Homeಅಂತರಾಷ್ಟ್ರೀಯಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಫ್ರಾನ್ಸ್ ಪ್ರವಾಸದಲ್ಲಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ರವರನ್ನು ಪ್ಯಾರಿಸ್‍ನಲ್ಲಿ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ ಭೇಟಿ ಮಾಡಿದ್ದಾರೆ. ಕೇರಳದ ಆರ್ಥಿಕತೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕೇರಳ ಆರ್ಥಿಕತೆಯ ಮಾದರಿಯನ್ನು ಅಧ್ಯಯನ ನಡೆಸಿ, ಕೆಲ ಶಿಫಾರಸ್ಸುಗಳನ್ನು ನೀಡುವ ಇಂಗಿತವನ್ನು ಪಿಕೆಟಿ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಕೆಟಿಯವರೊಂದಿಗೆ economic disparity in India ಎಂಬ ವಿಷಯದ ಕುರಿತು ಆಳವಾದ ಸಂಶೋಧನೆ ನಡೆಸಿರುವ, World Inequality Database at the Paris School of Economics ನ ಸಹ ಸಂಚಾಲಕರಾದ ಪ್ರೊ.ಲುಕಾಸ್ ಚಾನ್ಸಲ್‍ರವರು ಸಹ ಉಪಸ್ಥಿತರಿದ್ದರು. ಈ ಕುರಿತು ಒಂದು ಗಂಟೆಗಳ ಕಾಲ ಚರ್ಚೆಯನ್ನು ಪಿಣರಾಯಿ ವಿಜಯನ್ ನಡೆಸಿದ್ದಾರೆ.
ಸಮಾಜದಲ್ಲಿರುವ ಆರ್ಥಿಕ ಅಸಮಾನತೆ, ಅದನ್ನು ಸರಿದೂಗಿಸಲು ತೆಗೆದುಕೊಂಡಿರುವ ಕ್ರಮಗಳು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಅಭಿವೃದ್ದಿಪಡಿಸಲು ಮಾಡುತ್ತಿರುವ ಪ್ರಯತ್ನಗಳ ಕುರಿತ ಪಿಣರಾಯಿ ಚರ್ಚಿಸಿದ್ದಾರೆ. ಜೊತೆಗೆ ಅಂಚಿಗೊತ್ತಲ್ಪಟ್ಟ ಸಮುದಾಯಗಳನ್ನು ಮೇಲೆತ್ತಲು ತೆಗೆದುಕೊಂಡಿರುವ ಕ್ರಮಗಳು ಹಾಗೂ ದೇಶಕ್ಕೆ ಮಾದರಿಯಾಗಿರುವ ಅಸಂಘಟಿತ ವಲಯಕ್ಕೆ ನೀಡುತ್ತಿರುವ ಪಿಂಚಣಿ ಯೋಜನೆಗಳ ಕುರಿತು ಪ್ರಸ್ತಾಪಿಸಿದ್ದಾರೆ.

ಆಸ್ತಿ ತೆರಿಗೆ, ಭೂಮಿ ತೆರಿಗೆ ಮತ್ತು ಶ್ರೀಮಂತರಿಗೆ ಹೆಚ್ಚಿನ ತೆರಿಗೆಯನ್ನು ಹಾಕುವ ಮೂಲಕ ಆರ್ಥಿಕ ಅಸಮಾನತೆಯನ್ನು ಸರಿದೂಗಿಸುವ ಸಲಹೆಯನ್ನು ಪಿಕೆಟಿ ನೀಡಿದ್ದಾರೆ. ಅದಕ್ಕೆ ವಿಜಯನ್‍ರವರು, ಪಿಕೆಟಿಯವರನ್ನು ಕೇರಳಕ್ಕೆ ಒಮ್ಮೆ ಭೇಟಿ ನೀಡಿ ಆರ್ಥಿಕ ಅಸಮಾನತೆಗಳ ಕುರಿತ ವಿಶ್ಲೇಷಣೆ ಮತ್ತು ಪರಿಹಾರೋಪಾಯಗಳ ಕುರಿತು ತಿಳಿಸಲು ಆಹ್ವಾನ ನೀಡಿದ್ದಾರೆ.

ಥಾಮಸ್ ಪಿಕೆಟಿಯವರು ಪ್ರತಿಷ್ಠಿತ ಪ್ಯಾರಿಸ್ ಸ್ಕೂಲ್ ಆಫ್ ಎಕಾನಮಿಕ್ಸ್ ಮತ್ತು ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್‍ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಆದಾಯ ಮತ್ತು ಸಂಪತ್ತಿನ ಅಸಮಾನತೆಯ ಕುರಿತು ಹೆಚ್ಚು ಅಧ್ಯಯನ ನಡೆಸಿರುವ ಇರುವ ಫ್ರೆಂಚ್‍ನ ಪ್ರಖ್ಯಾತ ಅರ್ಥತಜ್ಞರು. ಇವರ Capital in the Twenty-First Century ಪುಸ್ತಕ 2013ರಲ್ಲಿ ಬಿಡುಗಡೆಯಾಗಿ ಅಪಾರ ಜನಮನ್ನಣೆ ಗಳಿಸಿದೆ. ಇದು ಕಳೆದ 250 ವರ್ಷಗಳಲ್ಲಾಗಿರುವ ಸಂಪತ್ತಿನ ಕ್ರೋಢೀಕರಣ ಮತ್ತು ಅಸಮಾನ ಹಂಚಿಕೆಯ ಕುರಿತು ಚರ್ಚಿಸುತ್ತದೆ. ಈ ಪುಸ್ತಕವು ಹೆಚ್ಚು ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲೇ ಅತ್ಯಂತ ಹೆಚ್ಚಿನ ಸಂಪತ್ತಿನ ಅಸಮಾನ ಹಂಚಿಕೆಯಿದೆ ಎಂದು ವಾದಿಸುವುದಲ್ಲದೇ, ಸಮರ್ಪಕ ತೆರಿಗೆ ವಿಧಾನಗಳಿಂದ ಮಾತ್ರ ಈ ಸಮಸ್ಯೆ ಬಗೆಹರಿಸಬಹುದೆಂದು ತಿಳಿಸುತ್ತದೆ.

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ. ಭಾರತದಲ್ಲಿನ ಶ್ರೀಮಂತ ವರ್ಗಗಳು ಅಲ್ಲಿನ ಬಡವರನ್ನು ಅತ್ಯಂತ ಕೆಳಮಟ್ಟದಲ್ಲಿ ಕಾಣುತ್ತಿದ್ದು, ಸಂಪತ್ತಿನ ಮರುಹಂಚಿಕೆಯ ರಾಜಕಾರಣಕ್ಕೆ ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯೂರೋಪಿನ 13 ರಾಷ್ಟ್ರಗಳ ಪ್ರವಾಸದಲ್ಲಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‍ರವರು ಮೇ 20ರೊಳಗೆ ಫ್ರಾನ್ಸ್, ನೆದರ್ಲೆಂಡ್, ಸ್ವಿಜರ್‍ಲ್ಯಾಂಡ್ ಮತ್ತು ಇಂಗ್ಲೆಂಡ್ ದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...