Homeಮುಖಪುಟತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ ಆರೋಪಿಗಳಾದ ಎಲ್ಲಾ ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ದೋಷಿಗಳು ಎಂದು ಸೋಮವಾರ (ಮಾರ್ಚ್ 23, 2026) ನ್ಯಾಯಾಲಯ ಘೋಷಿಸಿದೆ.

ತಂದೆ ಮಗ ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆಯಿಂದ ಸಾವನ್ನಪ್ಪಿದ ಸುಮಾರು ಆರು ವರ್ಷಗಳ ನಂತರ, ಮದುರೈನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಜಿ. ಮುತ್ತುಕುಮಾರನ್ ಅವರು ಮಾರ್ಚ್ 30ರಂದು ಶಿಕ್ಷೆ ಪ್ರಮಾಣವನ್ನು ಪ್ರಕಟಿಸುವುದಾಗಿ ಹೇಳಿದ್ದು, ಅಲ್ಲಿಯವರೆಗೆ ಅಪರಾಧಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.

ನ್ಯಾಯಾಧೀಶರು ಆರೋಪಿಗಳಾದ ಪೊಲೀಸ್ ಸಿಬ್ಬಂದಿಯನ್ನು ಕೊಲೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ಸೆಕ್ಷನ್‌ಗಳಡಿ ದೋಷಿಗಳೆಂದು ಘೋಷಿಸಿದ್ದಾರೆ. ಅಪರಾಧಿಗಳಾದ ಪೊಲೀಸ್ ಸಿಬ್ಬಂದಿಯ ವೈದ್ಯಕೀಯ ಸ್ಥಿತಿಗತಿಯ ಬಗ್ಗೆ ನ್ಯಾಯಾಧೀಶರು ವರದಿಯನ್ನು ಕೇಳಿದ್ದು, ಮದುರೈ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಅಪರಾಧಿಗಳನ್ನು ಮದುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ಮುಂದೆ ಹಾಜರುಪಡಿಸಲು ಸೂಚಿಸಿದ್ದಾರೆ. ಅವರ ಕೊನೆಯ ಆಸ್ತಿ ವಿವರ ಮತ್ತು ಸಂಬಳದ ಪ್ರಮಾಣಪತ್ರಗಳ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಅಷ್ಟೇ ಅಲ್ಲದೆ, ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ಸಹಕಾರಿಯಾಗುವಂತಹ ಪೂರಕ ಅಥವಾ ತಗ್ಗಿಸುವ ಸಂದರ್ಭಗಳ (aggravating/mitigating circumstances) ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವರದಿಯನ್ನು ನ್ಯಾಯಾಲಯ ಕೇಳಿದೆ.

ಶಿಕ್ಷೆ ನೀಡುವ ಮೊದಲು ನ್ಯಾಯಾಲಯವು ‘ಈ ಅಪರಾಧ ಎಷ್ಟು ಘೋರವಾಗಿದೆ?’ ಮತ್ತು ‘ಅಪರಾಧಿಗೆ ರಿಯಾಯಿತಿ ನೀಡಲು ಯಾವುದಾದರೂ ಮಾನವೀಯ ಕಾರಣಗಳಿವೆಯೇ?’ ಎಂದು ಪರಿಶೀಲಿಸಲು ಈ ವರದಿಗಳನ್ನು ಕೇಳುತ್ತದೆ.

2020ರ ಜೂನ್‌ನಲ್ಲಿ ನಡೆದ ಕಸ್ಟಡಿ ಸಾವು ಘಟನೆಯು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿತ್ತು ಮತ್ತು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠವು ಈ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ಸರ್ಕಾರಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು.

ಈ ಪ್ರಕರಣದಲ್ಲಿ ಒಟ್ಟು 10 ಪೊಲೀಸ್ ಸಿಬ್ಬಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಅವರಲ್ಲಿ ಒಬ್ಬರು ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟಿದ್ದರು. ಉಳಿದ ಒಂಬತ್ತು ಪೊಲೀಸ್ ಸಿಬ್ಬಂದಿಯ ವಿಚಾರಣೆ ಸಿಬಿಐ ನ್ಯಾಯಾಲಯದಲ್ಲಿ ನಡೆದಿತ್ತು.

ಸಿಬಿಐ ಸೆಪ್ಟೆಂಬರ್ 25, 2020ರಂದು ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿತ್ತು. ಆಗಸ್ಟ್ 12, 2022ರಂದು ಪೂರಕ ಚಾರ್ಜ್‌ಶೀಟ್ ಅನ್ನು ದಾಖಲಿಸಿತ್ತು. ಅದರಲ್ಲಿ ಸಾತನ್‌ಕುಳಂ ಇನ್ಸ್‌ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್. ಮುರುಗನ್ ಮತ್ತು ಎ. ಸಾಮಿದುರೈ, ಹಾಗೂ ಕಾನ್‌ಸ್ಟೆಬಲ್‌ಗಳಾದ ಎಂ. ಮುತ್ತುರಾಜ್, ಎಸ್. ಚೆಲ್ಲದುರೈ, ಎಕ್ಸ್. ಥಾಮಸ್ ಫ್ರಾನ್ಸಿಸ್ ಮತ್ತು ಎಸ್. ವೈಲುಮುತ್ತು ಅವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸ್ಪೆಷಲ್ ಸಬ್ ಇನ್ಸ್‌ಪೆಕ್ಟರ್ ಪಾಲ್‌ದೊರೈ ಕೂಡ ಆರೋಪಿಯಾಗಿದ್ದರು, ಆದರೆ ವಿಚಾರಣೆಯ ಅವಧಿಯಲ್ಲಿ ಅವರು ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟರು.

ಸಿಬಿಐ ತನ್ನ ಚಾರ್ಜ್‌ ಶೀಟ್‌ನಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರ ಸಾವು ಸಂಭವಿಸಬಹುದು ಎಂದು ತಿಳಿದಿದ್ದರೂ ಪೊಲೀಸರು ಅವರಿಗೆ ಅತ್ಯಂತ ಕ್ರೂರವಾದ ಚಿತ್ರಹಿಂಸೆ ನೀಡಿದ್ದಾರೆ. ಪೊಲೀಸರು ತಂದೆ-ಮಗ ಕೋವಿಡ್-19 ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಿದ್ದರು. ಆದರೆ, ತನಿಖೆಯ ಸಮಯದಲ್ಲಿ ಅವರು ಯಾವುದೇ ನಿಯಮಗಳನ್ನು ಉಲ್ಲಂಘಿಸಿರಲಿಲ್ಲ ಎಂದು ತಿಳಿದು ಬಂದಿರುವುದಾಗಿ ಹೇಳಿತ್ತು.

ಸಿಬಿಐ ತನಿಖೆಯ ಪ್ರಕಾರ, ಜೂನ್ 19, 2020ರಂದು ಸಾತನ್‌ಕುಳಂ ಪಟ್ಟಣದ ಕಾಮರಾಜ್ ಪ್ರತಿಮೆಯ ಸಮೀಪದ ಅಂಗಡಿಯಿಂದ ಜಯರಾಜ್ ಅವರನ್ನು ಬಂಧಿಸಿ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಕೂಡಿಹಾಕಲಾಗಿತ್ತು. ತಂದೆಯ ಬಂಧನದ ಬಗ್ಗೆ ವಿಚಾರಿಸಲು ತೆರಳಿದ್ದ ಬೆನಿಕ್ಸ್ ಸೇರಿದಂತೆ ಇಬ್ಬರನ್ನೂ ಪೊಲೀಸರು ಕ್ರೂರವಾಗಿ ಥಳಿಸಿ, ಠಾಣೆಯಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ್ದರು.

ರಾತ್ರಿಯಿಡೀ ಪೊಲೀಸರ ಚಿತ್ರಹಿಂಸೆ ಮುಂದುವರಿದಿತ್ತು. ಜಯರಾಜ್ ಮತ್ತು ಬೆನಿಕ್ಸ್ ಅವರು ತಮ್ಮ ಗಾಯಗಳಿಂದ ಸೋರುತ್ತಿದ್ದ ರಕ್ತವನ್ನು ತಾವೇ ಸ್ವಚ್ಛಗೊಳಿಸುವಂತೆ ಪೊಲೀಸರು ಒತ್ತಾಯಿಸಿದ್ದರು. ಮರುದಿನ ಬೆಳಿಗ್ಗೆ, ಸಾಕ್ಷ್ಯವನ್ನು ನಾಶಪಡಿಸುವ ಉದ್ದೇಶದಿಂದ ಪೌರಕಾರ್ಮಿಕರೊಬ್ಬರನ್ನು ಕರೆಸಿ ರಕ್ತದ ಕಲೆಗಳನ್ನು ಅಳಿಸಿಹಾಕಿದ್ದರು. ಇದರ ಜೊತೆಗೆ, ಅವರಿಬ್ಬರ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಿದ್ದರು ಎಂದು ಸಿಬಿಐ ತಿಳಿಸಿದೆ. ಪೂರಕ ಚಾರ್ಜ್‌ಶೀಟ್‌ನಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳ ಪರಿಶೀಲನಾ ವರದಿಯನ್ನು ಕೂಡ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಮದುರೈ ಪೀಠವು ಮಹಿಳಾ ಹೆಡ್ ಕಾನ್‌ಸ್ಟೆಬಲ್ ಸಾಕ್ಷ್ಯ, ವೈದ್ಯಕೀಯ ವರದಿ ಮತ್ತು ಮ್ಯಾಜಿಸ್ಟ್ರೇಟ್ ವರದಿಯನ್ನು ಪರಿಗಣಿಸಿ, ಕಸ್ಟಡಿ ಸಾವಿನಲ್ಲಿ ಭಾಗಿಯಾದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮೇಲ್ನೋಟಕ್ಕೆ ಆಧಾರಗಳಿವೆ ಎಂದು ಹೇಳಿದೆ. ನ್ಯಾಯಾಂಗ ತನಿಖೆಯು ಪೊಲೀಸರ ಅಮಾನವೀಯ ವರ್ತನೆಯನ್ನು ಬಹಿರಂಗಪಡಿಸಿದೆ.

 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...