Homeಅಂತರಾಷ್ಟ್ರೀಯಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಫ್ರಾನ್ಸ್ ಪ್ರವಾಸದಲ್ಲಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ರವರನ್ನು ಪ್ಯಾರಿಸ್‍ನಲ್ಲಿ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ ಭೇಟಿ ಮಾಡಿದ್ದಾರೆ. ಕೇರಳದ ಆರ್ಥಿಕತೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕೇರಳ ಆರ್ಥಿಕತೆಯ ಮಾದರಿಯನ್ನು ಅಧ್ಯಯನ ನಡೆಸಿ, ಕೆಲ ಶಿಫಾರಸ್ಸುಗಳನ್ನು ನೀಡುವ ಇಂಗಿತವನ್ನು ಪಿಕೆಟಿ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಕೆಟಿಯವರೊಂದಿಗೆ economic disparity in India ಎಂಬ ವಿಷಯದ ಕುರಿತು ಆಳವಾದ ಸಂಶೋಧನೆ ನಡೆಸಿರುವ, World Inequality Database at the Paris School of Economics ನ ಸಹ ಸಂಚಾಲಕರಾದ ಪ್ರೊ.ಲುಕಾಸ್ ಚಾನ್ಸಲ್‍ರವರು ಸಹ ಉಪಸ್ಥಿತರಿದ್ದರು. ಈ ಕುರಿತು ಒಂದು ಗಂಟೆಗಳ ಕಾಲ ಚರ್ಚೆಯನ್ನು ಪಿಣರಾಯಿ ವಿಜಯನ್ ನಡೆಸಿದ್ದಾರೆ.
ಸಮಾಜದಲ್ಲಿರುವ ಆರ್ಥಿಕ ಅಸಮಾನತೆ, ಅದನ್ನು ಸರಿದೂಗಿಸಲು ತೆಗೆದುಕೊಂಡಿರುವ ಕ್ರಮಗಳು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಅಭಿವೃದ್ದಿಪಡಿಸಲು ಮಾಡುತ್ತಿರುವ ಪ್ರಯತ್ನಗಳ ಕುರಿತ ಪಿಣರಾಯಿ ಚರ್ಚಿಸಿದ್ದಾರೆ. ಜೊತೆಗೆ ಅಂಚಿಗೊತ್ತಲ್ಪಟ್ಟ ಸಮುದಾಯಗಳನ್ನು ಮೇಲೆತ್ತಲು ತೆಗೆದುಕೊಂಡಿರುವ ಕ್ರಮಗಳು ಹಾಗೂ ದೇಶಕ್ಕೆ ಮಾದರಿಯಾಗಿರುವ ಅಸಂಘಟಿತ ವಲಯಕ್ಕೆ ನೀಡುತ್ತಿರುವ ಪಿಂಚಣಿ ಯೋಜನೆಗಳ ಕುರಿತು ಪ್ರಸ್ತಾಪಿಸಿದ್ದಾರೆ.

ಆಸ್ತಿ ತೆರಿಗೆ, ಭೂಮಿ ತೆರಿಗೆ ಮತ್ತು ಶ್ರೀಮಂತರಿಗೆ ಹೆಚ್ಚಿನ ತೆರಿಗೆಯನ್ನು ಹಾಕುವ ಮೂಲಕ ಆರ್ಥಿಕ ಅಸಮಾನತೆಯನ್ನು ಸರಿದೂಗಿಸುವ ಸಲಹೆಯನ್ನು ಪಿಕೆಟಿ ನೀಡಿದ್ದಾರೆ. ಅದಕ್ಕೆ ವಿಜಯನ್‍ರವರು, ಪಿಕೆಟಿಯವರನ್ನು ಕೇರಳಕ್ಕೆ ಒಮ್ಮೆ ಭೇಟಿ ನೀಡಿ ಆರ್ಥಿಕ ಅಸಮಾನತೆಗಳ ಕುರಿತ ವಿಶ್ಲೇಷಣೆ ಮತ್ತು ಪರಿಹಾರೋಪಾಯಗಳ ಕುರಿತು ತಿಳಿಸಲು ಆಹ್ವಾನ ನೀಡಿದ್ದಾರೆ.

ಥಾಮಸ್ ಪಿಕೆಟಿಯವರು ಪ್ರತಿಷ್ಠಿತ ಪ್ಯಾರಿಸ್ ಸ್ಕೂಲ್ ಆಫ್ ಎಕಾನಮಿಕ್ಸ್ ಮತ್ತು ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್‍ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಆದಾಯ ಮತ್ತು ಸಂಪತ್ತಿನ ಅಸಮಾನತೆಯ ಕುರಿತು ಹೆಚ್ಚು ಅಧ್ಯಯನ ನಡೆಸಿರುವ ಇರುವ ಫ್ರೆಂಚ್‍ನ ಪ್ರಖ್ಯಾತ ಅರ್ಥತಜ್ಞರು. ಇವರ Capital in the Twenty-First Century ಪುಸ್ತಕ 2013ರಲ್ಲಿ ಬಿಡುಗಡೆಯಾಗಿ ಅಪಾರ ಜನಮನ್ನಣೆ ಗಳಿಸಿದೆ. ಇದು ಕಳೆದ 250 ವರ್ಷಗಳಲ್ಲಾಗಿರುವ ಸಂಪತ್ತಿನ ಕ್ರೋಢೀಕರಣ ಮತ್ತು ಅಸಮಾನ ಹಂಚಿಕೆಯ ಕುರಿತು ಚರ್ಚಿಸುತ್ತದೆ. ಈ ಪುಸ್ತಕವು ಹೆಚ್ಚು ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲೇ ಅತ್ಯಂತ ಹೆಚ್ಚಿನ ಸಂಪತ್ತಿನ ಅಸಮಾನ ಹಂಚಿಕೆಯಿದೆ ಎಂದು ವಾದಿಸುವುದಲ್ಲದೇ, ಸಮರ್ಪಕ ತೆರಿಗೆ ವಿಧಾನಗಳಿಂದ ಮಾತ್ರ ಈ ಸಮಸ್ಯೆ ಬಗೆಹರಿಸಬಹುದೆಂದು ತಿಳಿಸುತ್ತದೆ.

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ. ಭಾರತದಲ್ಲಿನ ಶ್ರೀಮಂತ ವರ್ಗಗಳು ಅಲ್ಲಿನ ಬಡವರನ್ನು ಅತ್ಯಂತ ಕೆಳಮಟ್ಟದಲ್ಲಿ ಕಾಣುತ್ತಿದ್ದು, ಸಂಪತ್ತಿನ ಮರುಹಂಚಿಕೆಯ ರಾಜಕಾರಣಕ್ಕೆ ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯೂರೋಪಿನ 13 ರಾಷ್ಟ್ರಗಳ ಪ್ರವಾಸದಲ್ಲಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‍ರವರು ಮೇ 20ರೊಳಗೆ ಫ್ರಾನ್ಸ್, ನೆದರ್ಲೆಂಡ್, ಸ್ವಿಜರ್‍ಲ್ಯಾಂಡ್ ಮತ್ತು ಇಂಗ್ಲೆಂಡ್ ದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...