Homeಮುಖಪುಟತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ ಆರೋಪಿಗಳಾದ ಎಲ್ಲಾ ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ದೋಷಿಗಳು ಎಂದು ಸೋಮವಾರ (ಮಾರ್ಚ್ 23, 2026) ನ್ಯಾಯಾಲಯ ಘೋಷಿಸಿದೆ.

ತಂದೆ ಮಗ ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆಯಿಂದ ಸಾವನ್ನಪ್ಪಿದ ಸುಮಾರು ಆರು ವರ್ಷಗಳ ನಂತರ, ಮದುರೈನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಜಿ. ಮುತ್ತುಕುಮಾರನ್ ಅವರು ಮಾರ್ಚ್ 30ರಂದು ಶಿಕ್ಷೆ ಪ್ರಮಾಣವನ್ನು ಪ್ರಕಟಿಸುವುದಾಗಿ ಹೇಳಿದ್ದು, ಅಲ್ಲಿಯವರೆಗೆ ಅಪರಾಧಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.

ನ್ಯಾಯಾಧೀಶರು ಆರೋಪಿಗಳಾದ ಪೊಲೀಸ್ ಸಿಬ್ಬಂದಿಯನ್ನು ಕೊಲೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ಸೆಕ್ಷನ್‌ಗಳಡಿ ದೋಷಿಗಳೆಂದು ಘೋಷಿಸಿದ್ದಾರೆ. ಅಪರಾಧಿಗಳಾದ ಪೊಲೀಸ್ ಸಿಬ್ಬಂದಿಯ ವೈದ್ಯಕೀಯ ಸ್ಥಿತಿಗತಿಯ ಬಗ್ಗೆ ನ್ಯಾಯಾಧೀಶರು ವರದಿಯನ್ನು ಕೇಳಿದ್ದು, ಮದುರೈ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಅಪರಾಧಿಗಳನ್ನು ಮದುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ಮುಂದೆ ಹಾಜರುಪಡಿಸಲು ಸೂಚಿಸಿದ್ದಾರೆ. ಅವರ ಕೊನೆಯ ಆಸ್ತಿ ವಿವರ ಮತ್ತು ಸಂಬಳದ ಪ್ರಮಾಣಪತ್ರಗಳ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಅಷ್ಟೇ ಅಲ್ಲದೆ, ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ಸಹಕಾರಿಯಾಗುವಂತಹ ಪೂರಕ ಅಥವಾ ತಗ್ಗಿಸುವ ಸಂದರ್ಭಗಳ (aggravating/mitigating circumstances) ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವರದಿಯನ್ನು ನ್ಯಾಯಾಲಯ ಕೇಳಿದೆ.

ಶಿಕ್ಷೆ ನೀಡುವ ಮೊದಲು ನ್ಯಾಯಾಲಯವು ‘ಈ ಅಪರಾಧ ಎಷ್ಟು ಘೋರವಾಗಿದೆ?’ ಮತ್ತು ‘ಅಪರಾಧಿಗೆ ರಿಯಾಯಿತಿ ನೀಡಲು ಯಾವುದಾದರೂ ಮಾನವೀಯ ಕಾರಣಗಳಿವೆಯೇ?’ ಎಂದು ಪರಿಶೀಲಿಸಲು ಈ ವರದಿಗಳನ್ನು ಕೇಳುತ್ತದೆ.

2020ರ ಜೂನ್‌ನಲ್ಲಿ ನಡೆದ ಕಸ್ಟಡಿ ಸಾವು ಘಟನೆಯು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿತ್ತು ಮತ್ತು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠವು ಈ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ಸರ್ಕಾರಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು.

ಈ ಪ್ರಕರಣದಲ್ಲಿ ಒಟ್ಟು 10 ಪೊಲೀಸ್ ಸಿಬ್ಬಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಅವರಲ್ಲಿ ಒಬ್ಬರು ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟಿದ್ದರು. ಉಳಿದ ಒಂಬತ್ತು ಪೊಲೀಸ್ ಸಿಬ್ಬಂದಿಯ ವಿಚಾರಣೆ ಸಿಬಿಐ ನ್ಯಾಯಾಲಯದಲ್ಲಿ ನಡೆದಿತ್ತು.

ಸಿಬಿಐ ಸೆಪ್ಟೆಂಬರ್ 25, 2020ರಂದು ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿತ್ತು. ಆಗಸ್ಟ್ 12, 2022ರಂದು ಪೂರಕ ಚಾರ್ಜ್‌ಶೀಟ್ ಅನ್ನು ದಾಖಲಿಸಿತ್ತು. ಅದರಲ್ಲಿ ಸಾತನ್‌ಕುಳಂ ಇನ್ಸ್‌ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್. ಮುರುಗನ್ ಮತ್ತು ಎ. ಸಾಮಿದುರೈ, ಹಾಗೂ ಕಾನ್‌ಸ್ಟೆಬಲ್‌ಗಳಾದ ಎಂ. ಮುತ್ತುರಾಜ್, ಎಸ್. ಚೆಲ್ಲದುರೈ, ಎಕ್ಸ್. ಥಾಮಸ್ ಫ್ರಾನ್ಸಿಸ್ ಮತ್ತು ಎಸ್. ವೈಲುಮುತ್ತು ಅವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸ್ಪೆಷಲ್ ಸಬ್ ಇನ್ಸ್‌ಪೆಕ್ಟರ್ ಪಾಲ್‌ದೊರೈ ಕೂಡ ಆರೋಪಿಯಾಗಿದ್ದರು, ಆದರೆ ವಿಚಾರಣೆಯ ಅವಧಿಯಲ್ಲಿ ಅವರು ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟರು.

ಸಿಬಿಐ ತನ್ನ ಚಾರ್ಜ್‌ ಶೀಟ್‌ನಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರ ಸಾವು ಸಂಭವಿಸಬಹುದು ಎಂದು ತಿಳಿದಿದ್ದರೂ ಪೊಲೀಸರು ಅವರಿಗೆ ಅತ್ಯಂತ ಕ್ರೂರವಾದ ಚಿತ್ರಹಿಂಸೆ ನೀಡಿದ್ದಾರೆ. ಪೊಲೀಸರು ತಂದೆ-ಮಗ ಕೋವಿಡ್-19 ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಿದ್ದರು. ಆದರೆ, ತನಿಖೆಯ ಸಮಯದಲ್ಲಿ ಅವರು ಯಾವುದೇ ನಿಯಮಗಳನ್ನು ಉಲ್ಲಂಘಿಸಿರಲಿಲ್ಲ ಎಂದು ತಿಳಿದು ಬಂದಿರುವುದಾಗಿ ಹೇಳಿತ್ತು.

ಸಿಬಿಐ ತನಿಖೆಯ ಪ್ರಕಾರ, ಜೂನ್ 19, 2020ರಂದು ಸಾತನ್‌ಕುಳಂ ಪಟ್ಟಣದ ಕಾಮರಾಜ್ ಪ್ರತಿಮೆಯ ಸಮೀಪದ ಅಂಗಡಿಯಿಂದ ಜಯರಾಜ್ ಅವರನ್ನು ಬಂಧಿಸಿ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಕೂಡಿಹಾಕಲಾಗಿತ್ತು. ತಂದೆಯ ಬಂಧನದ ಬಗ್ಗೆ ವಿಚಾರಿಸಲು ತೆರಳಿದ್ದ ಬೆನಿಕ್ಸ್ ಸೇರಿದಂತೆ ಇಬ್ಬರನ್ನೂ ಪೊಲೀಸರು ಕ್ರೂರವಾಗಿ ಥಳಿಸಿ, ಠಾಣೆಯಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ್ದರು.

ರಾತ್ರಿಯಿಡೀ ಪೊಲೀಸರ ಚಿತ್ರಹಿಂಸೆ ಮುಂದುವರಿದಿತ್ತು. ಜಯರಾಜ್ ಮತ್ತು ಬೆನಿಕ್ಸ್ ಅವರು ತಮ್ಮ ಗಾಯಗಳಿಂದ ಸೋರುತ್ತಿದ್ದ ರಕ್ತವನ್ನು ತಾವೇ ಸ್ವಚ್ಛಗೊಳಿಸುವಂತೆ ಪೊಲೀಸರು ಒತ್ತಾಯಿಸಿದ್ದರು. ಮರುದಿನ ಬೆಳಿಗ್ಗೆ, ಸಾಕ್ಷ್ಯವನ್ನು ನಾಶಪಡಿಸುವ ಉದ್ದೇಶದಿಂದ ಪೌರಕಾರ್ಮಿಕರೊಬ್ಬರನ್ನು ಕರೆಸಿ ರಕ್ತದ ಕಲೆಗಳನ್ನು ಅಳಿಸಿಹಾಕಿದ್ದರು. ಇದರ ಜೊತೆಗೆ, ಅವರಿಬ್ಬರ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಿದ್ದರು ಎಂದು ಸಿಬಿಐ ತಿಳಿಸಿದೆ. ಪೂರಕ ಚಾರ್ಜ್‌ಶೀಟ್‌ನಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳ ಪರಿಶೀಲನಾ ವರದಿಯನ್ನು ಕೂಡ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಮದುರೈ ಪೀಠವು ಮಹಿಳಾ ಹೆಡ್ ಕಾನ್‌ಸ್ಟೆಬಲ್ ಸಾಕ್ಷ್ಯ, ವೈದ್ಯಕೀಯ ವರದಿ ಮತ್ತು ಮ್ಯಾಜಿಸ್ಟ್ರೇಟ್ ವರದಿಯನ್ನು ಪರಿಗಣಿಸಿ, ಕಸ್ಟಡಿ ಸಾವಿನಲ್ಲಿ ಭಾಗಿಯಾದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮೇಲ್ನೋಟಕ್ಕೆ ಆಧಾರಗಳಿವೆ ಎಂದು ಹೇಳಿದೆ. ನ್ಯಾಯಾಂಗ ತನಿಖೆಯು ಪೊಲೀಸರ ಅಮಾನವೀಯ ವರ್ತನೆಯನ್ನು ಬಹಿರಂಗಪಡಿಸಿದೆ.

 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...