Homeಅಂತರಾಷ್ಟ್ರೀಯಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಫ್ರಾನ್ಸ್ ಪ್ರವಾಸದಲ್ಲಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ರವರನ್ನು ಪ್ಯಾರಿಸ್‍ನಲ್ಲಿ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ ಭೇಟಿ ಮಾಡಿದ್ದಾರೆ. ಕೇರಳದ ಆರ್ಥಿಕತೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕೇರಳ ಆರ್ಥಿಕತೆಯ ಮಾದರಿಯನ್ನು ಅಧ್ಯಯನ ನಡೆಸಿ, ಕೆಲ ಶಿಫಾರಸ್ಸುಗಳನ್ನು ನೀಡುವ ಇಂಗಿತವನ್ನು ಪಿಕೆಟಿ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಕೆಟಿಯವರೊಂದಿಗೆ economic disparity in India ಎಂಬ ವಿಷಯದ ಕುರಿತು ಆಳವಾದ ಸಂಶೋಧನೆ ನಡೆಸಿರುವ, World Inequality Database at the Paris School of Economics ನ ಸಹ ಸಂಚಾಲಕರಾದ ಪ್ರೊ.ಲುಕಾಸ್ ಚಾನ್ಸಲ್‍ರವರು ಸಹ ಉಪಸ್ಥಿತರಿದ್ದರು. ಈ ಕುರಿತು ಒಂದು ಗಂಟೆಗಳ ಕಾಲ ಚರ್ಚೆಯನ್ನು ಪಿಣರಾಯಿ ವಿಜಯನ್ ನಡೆಸಿದ್ದಾರೆ.
ಸಮಾಜದಲ್ಲಿರುವ ಆರ್ಥಿಕ ಅಸಮಾನತೆ, ಅದನ್ನು ಸರಿದೂಗಿಸಲು ತೆಗೆದುಕೊಂಡಿರುವ ಕ್ರಮಗಳು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಅಭಿವೃದ್ದಿಪಡಿಸಲು ಮಾಡುತ್ತಿರುವ ಪ್ರಯತ್ನಗಳ ಕುರಿತ ಪಿಣರಾಯಿ ಚರ್ಚಿಸಿದ್ದಾರೆ. ಜೊತೆಗೆ ಅಂಚಿಗೊತ್ತಲ್ಪಟ್ಟ ಸಮುದಾಯಗಳನ್ನು ಮೇಲೆತ್ತಲು ತೆಗೆದುಕೊಂಡಿರುವ ಕ್ರಮಗಳು ಹಾಗೂ ದೇಶಕ್ಕೆ ಮಾದರಿಯಾಗಿರುವ ಅಸಂಘಟಿತ ವಲಯಕ್ಕೆ ನೀಡುತ್ತಿರುವ ಪಿಂಚಣಿ ಯೋಜನೆಗಳ ಕುರಿತು ಪ್ರಸ್ತಾಪಿಸಿದ್ದಾರೆ.

ಆಸ್ತಿ ತೆರಿಗೆ, ಭೂಮಿ ತೆರಿಗೆ ಮತ್ತು ಶ್ರೀಮಂತರಿಗೆ ಹೆಚ್ಚಿನ ತೆರಿಗೆಯನ್ನು ಹಾಕುವ ಮೂಲಕ ಆರ್ಥಿಕ ಅಸಮಾನತೆಯನ್ನು ಸರಿದೂಗಿಸುವ ಸಲಹೆಯನ್ನು ಪಿಕೆಟಿ ನೀಡಿದ್ದಾರೆ. ಅದಕ್ಕೆ ವಿಜಯನ್‍ರವರು, ಪಿಕೆಟಿಯವರನ್ನು ಕೇರಳಕ್ಕೆ ಒಮ್ಮೆ ಭೇಟಿ ನೀಡಿ ಆರ್ಥಿಕ ಅಸಮಾನತೆಗಳ ಕುರಿತ ವಿಶ್ಲೇಷಣೆ ಮತ್ತು ಪರಿಹಾರೋಪಾಯಗಳ ಕುರಿತು ತಿಳಿಸಲು ಆಹ್ವಾನ ನೀಡಿದ್ದಾರೆ.

ಥಾಮಸ್ ಪಿಕೆಟಿಯವರು ಪ್ರತಿಷ್ಠಿತ ಪ್ಯಾರಿಸ್ ಸ್ಕೂಲ್ ಆಫ್ ಎಕಾನಮಿಕ್ಸ್ ಮತ್ತು ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್‍ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಆದಾಯ ಮತ್ತು ಸಂಪತ್ತಿನ ಅಸಮಾನತೆಯ ಕುರಿತು ಹೆಚ್ಚು ಅಧ್ಯಯನ ನಡೆಸಿರುವ ಇರುವ ಫ್ರೆಂಚ್‍ನ ಪ್ರಖ್ಯಾತ ಅರ್ಥತಜ್ಞರು. ಇವರ Capital in the Twenty-First Century ಪುಸ್ತಕ 2013ರಲ್ಲಿ ಬಿಡುಗಡೆಯಾಗಿ ಅಪಾರ ಜನಮನ್ನಣೆ ಗಳಿಸಿದೆ. ಇದು ಕಳೆದ 250 ವರ್ಷಗಳಲ್ಲಾಗಿರುವ ಸಂಪತ್ತಿನ ಕ್ರೋಢೀಕರಣ ಮತ್ತು ಅಸಮಾನ ಹಂಚಿಕೆಯ ಕುರಿತು ಚರ್ಚಿಸುತ್ತದೆ. ಈ ಪುಸ್ತಕವು ಹೆಚ್ಚು ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲೇ ಅತ್ಯಂತ ಹೆಚ್ಚಿನ ಸಂಪತ್ತಿನ ಅಸಮಾನ ಹಂಚಿಕೆಯಿದೆ ಎಂದು ವಾದಿಸುವುದಲ್ಲದೇ, ಸಮರ್ಪಕ ತೆರಿಗೆ ವಿಧಾನಗಳಿಂದ ಮಾತ್ರ ಈ ಸಮಸ್ಯೆ ಬಗೆಹರಿಸಬಹುದೆಂದು ತಿಳಿಸುತ್ತದೆ.

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ. ಭಾರತದಲ್ಲಿನ ಶ್ರೀಮಂತ ವರ್ಗಗಳು ಅಲ್ಲಿನ ಬಡವರನ್ನು ಅತ್ಯಂತ ಕೆಳಮಟ್ಟದಲ್ಲಿ ಕಾಣುತ್ತಿದ್ದು, ಸಂಪತ್ತಿನ ಮರುಹಂಚಿಕೆಯ ರಾಜಕಾರಣಕ್ಕೆ ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯೂರೋಪಿನ 13 ರಾಷ್ಟ್ರಗಳ ಪ್ರವಾಸದಲ್ಲಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‍ರವರು ಮೇ 20ರೊಳಗೆ ಫ್ರಾನ್ಸ್, ನೆದರ್ಲೆಂಡ್, ಸ್ವಿಜರ್‍ಲ್ಯಾಂಡ್ ಮತ್ತು ಇಂಗ್ಲೆಂಡ್ ದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...