಯರ ದಿನ ಎಂದೇ ಖ್ಯಾತಿಯಾದ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುತ್ತಾ, ಜಾಗೃತಿ ಮೂಡಿಸುತ್ತಾ ವೇದಿಕೆ ಆಚರಿಸುತ್ತಿದೆ. ಸಾವಿರಾರು ಜನ ಪಾಲ್ಗೊಂಡು ಅರಿವಿನ ಪಯಣದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಈ ಬಾರಿಯ ಮಾರ್ಚ್‌ 07ರ ಶನಿವಾರ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ “ಮಹಿಳಾ ಬದುಕು ಪಲ್ಲಟಗಳು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯುತ್ತಿದೆ. ಮಾರ್ಚ್‌ 08ರ ಭಾನುವಾರ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೇ ನಿಲ್ದಾಣದ ಬಳಿಯ ಸಿಲ್ವರ್‌ ಜ್ಯುಬಿಲಿ ಪಾರ್ಕ್‌‌ನಲ್ಲಿ ಬಹಿರಂಗ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹ್ವಾನ ಪತ್ರಿಕೆ ಕೆಳಗಿವೆ ಓದಿ.

ಎಲ್ಲರೂ ತಪ್ಪದೇ ಬಂದು ಭಾಗವಹಿಸಿ… ನಿಮ್ಮ ಆಗಮನದ ನಿರೀಕ್ಷೆಯಲ್ಲಿದ್ದೇವೆ#international_women's_day#march_7_8_Mandya#ಅಂತಾರಾಷ್ಟ್ರೀಯ_ಮಹಿಳಾ_ದಿನಾಚರಣೆ

Posted by Karnataka Rajya Mahila Dourjanya virodhi Okkuta on Saturday, February 29, 2020

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...