Homeಅಂಕಣಗಳುಅಂತೂ ಭಾರತದ ವರ್ಚಸ್ಸು ಬೆಳಗಿತು!

ಅಂತೂ ಭಾರತದ ವರ್ಚಸ್ಸು ಬೆಳಗಿತು!

- Advertisement -
- Advertisement -

ಪ್ರಪಂಚ ಆಗಾಗ್ಗೆ ಹಿಟ್ಲರ್‌ನನ್ನ ನೆನಸಿಕೊಂಡು ಬೆಚ್ಚುತ್ತಿತ್ತು. ಆತನ ಭಯಾನಕ ಯುಗವೊಂದು ಅಂತ್ಯವಾದುದಕ್ಕೆ ನಿಟ್ಟುಸಿರುಬಿಟ್ಟಿತ್ತು. ಆದರೇನು ಆತನ ಭೂತ ರಷ್ಯಾದಲ್ಲಿ ವಕ್ಕರಿಸಿದೆಯಂತಲ್ಲಾ. ರಷ್ಯಾದ ಅಧ್ಯಕ್ಷ ಪುಟಿನ್ ದೇಹವನ್ನ ಹೊಕ್ಕ ಹಿಟ್ಲರ್ ಭೂತ, ಜಗತ್ತಿನ ನಾಶದ ಬಗ್ಗೆ ಮಾತನಾಡುತ್ತಿದ್ದಾನಲ್ಲಾ. ಜಗತ್ತಿನ ಸರ್ವಾಧಿಕಾರಿಗಳ ಅಂತ್ಯವೆಲ್ಲಾ ಕೆಟ್ಟದಾಗಿ ಕೊನೆಯಾಗಿದೆ. ವಿನಾಶಕಾರಿ ಸಾಹಸಕ್ಕೆ ಕೈಹಾಕಿರುವ ಪುಟಿನ್, ತನ್ನ ಅಂತ್ಯದವರೆಗೂ ವಿರಮಿಸುವಂತೆ ಕಾಣುತ್ತಿಲ್ಲ. ಈ ನಡುವೆ, ಎಲ್ಲ ಹೊಡೆದಾಡಿ ಸತ್ತರೆ ನಮ್ಮ ಯಜಮಾನ ನೂಕಾಟದಲ್ಲೇ ಸತ್ತ ಎಂಬ ಗಾದೆಯಂತೆ ನಮ್ಮ ಮೋದಿ ಕತೆಯಾಗಿದೆಯಲ್ಲಾ. ಅಮೆರಿಕ ಅತ್ತ ರಷ್ಯ ಸಹವಾಸಕ್ಕೆ ಹೋದಿಯಾ ಜೋಕೆ ಎಂದರೆ, ಇತ್ತ ನಮ್ಮ ಪ್ರತಿಭಾ ಸಂಪನ್ನ ವಿದ್ಯಾರ್ಥಿಗಳು ಉಕ್ರೇನಿನಲ್ಲಿ ಸಿಕ್ಕಿಕೊಂಡು ಕರೆತರುವುದೇ ದೊಡ್ಡ ಸಮಸ್ಯೆಯಾಗಿದೆ. ಹೀಗಿರುವಾಗ, ಈಗಾಗಲೇ ತೀರಿಕೊಂಡ ಹಾವೇರಿಯ ನವೀನನ ಪಾರ್ಥಿವ ಶರೀರವನ್ನು ಮರಳಿ ತರುವ ವಿಷಯದಲ್ಲಿ ಅರವಿಂದ ಬೆಲ್ಲದ್ ಎಂಬ ಶಾಸಕ ನವೀನನ ಶವ ತರುವ ಜಾಗದಲ್ಲಿ 8 ಜನ ವಿದ್ಯಾರ್ಥಿಗಳನ್ನ ತರಬಹುದು ಎಂದುಬಿಟ್ಟಿದ್ದಾನಲ್ಲಾ. ಇದು ಇಡೀ ಬಿಜೆಪಿಯವರ ಮನಸ್ಥಿತಿಯಾದ್ದರಿಂದ ಯಾರೂ ಖಂಡಿಸಿಲ್ಲವಂತಲ್ಲಾ. ಥೂತ್ತೇರಿ.

****

ಉನ್ನತ ವ್ಯಾಸಂಗಕ್ಕೆಂದು ಉಕ್ರೇನಿಗೆ ಹೋದ ನಮ್ಮ ಹುಡುಗರು ಯುದ್ಧದ ಹೊಗೆಯಲ್ಲಿ ಸಿಕ್ಕಿಕೊಂಡು ಏದುಸಿರು ಬಿಡುತ್ತಿರುವಾಗ ಅವರನ್ನ ಭಾರತಕ್ಕೆ ಕರೆತರುವ ಕಾರ್ಯಾಚರಣೆಗೆ ಯಾವ ಹೆಸರಿಡಬೇಕೆಂಬ ಸಂಚು ಬಿಜೆಪಿಗಳ ತಲೆಯಲ್ಲಿ ಶಾನೆ ದಿನ ಸುಳಿದಾಡಿತಂತಲ್ಲಾ. ಇತರ ದೇಶಗಳು ತಮ್ಮ ದೂತಾವಾಸದ ಸಿಬ್ಬಂದಿಗಳನ್ನು ಬಳಸಿಕೊಂಡು ತಮ್ಮವರನ್ನು ಕರೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಉತ್ತರ ಭಾರತದ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಬಿಜೆಪಿಗಳ ತಲೆಯಲ್ಲಿ ಮಿಂಚು ಹೊಳೆದಂತಾಗಿ ಆಪರೇಷನ್ ಗಂಗಾ ಹೊಳೆಯಿತಂತಲ್ಲಾ. ಆ ಕೂಡಲೇ ರೋಮಾಂಚನಗೊಂಡು ಆಪರೇಷನ್ ಗಂಗಾ ಮೂಲಕ ನಮ್ಮ ವಿದ್ಯಾರ್ಥಿಗಳನ್ನ ಕರೆತರುವಷ್ಟರಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ರಷ್ಯಾ ಶೆಲ್ ದಾಳಿಗೆ ಹತ್ಯೆಯಾದರು. ಮಕ್ಕಳನ್ನು ಕರೆತರುವಲ್ಲಿ ಆದ ವಿಳಂಬ, ಭಾರತದ ದೂತವಾಸದವರ ಕಣ್ಮರೆ ಇವೆಲ್ಲವನ್ನು ಗ್ರಹಿಸಿದ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ಹೇಳಿದ್ದಕ್ಕೆ, ಜಾಲತಾಣದ ಕೀಟಗಳು ಅವರ ನೋವನ್ನೂ ಲೆಕ್ಕಿಸದೆ ಕುಟುಕಿದವಂತಲ್ಲಾ. ಆಪರೇಷನ್ ಗಂಗಾ ಕಾರ್ಯಾಚರಣೆಯಿನ್ನೂ ಪೂರ್ಣಗೊಂಡಿಲ್ಲ, ಆಗಲೇ ನಮ್ಮ ಪ್ರಧಾನಿಗಳು ನಮ್ಮ ಕಾರ್ಯಾಚರಣೆಯಿಂದ ಭಾರತದ ವರ್ಚಸ್ಸು ಉತ್ತುಂಗದಲ್ಲಿ ಬೆಳಗುತ್ತಿದೆ ಎಂದಿದ್ದಾರಲ್ಲಾ. ಅಂತೂ ಕಳೆಗುಂದಿದ್ದ ಭಾರತದ ವರ್ಚಸ್ಸು ಏರಬೇಕಾದರೆ ಯುದ್ದ ಸಂಭವಿಸಬೇಕಾಯ್ತಂತಲ್ಲಾ. ಥೂ ಥೂ ಥೂತ್ತೇರಿ.

****

ಅರವಿಂದ ಬೆಲ್ಲದ್

ಯಾವ ಸಂದರ್ಭದಲ್ಲಿ ಹೇಗೆ ಪ್ರತಿಕ್ರಿಯಿಸಬೇಕು ಮತ್ತು ಹೇಗೆ ನಡೆದುಕೊಳ್ಳಬೇಕೆಂಬುದೆ ಈ ಬಿಜೆಪಿಗಳಿಗೆ ಗೊತ್ತಿಲ್ಲವಲ್ಲ ಎಂಬುದು ಭಾರತದ ಸಾಮಾನ್ಯ ಪ್ರಜೆಯ ಅಳಲಾಗಿದೆಯಂತಲ್ಲಾ. ಯುದ್ಧ ಪೀಡಿತ ಪ್ರದೇಶದಿಂದ ವಿದ್ಯಾರ್ಥಿಗಳನ್ನು ಕರೆತಂದ ಮಾತ್ರಕ್ಕೆ ಈ ದೇಶದ ವರ್ಚಸ್ಸು ಜಗತ್ತಿನಲ್ಲಿ ಬೆಳಗಬೇಕಾದರೆ ಅದಿನ್ನೆಂತಹ ಜಗತ್ತು ಇದಿನ್ನೆಂತಹ ದೇಶ ಎನ್ನುವಂತಹ ಕಿಡಿಗೇಡಿ ಮಾತುಗಳು ಬಿತ್ತರವಾಗುತ್ತಿವೆಯಂತಲ್ಲಾ. ಈ ಸಮಯದಲ್ಲಿ ಹಿಂದಿರುಗಿ ನೋಡಿದರೆ ನಮ್ಮನ್ನಾಳುವವರ ಬೇಜವಾಬ್ದಾರಿತನಗಳು ಸಾಲುಗಟ್ಟಿವೆಯಲ್ಲಾ. ಮುಖ್ಯವಾಗಿ ಕೊರೊನಾ ಭಾರತಕ್ಕೆ ಕಾಲಿಟ್ಟಾಗ ಆ ಬಗ್ಗೆ ಎಚ್ಚರವಹಿಸದ ನಾಯಕರು ಅಮೆರಿಕದ ಅಧ್ಯಕ್ಷನ ಜೊತೆ ಸಾರ್ವಜನಿಕ ಸಭೆ ಮಾಡಿ, ಮೆರವಣಿಗೆ ಮಾಡಿ, ಆತನನ್ನು ತಬ್ಬಿಕೊಂಡು ಕಳಿಸಿಕೊಡುವಷ್ಟರಲ್ಲಿ ಕೊರೊನಾ ಮಾರಿ ಭಾರತಾಂಬೆಯ ಸೆರಗಿನಲ್ಲಿ ಆಶ್ರಯ ಪಡೆದಾಗಿತ್ತಲ್ಲಾ. ಕೊರೊನಾ ಅನಾಹುತವನ್ನ ತಬ್ಲಿಗಿ ಮುಸ್ಲಿಮರ ಮೇಲೆ ಎತ್ತಿಹಾಕಿದ ಮತಾಂಧರು ಏಕದಂ ಲಾಕ್‌ಡೌನ್ ಮಾಡಿದ ಪರಿಣಾಮ ಸಾವಿರಾರು ಭಾರತಮಾತೆಯ ಪುತ್ರರು ಅಸುನೀಗಿದರು. ಇತಿಹಾಸ ತೋರಿಸಿದ ಭೀಕರತೆಯ ಬಗ್ಗೆ ಎಚ್ಚರಿಕೆಯಿದ್ದಿದ್ದರೆ, ಉಕ್ರೇನಿನಲ್ಲಿ ಸಿಕ್ಕಿಕೊಂಡ ವಿದ್ಯಾರ್ಥಿಗಳನ್ನು ತಿಂಗಳ ಮೊದಲೇ ಕರಕೊಂಡು ಬಂದಿದ್ದರೆ, ಐದುನೂರು ಜನ ಹುತಾತ್ಮ ರೈತರಿಂದ ಮಂಕಾಗಿರುವ ಭಾರತದ ವರ್ಚಸ್ಸು ಸುಧಾರಿಸುತ್ತಿಲ್ಲ. ಥೂತ್ತೇರಿ.

****

ಶಿವಮೊಗ್ಗದ ಮುಸ್ಲಿಮರು ಮತ್ತೊಮ್ಮೆ ಈಶ್ವರಪ್ಪನನ್ನು ಗೆಲ್ಲಿಸಿ ಕಳುಹಿಸುವ ಪಣತೊಟ್ಟಿದ್ದಾರಂತಲ್ಲಾ. ಹಾಗೆ ನೋಡಿದರೆ ಈಶ್ವರಪ್ಪ ಶಾಸಕನಾಗಿದ್ದೇ ಹತ್ಯೆಗೊಂಡವರ ಶವಯಾತ್ರೆಗಳನ್ನು ಮಾಡುವ ಮುಖಾಂತರ. ಪ್ರತಿವರ್ಷ ಗಣಪತಿ ಮೆರವಣಿಗೆ ಸಮಯದಲ್ಲಿ ಅಶ್ಲೀಲ ಘೋಷಣೆಗಳನ್ನು ಕೂಗುವುದು; ಇದು ಕೋಮುಘರ್ಷಣೆಗಳಿಗೆ ಕಾರಣವಾಗಿ ಹತ್ಯೆಗಳು ನಡೆಯುವುದು; ಕೂಡಲೇ ಈಶ್ವರಪ್ಪ ಓಡಿಬಂದು ಹತ್ಯೆಗೊಂಡವನ ಮೆರವಣಿಗೆ ಮಾಡಿ, ಚಿತಾಗಾರ ತಲುಪಿಸಿ ಬಂದು, ಭೀಕರ ಭಾಷಣ ಮಾಡಿ ಚಿತಾಗಾರದ ಕಾವು ಆರದಂತೆ ನೋಡಿಕೊಂಡು ಚುನಾವಣೆಗೆ ಹೋಗುವುದು; ಹೀಗೆ ಸುಮಾರು ಹತ್ಯೆ ನಡೆದ ನಂತರ ಈಶ್ವರಪ್ಪ ಶಾಸಕ ಮಂತ್ರಿ ಎಲ್ಲವೂ ಆದರು. ಈಗ ಮನೆಗೆ ಹೋಗಲಿದ್ದ ಈಶ್ವರಪ್ಪನನ್ನ ಮತ್ತಷ್ಟು ಬಲಿಷ್ಠಗೊಳಿಸುವ ತೀರ್ಮಾನ ತೆಗೆದುಕೊಂಡಿರುವಂತೆ ಕಾಣುತ್ತಿದೆಯಲ್ಲ; ಈಗ ನಡೆದಿರುವ ಕೊಲೆಯ ಹಿನ್ನೆಲೆಯಲ್ಲಿ ಎರಡೂ ಕಡೆಯ ಧರ್ಮಾಂಧರು ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ಈಶ್ವರಪ್ಪ ಮತ್ತೊಂದು ಚಾನ್ಸ್ ಹೊಡಿತಾರೆ ಅಂತಾ ಇದಾರಲ್ಲ. ಥೂತ್ತೇರಿ.


ಇದನ್ನೂ ಓದಿ: ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...