Homeಮುಖಪುಟಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ನೇತೃತ್ವದಲ್ಲಿ ರಾಜ್ಯದ ಹಲವಾರು ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ವರ್ಷ ನಡೆಯುವ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಬಾರಿ ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು (ಮಾರ್ಚ್‌ 07 & 08) ನಡೆಯಲಿದೆ.

2013ರಲ್ಲಿ ಉಡುಪಿಯಿಂದ ಆರಂಭವಾದ ಎಲ್ಲಾ ಸಂಘಟನೆಗಳು ಕೂಡಿ ಆಚರಿಸುವ ಈ ಪ್ರಕ್ರಿಯೆ ಪ್ರತಿ ವರ್ಷಕ್ಕೂ ವಿಭಿನ್ನವಾಗಿ ನಡೆದುಕೊಂಡು ಬರುತ್ತಿದೆ. 2014ರಲ್ಲಿ ಮೈಸೂರು, 2015ರಲ್ಲಿ ಬೆಂಗಳೂರು, 2016ರಲ್ಲಿ ವಿಜಯಪುರ, 2017ರಲ್ಲಿ ಕೊಪ್ಪಳ, 2018ರಲ್ಲಿ ಶಿವಮೊಗ್ಗ ಮತ್ತು 2019ರಲ್ಲಿ ಧಾರವಾಡದಲ್ಲಿ ಯಶಸ್ವಿಯಾಗಿ ಮಹಿಳಾ ದಿನ ನಡೆದಿದೆ.

ಕೊಪ್ಪಳದಲ್ಲಿ 2017ರಲ್ಲಿ ನಡೆದ ಮಹಿಳಾ ದಿನಾಚರಣೆ

ಉಡುಪಿಯ ಕಾರ್ಯಕ್ರಮಕ್ಕೆ 2013ರಲ್ಲಿ ದಿಟ್ಟ ಹೋರಾಟಗಾರ್ತಿ ಭಂವ್ರಿದೇವಿ ಚಾಲನೆ ನೀಡಿದ್ದರು. ಮಣಿಪುರದ ಹೋರಾಟಗಾರ್ತಿಯರು, ಕವಿತಾ ಕೃಷ್ಣನ್‌ ಸೇರಿದಂತೆ ಹಲವು ಚಿಂತಕರು, ಹೋರಾಟಗಾರ್ತಿಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನದ ಮಹತ್ವವನ್ನು ಹೆಚ್ಚಿಸಿದ್ದರು. ಈ ಬಾರಿ ಮಂಡ್ಯದ ಕಾರ್ಯಕ್ರಮಕ್ಕೆ ದೆಹಲಿ ಸಾಮಾಜಿಕ ಹೋರಾಟಗಾರ್ತಿ ಮತ್ತು ಚಿಂತಕಿ ಶಬ್ನಂ ಹಶ್ಮಿ ಮತ್ತು ಹೈದರಾಬಾದ್‌ನ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ರೂಪುಗೊಳ್ಳುವ ಮೊದಲು ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಮಾತ್ರ ಮಹಿಳಾ ದಿನಾಚರಣೆ ಆಚರಿಸುತ್ತಿದ್ದರು. ಆದರೆ ಈಗ ಅವರೆಲ್ಲರೂ ಒಟ್ಟಾಗಿ ಭಾಗವಹಿಸುವುದಲ್ಲದೇ ಅವರ ಸಂಘಟನೆಗಳ ವ್ಯಾಪ್ತಿಯಲ್ಲಿಯೂ ಸಹ ಆಚರಿಸುತ್ತಿದ್ದಾರೆ. ಎಲ್ಲರನ್ನು ಒಂದು ವೇದಿಕೆಗೆ ತಂದ ಶ್ರೇಯ ಈ ವೇದಿಕೆಗೆ ಸಲ್ಲುತ್ತದೆ.

ಪ್ರತಿ ವರ್ಷವೂ ಎರಡು ದಿನ ಕಾರ್ಯಕ್ರಮ ನಡೆಯುತ್ತಿದೆ. ಅದಕ್ಕು ಮೊದಲೇ ಆರು ತಿಂಗಳಿನಿಂದ ಕಾರ್ಯಕ್ರಮದ ತಯಾರಿ ನಡೆದಿರುತ್ತದೆ. ಯಾವ ಊರಿನಲ್ಲಿ ಕಾರ್ಯಕ್ರಮ ನಡೆಯುತ್ತದೆಯೇ ಅಲ್ಲಿಯ ಸಂಘಟನೆಗಳೊಂದಿಗೆ ಸಭೆ, ಆ ಊರಿನ ಮಹಿಳಾ ಸಮಸ್ಯೆಯ ಕುರಿತು ಚರ್ಚೆ, ಕಾರ್ಯಗಾರ, ಪ್ರಚಾರಾಂದೋಲನಗಳು ನಡೆಯುತ್ತವೆ. ಸಾಮಾನ್ಯವಾಗಿ ಕಾರ್ಯಕ್ರಮದ ಮೊದಲ ದಿನ ಮಹಿಳಾ ಸಮಸ್ಯೆಗಳ ಪ್ರಚಲಿತ ವಿಚಾರದ ಕುರಿತು ವಿಚಾರ ಸಂಕಿರಣ ಮತ್ತು ಕಪ್ಪುಡುಗೆಯಲ್ಲಿ ಮಹಿಳೆಯರು ಮೌನ ಪ್ರತಿಭಟನೆ ನಡೆಯುತ್ತದೆ. ಎರಡನೆಯ ದಿನ ಮೆರವಣಿಗೆ ಮತ್ತು ಬಹಿರಂಗ ಸಮಾವೇಶ ಜರುಗುತ್ತದೆ.

ಪ್ರಚಾರಾಂದೋಲನ

ಸಮತೆಯೆಡೆಗೆ ನಮ್ಮ ನಡಿಗೆ, ನನ್ನ ಮತ ನನ್ನ ಆಯ್ಕೆ, ಇರಲಿ ಹೆಣ್ಣೋಟಕ್ಕೆ ಹೆಗ್ಗಳಿಕೆ ಎಂಬ ವಿಷಯದ ಸುತ್ತಾ ಧಾರವಾಡದ ಮಹಿಳಾ ದಿನ ನಡೆದರೆ, ಕೊಪ್ಪಳದಲ್ಲಿ ಸಮತೆಯೆಡೆಗೆ ನಮ್ಮ ನಡಿಗೆ, ನಮ್ಮ ಮಗಳು ಜಗದ ಬೆಳಕು, ನಮ್ಮ ದೇಹ ನಮ್ಮ ಹಕ್ಕು ಎಂಬ ವಿಷಯದ ಸುತ್ತಾ ಕೇಂದ್ರೀಕರಿಸಿತ್ತು. ಈ ಬಾರಿಯ ಮಂಡ್ಯದ ಮಹಿಳಾ ದಿನಾಚರಣೆಯಲ್ಲಿ ಗಟ್ಟಿ ದನಿ, ದಿಟ್ಟ ನಡೆ, ಘನತೆವೆತ್ತ ಬದುಕು ವಿಷಯದ ಕುರಿತು ನಡೆಯುತ್ತಿದೆ.

ಪ್ರತಿ ವರ್ಷವೂ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಮುಟ್ಟು, ಮಹಿಳಾ ಮೀಸಲಾತಿ, ಇತ್ಯಾದಿ ವಿಚಾರಗಳ ಕುರಿತು ಚಿಕ್ಕ ಪುಸ್ತಿಕೆಗಳನ್ನು ಮುದ್ರಿಸಿ ಜನರಿಗೆ ತಲುಪಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಬೀದಿನಾಟಕಗಳು, ಹಾಡುಗಳ ಮೂಲಕ ಜಾಗೃತಿ ಮೂಡಿಸುತ್ತಾ ಕೇವಲ ಎರಡು ದಿನ ಮಹಿಳಾ ದಿನಚರಣೆ ಮಾಡದೇ ಇದನ್ನೊಂದು ನಿರಂತರ ತಿಳಿವಿನ ಪ್ರಕ್ರಿಯೆಯಾಗಿ ವೇದಿಕೆ ಕೆಲಸ ಮಾಡುತ್ತಿದೆ.

ದುಡಿಯುವ ಮಹಿಳೆಯರ ದಿನ ಎಂದೇ ಖ್ಯಾತಿಯಾದ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುತ್ತಾ, ಜಾಗೃತಿ ಮೂಡಿಸುತ್ತಾ ವೇದಿಕೆ ಆಚರಿಸುತ್ತಿದೆ. ಸಾವಿರಾರು ಜನ ಪಾಲ್ಗೊಂಡು ಅರಿವಿನ ಪಯಣದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಈ ಬಾರಿಯ ಮಾರ್ಚ್‌ 07ರ ಶನಿವಾರ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ “ಮಹಿಳಾ ಬದುಕು ಪಲ್ಲಟಗಳು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯುತ್ತಿದೆ. ಮಾರ್ಚ್‌ 08ರ ಭಾನುವಾರ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೇ ನಿಲ್ದಾಣದ ಬಳಿಯ ಸಿಲ್ವರ್‌ ಜ್ಯುಬಿಲಿ ಪಾರ್ಕ್‌‌ನಲ್ಲಿ ಬಹಿರಂಗ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹ್ವಾನ ಪತ್ರಿಕೆ ಕೆಳಗಿವೆ ಓದಿ.

ಎಲ್ಲರೂ ತಪ್ಪದೇ ಬಂದು ಭಾಗವಹಿಸಿ… ನಿಮ್ಮ ಆಗಮನದ ನಿರೀಕ್ಷೆಯಲ್ಲಿದ್ದೇವೆ#international_women's_day#march_7_8_Mandya#ಅಂತಾರಾಷ್ಟ್ರೀಯ_ಮಹಿಳಾ_ದಿನಾಚರಣೆ

Posted by Karnataka Rajya Mahila Dourjanya virodhi Okkuta on Saturday, February 29, 2020

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...