Homeಅಂತರಾಷ್ಟ್ರೀಯಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಕೇರಳ ಮಾದರಿ ಕುರಿತು ಪಿಣರಾಯಿ ವಿಜಯನ್ ಜೊತೆ ಚರ್ಚಿಸಿದ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಫ್ರಾನ್ಸ್ ಪ್ರವಾಸದಲ್ಲಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ರವರನ್ನು ಪ್ಯಾರಿಸ್‍ನಲ್ಲಿ ಫ್ರೆಂಚ್ ಆರ್ಥಿಕ ತಜ್ಞ ಥಾಮಸ್ ಪಿಕೆಟಿ ಭೇಟಿ ಮಾಡಿದ್ದಾರೆ. ಕೇರಳದ ಆರ್ಥಿಕತೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕೇರಳ ಆರ್ಥಿಕತೆಯ ಮಾದರಿಯನ್ನು ಅಧ್ಯಯನ ನಡೆಸಿ, ಕೆಲ ಶಿಫಾರಸ್ಸುಗಳನ್ನು ನೀಡುವ ಇಂಗಿತವನ್ನು ಪಿಕೆಟಿ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಕೆಟಿಯವರೊಂದಿಗೆ economic disparity in India ಎಂಬ ವಿಷಯದ ಕುರಿತು ಆಳವಾದ ಸಂಶೋಧನೆ ನಡೆಸಿರುವ, World Inequality Database at the Paris School of Economics ನ ಸಹ ಸಂಚಾಲಕರಾದ ಪ್ರೊ.ಲುಕಾಸ್ ಚಾನ್ಸಲ್‍ರವರು ಸಹ ಉಪಸ್ಥಿತರಿದ್ದರು. ಈ ಕುರಿತು ಒಂದು ಗಂಟೆಗಳ ಕಾಲ ಚರ್ಚೆಯನ್ನು ಪಿಣರಾಯಿ ವಿಜಯನ್ ನಡೆಸಿದ್ದಾರೆ.
ಸಮಾಜದಲ್ಲಿರುವ ಆರ್ಥಿಕ ಅಸಮಾನತೆ, ಅದನ್ನು ಸರಿದೂಗಿಸಲು ತೆಗೆದುಕೊಂಡಿರುವ ಕ್ರಮಗಳು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಅಭಿವೃದ್ದಿಪಡಿಸಲು ಮಾಡುತ್ತಿರುವ ಪ್ರಯತ್ನಗಳ ಕುರಿತ ಪಿಣರಾಯಿ ಚರ್ಚಿಸಿದ್ದಾರೆ. ಜೊತೆಗೆ ಅಂಚಿಗೊತ್ತಲ್ಪಟ್ಟ ಸಮುದಾಯಗಳನ್ನು ಮೇಲೆತ್ತಲು ತೆಗೆದುಕೊಂಡಿರುವ ಕ್ರಮಗಳು ಹಾಗೂ ದೇಶಕ್ಕೆ ಮಾದರಿಯಾಗಿರುವ ಅಸಂಘಟಿತ ವಲಯಕ್ಕೆ ನೀಡುತ್ತಿರುವ ಪಿಂಚಣಿ ಯೋಜನೆಗಳ ಕುರಿತು ಪ್ರಸ್ತಾಪಿಸಿದ್ದಾರೆ.

ಆಸ್ತಿ ತೆರಿಗೆ, ಭೂಮಿ ತೆರಿಗೆ ಮತ್ತು ಶ್ರೀಮಂತರಿಗೆ ಹೆಚ್ಚಿನ ತೆರಿಗೆಯನ್ನು ಹಾಕುವ ಮೂಲಕ ಆರ್ಥಿಕ ಅಸಮಾನತೆಯನ್ನು ಸರಿದೂಗಿಸುವ ಸಲಹೆಯನ್ನು ಪಿಕೆಟಿ ನೀಡಿದ್ದಾರೆ. ಅದಕ್ಕೆ ವಿಜಯನ್‍ರವರು, ಪಿಕೆಟಿಯವರನ್ನು ಕೇರಳಕ್ಕೆ ಒಮ್ಮೆ ಭೇಟಿ ನೀಡಿ ಆರ್ಥಿಕ ಅಸಮಾನತೆಗಳ ಕುರಿತ ವಿಶ್ಲೇಷಣೆ ಮತ್ತು ಪರಿಹಾರೋಪಾಯಗಳ ಕುರಿತು ತಿಳಿಸಲು ಆಹ್ವಾನ ನೀಡಿದ್ದಾರೆ.

ಥಾಮಸ್ ಪಿಕೆಟಿಯವರು ಪ್ರತಿಷ್ಠಿತ ಪ್ಯಾರಿಸ್ ಸ್ಕೂಲ್ ಆಫ್ ಎಕಾನಮಿಕ್ಸ್ ಮತ್ತು ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್‍ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಆದಾಯ ಮತ್ತು ಸಂಪತ್ತಿನ ಅಸಮಾನತೆಯ ಕುರಿತು ಹೆಚ್ಚು ಅಧ್ಯಯನ ನಡೆಸಿರುವ ಇರುವ ಫ್ರೆಂಚ್‍ನ ಪ್ರಖ್ಯಾತ ಅರ್ಥತಜ್ಞರು. ಇವರ Capital in the Twenty-First Century ಪುಸ್ತಕ 2013ರಲ್ಲಿ ಬಿಡುಗಡೆಯಾಗಿ ಅಪಾರ ಜನಮನ್ನಣೆ ಗಳಿಸಿದೆ. ಇದು ಕಳೆದ 250 ವರ್ಷಗಳಲ್ಲಾಗಿರುವ ಸಂಪತ್ತಿನ ಕ್ರೋಢೀಕರಣ ಮತ್ತು ಅಸಮಾನ ಹಂಚಿಕೆಯ ಕುರಿತು ಚರ್ಚಿಸುತ್ತದೆ. ಈ ಪುಸ್ತಕವು ಹೆಚ್ಚು ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲೇ ಅತ್ಯಂತ ಹೆಚ್ಚಿನ ಸಂಪತ್ತಿನ ಅಸಮಾನ ಹಂಚಿಕೆಯಿದೆ ಎಂದು ವಾದಿಸುವುದಲ್ಲದೇ, ಸಮರ್ಪಕ ತೆರಿಗೆ ವಿಧಾನಗಳಿಂದ ಮಾತ್ರ ಈ ಸಮಸ್ಯೆ ಬಗೆಹರಿಸಬಹುದೆಂದು ತಿಳಿಸುತ್ತದೆ.

ಇತ್ತೀಚೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಂಡ ನ್ಯಾಯ್ ಯೋಜನೆಯ ತಯಾರಿಕೆಯಲ್ಲಿಯು ಥಾಮಸ್ ಪಿಕೆಟಿಯವರು ಕೆಲಸ ಮಾಡಿದ್ದಾರೆ. ಭಾರತದಲ್ಲಿನ ಶ್ರೀಮಂತ ವರ್ಗಗಳು ಅಲ್ಲಿನ ಬಡವರನ್ನು ಅತ್ಯಂತ ಕೆಳಮಟ್ಟದಲ್ಲಿ ಕಾಣುತ್ತಿದ್ದು, ಸಂಪತ್ತಿನ ಮರುಹಂಚಿಕೆಯ ರಾಜಕಾರಣಕ್ಕೆ ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯೂರೋಪಿನ 13 ರಾಷ್ಟ್ರಗಳ ಪ್ರವಾಸದಲ್ಲಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‍ರವರು ಮೇ 20ರೊಳಗೆ ಫ್ರಾನ್ಸ್, ನೆದರ್ಲೆಂಡ್, ಸ್ವಿಜರ್‍ಲ್ಯಾಂಡ್ ಮತ್ತು ಇಂಗ್ಲೆಂಡ್ ದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...