Homeಮುಖಪುಟತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ ಅಪರಾಧಿಗಳಾದ ಎಲ್ಲಾ ಒಂಬತ್ತು ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈನ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಏಪ್ರಿಲ್ 6) ಐತಿಹಾಸಿಕ ತೀರ್ಪು ನೀಡಿದೆ.

“ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬಾಧ್ಯಸ್ಥರಾಗಿರುವ ಪೊಲೀಸ್ ಅಧಿಕಾರಿಗಳೇ ಕಾನೂನಿಗೆ ವಿರುದ್ಧವಾಗಿ ವರ್ತಿಸಿ, ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲದ ತಂದೆ- ಮಗನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಅಪರೂಪದ ಪ್ರಕರಣ ಇದಾಗಿದೆ ಎಂದು ತೀರ್ಪು ಪ್ರಕಟಿಸಿದ ನ್ಯಾಯಾಧೀಶ ಮುತ್ತುಕುಮಾರನ್ ಅವರು ಅಭಿಪ್ರಾಯಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಅಧಿಕಾರಿಗಳು ಒಟ್ಟು 1.40 ಕೋಟಿ ರೂ. ಪರಿಹಾರವನ್ನು ನೀಡುವಂತೆಯೂ ಆದೇಶಿಸಿದ್ದಾರೆ.

ಮಾರ್ಚ್ 23ರಂದು, ನ್ಯಾಯಾಲಯವು ಒಂಬತ್ತು ಪೊಲೀಸ್ ಅಧಿಕಾರಿಗಳನ್ನು ಐಪಿಸಿ ಸೆಕ್ಷನ್ 342, 195, 211, 218 ಮತ್ತು 302 ರ ಜೊತೆಗೆ ಸೆಕ್ಷನ್ 109 ಮತ್ತು 34 ರ ಅಡಿಯಲ್ಲಿ ಅಪರಾಧಿಗಳು ಎಂದು ಘೋಷಿಸಿತ್ತು. ಅಪರಾಧಿಗಳ ಹಿಂದಿನ ಆಸ್ತಿ ವಿವರ ಮತ್ತು ಅವರ ಸಂಬಳದ ಪ್ರಮಾಣಪತ್ರದ ಬಗ್ಗೆ ವರದಿ ನೀಡುವಂತೆ ನ್ಯಾಯಾಲಯವು ಸೂಚಿಸಿತ್ತು. ಅಲ್ಲದೆ, ಶಿಕ್ಷೆಯನ್ನು ಹೆಚ್ಚಿಸುವ ಅಥವಾ ಕಡಿಮೆ ಮಾಡುವ ಸಂದರ್ಭಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವರದಿಯನ್ನು ಕೇಳಿತ್ತು. ಇದರ ನಂತರ, ಏಪ್ರಿಲ್ 2ರಂದು ವರದಿಗಳನ್ನು ಸಲ್ಲಿಸಲಾಯಿತು ಮತ್ತು ಶಿಕ್ಷೆಯ ಪ್ರಮಾಣದ ಕುರಿತು ನ್ಯಾಯಾಲಯವು ವಾದ-ಪ್ರತಿವಾದಗಳನ್ನು ಆಲಿಸಿತು. ಸಿಬಿಐ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆಗೆ ಒತ್ತಾಯಿಸಿದ್ದರೆ, ಆರೋಪಿಗಳ ಪರ ವಕೀಲರು ಕನಿಷ್ಠ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದರು.

ಘೋರ ಘಟನೆಯ ಆರು ವರ್ಷಗಳ ನಂತರ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. 2020ರ ಜೂನ್‌ನಲ್ಲಿ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ರಾತ್ರಿ 9 ಗಂಟೆಯ ನಂತರವೂ ತಮ್ಮ ಅಂಗಡಿಯನ್ನು ತೆರೆದಿದ್ದರು ಎಂಬ ಆರೋಪದ ಮೇಲೆ ಸಾತನ್‌ಕುಳಂ ಪೊಲೀಸರು ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಅಕ್ರಮವಾಗಿ ಬಂಧಿಸಿಟ್ಟು ಹಲ್ಲೆ ನಡೆಸಿದ್ದರು. ಕಸ್ಟಡಿ ಹಲ್ಲೆಯಿಂದ ತಂದೆ-ಮಗ ಸಾವನ್ನಪ್ಪಿದ್ದರು.

ಜೂನ್ 19 ತಂದೆ-ಮಗನನ್ನು ಸಾತನ್‌ಕುಳಂ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಪೊಲೀಸರು ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದರು. ನಂತರ ಐಪಿಸಿ ಸೆಕ್ಷನ್ 188, 269, 294(ಬಿ), 353 ಮತ್ತು 506(2) ರ ಅಡಿಯಲ್ಲಿ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಮಗ ಬೆನ್ನಿಕ್ಸ್ ಜೂನ್ 22ರಂದು ಗಾಯಗಳಿಗೆ ಕೊನೆಯುಸಿರೆಳೆದರೆ, ತಂದೆ ಜಯರಾಜ್ ಜೂನ್ 23ರಂದು ಸಾವಿಗೀಡಾದರು.

ಸಾವಿನ ನಂತರ, 10 ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಯಿತು ಮತ್ತು ಅವರ ವಿರುದ್ಧ ಶಿಸ್ತು ಕ್ರಮವನ್ನೂ ತೆಗೆದುಕೊಳ್ಳಲಾಯಿತು. ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಈ ವಿಷಯದ ಬಗ್ಗೆ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತು. ವಿಚಾರಣೆಯ ಸಂದರ್ಭದಲ್ಲಿ, ಅಧಿಕಾರಿಗಳ ವಿರುದ್ಧ ಕೊಲೆ ಆರೋಪ ಹೊರಿಸಲು ಮೇಲ್ನೋಟಕ್ಕೆ (prima facie) ಸಾಕಷ್ಟು ಸಾಕ್ಷ್ಯಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದ ಪುರಾವೆಗಳನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗಮನಿಸಿದ ನ್ಯಾಯಾಲಯವು, ತನಿಖೆಯನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ಸಿಬಿ-ಸಿಐಡಿ ಡಿವೈಎಸ್ಪಿಯವರಿಗೆ ನಿರ್ದೇಶನ ನೀಡಿತ್ತು.

ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ವಿನಂತಿಯ ಮೇರೆಗೆ ರಾಜ್ಯ ಸರ್ಕಾರವು ಈ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು. ಅಂದಿನ ಇನ್‌ಸ್ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್, ಹೆಡ್ ಕಾನ್‌ಸ್ಟೇಬಲ್‌ಗಳಾದ ಎಸ್. ಮುರುಗನ್ ಮತ್ತು ಎ. ಸಾಮಿ ದೊರೈ, ಹಾಗೂ ಕಾನ್‌ಸ್ಟೇಬಲ್‌ಗಳಾದ ಎಂ. ಮುತ್ತುರಾಜ್, ಎಸ್. ಚೆಲ್ಲದೊರೈ, ಎಕ್ಸ್. ಥಾಮಸ್ ಫ್ರಾನ್ಸಿಸ್, ಎಸ್. ವೈಲುಮುತ್ತು ಮತ್ತು ವಿಶೇಷ ಸಬ್ ಇನ್‌ಸ್ಪೆಕ್ಟರ್ ಪಾಲ್‌ದೊರೈ ಅವರ ವಿರುದ್ಧ ಐಪಿಸಿ ಸೆಕ್ಷನ್ 302, 342, 201, 182, 193, 211, 218, 120(B) ಮತ್ತು 34 ರ ಅಡಿಯಲ್ಲಿ ದೋಷಾರೋಪಣೆ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ, ವಿಚಾರಣೆ ಬಾಕಿ ಇರುವಾಗಲೇ ಪಾಲ್‌ದೊರೈ ಅವರು ಕೋವಿಡ್-19 ನಿಂದಾಗಿ ಮೃತಪಟ್ಟರು. 

ಸೋಮವಾರ ತೀರ್ಪು ಓದಿದ ನ್ಯಾಯಾಧೀಶರು, ಜಯರಾಜ್ ಮತ್ತು ಬೆನ್ನಿಕ್ಸ್ ಅವರಿಗೆ ಉಂಟಾದ ಗಾಯಗಳು ಅಸಹಜವಾಗಿದ್ದವು ಮತ್ತು ಇವೇ ಅಂತಿಮವಾಗಿ ಅವರ ಸಾವಿಗೆ ಕಾರಣವಾದವು ಎಂದು ಹೇಳಿದ್ದಾರೆ. ಈ ಗಾಯಗಳು ಸ್ವಯಂ-ಪ್ರೇರಿತ (ತಮಗೆ ತಾವೇ ಮಾಡಿಕೊಂಡಿದ್ದು) ಎಂಬ ವಾದವನ್ನು ನ್ಯಾಯಾಲಯವು ತಿರಸ್ಕರಿಸಿದೆ. ಅಲ್ಲದೆ, ಮರಣೋತ್ತರ ಪರೀಕ್ಷೆಯ ವರದಿಗಳು ಈ ಗಾಯಗಳು ನಿರಂತರ ಹಲ್ಲೆಯ ಪರಿಣಾಮವಾಗಿ ಉಂಟಾದವು ಎಂದು ಬಹಿರಂಗಪಡಿಸಿವೆ ಎಂಬುದನ್ನು ನ್ಯಾಯಾಲಯವು ಉಲ್ಲೇಖಿಸಿದೆ.

ಜಯರಾಜ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಗಳಿತ್ತು. ಆದರೂ, ಅವರ ಸಾವು ಆ ಕಾಯಿಲೆಯಿಂದ ಸಂಭವಿಸಿದೆ ಎಂದು ಹೇಳಲು ಸಾಧ್ಯವಿಲ್ಲ ಮತ್ತು ವಾಸ್ತವವಾಗಿ ಪೊಲೀಸರ ಕೈಯಿಂದ ಅನುಭವಿಸಿದ ನಿರಂತರ ಹಲ್ಲೆ ಹಾಗೂ ಗಾಯಗಳೇ ಸಾವಿಗೆ ಕಾರಣ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಮೂಲಕ, ಇದು ಕೊಲೆ ಪ್ರಕರಣವೆಂದು ನ್ಯಾಯಾಲಯವು ತೀರ್ಮಾನಿಸಿ, ಒಂಬತ್ತು ಪೊಲೀಸ್ ಅಧಿಕಾರಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದೆ.

Courtesy : livelaw.in


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...