Homeಅಂಕಣಗಳುಅಂತೂ ಭಾರತದ ವರ್ಚಸ್ಸು ಬೆಳಗಿತು!

ಅಂತೂ ಭಾರತದ ವರ್ಚಸ್ಸು ಬೆಳಗಿತು!

- Advertisement -
- Advertisement -

ಪ್ರಪಂಚ ಆಗಾಗ್ಗೆ ಹಿಟ್ಲರ್‌ನನ್ನ ನೆನಸಿಕೊಂಡು ಬೆಚ್ಚುತ್ತಿತ್ತು. ಆತನ ಭಯಾನಕ ಯುಗವೊಂದು ಅಂತ್ಯವಾದುದಕ್ಕೆ ನಿಟ್ಟುಸಿರುಬಿಟ್ಟಿತ್ತು. ಆದರೇನು ಆತನ ಭೂತ ರಷ್ಯಾದಲ್ಲಿ ವಕ್ಕರಿಸಿದೆಯಂತಲ್ಲಾ. ರಷ್ಯಾದ ಅಧ್ಯಕ್ಷ ಪುಟಿನ್ ದೇಹವನ್ನ ಹೊಕ್ಕ ಹಿಟ್ಲರ್ ಭೂತ, ಜಗತ್ತಿನ ನಾಶದ ಬಗ್ಗೆ ಮಾತನಾಡುತ್ತಿದ್ದಾನಲ್ಲಾ. ಜಗತ್ತಿನ ಸರ್ವಾಧಿಕಾರಿಗಳ ಅಂತ್ಯವೆಲ್ಲಾ ಕೆಟ್ಟದಾಗಿ ಕೊನೆಯಾಗಿದೆ. ವಿನಾಶಕಾರಿ ಸಾಹಸಕ್ಕೆ ಕೈಹಾಕಿರುವ ಪುಟಿನ್, ತನ್ನ ಅಂತ್ಯದವರೆಗೂ ವಿರಮಿಸುವಂತೆ ಕಾಣುತ್ತಿಲ್ಲ. ಈ ನಡುವೆ, ಎಲ್ಲ ಹೊಡೆದಾಡಿ ಸತ್ತರೆ ನಮ್ಮ ಯಜಮಾನ ನೂಕಾಟದಲ್ಲೇ ಸತ್ತ ಎಂಬ ಗಾದೆಯಂತೆ ನಮ್ಮ ಮೋದಿ ಕತೆಯಾಗಿದೆಯಲ್ಲಾ. ಅಮೆರಿಕ ಅತ್ತ ರಷ್ಯ ಸಹವಾಸಕ್ಕೆ ಹೋದಿಯಾ ಜೋಕೆ ಎಂದರೆ, ಇತ್ತ ನಮ್ಮ ಪ್ರತಿಭಾ ಸಂಪನ್ನ ವಿದ್ಯಾರ್ಥಿಗಳು ಉಕ್ರೇನಿನಲ್ಲಿ ಸಿಕ್ಕಿಕೊಂಡು ಕರೆತರುವುದೇ ದೊಡ್ಡ ಸಮಸ್ಯೆಯಾಗಿದೆ. ಹೀಗಿರುವಾಗ, ಈಗಾಗಲೇ ತೀರಿಕೊಂಡ ಹಾವೇರಿಯ ನವೀನನ ಪಾರ್ಥಿವ ಶರೀರವನ್ನು ಮರಳಿ ತರುವ ವಿಷಯದಲ್ಲಿ ಅರವಿಂದ ಬೆಲ್ಲದ್ ಎಂಬ ಶಾಸಕ ನವೀನನ ಶವ ತರುವ ಜಾಗದಲ್ಲಿ 8 ಜನ ವಿದ್ಯಾರ್ಥಿಗಳನ್ನ ತರಬಹುದು ಎಂದುಬಿಟ್ಟಿದ್ದಾನಲ್ಲಾ. ಇದು ಇಡೀ ಬಿಜೆಪಿಯವರ ಮನಸ್ಥಿತಿಯಾದ್ದರಿಂದ ಯಾರೂ ಖಂಡಿಸಿಲ್ಲವಂತಲ್ಲಾ. ಥೂತ್ತೇರಿ.

****

ಉನ್ನತ ವ್ಯಾಸಂಗಕ್ಕೆಂದು ಉಕ್ರೇನಿಗೆ ಹೋದ ನಮ್ಮ ಹುಡುಗರು ಯುದ್ಧದ ಹೊಗೆಯಲ್ಲಿ ಸಿಕ್ಕಿಕೊಂಡು ಏದುಸಿರು ಬಿಡುತ್ತಿರುವಾಗ ಅವರನ್ನ ಭಾರತಕ್ಕೆ ಕರೆತರುವ ಕಾರ್ಯಾಚರಣೆಗೆ ಯಾವ ಹೆಸರಿಡಬೇಕೆಂಬ ಸಂಚು ಬಿಜೆಪಿಗಳ ತಲೆಯಲ್ಲಿ ಶಾನೆ ದಿನ ಸುಳಿದಾಡಿತಂತಲ್ಲಾ. ಇತರ ದೇಶಗಳು ತಮ್ಮ ದೂತಾವಾಸದ ಸಿಬ್ಬಂದಿಗಳನ್ನು ಬಳಸಿಕೊಂಡು ತಮ್ಮವರನ್ನು ಕರೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಉತ್ತರ ಭಾರತದ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಬಿಜೆಪಿಗಳ ತಲೆಯಲ್ಲಿ ಮಿಂಚು ಹೊಳೆದಂತಾಗಿ ಆಪರೇಷನ್ ಗಂಗಾ ಹೊಳೆಯಿತಂತಲ್ಲಾ. ಆ ಕೂಡಲೇ ರೋಮಾಂಚನಗೊಂಡು ಆಪರೇಷನ್ ಗಂಗಾ ಮೂಲಕ ನಮ್ಮ ವಿದ್ಯಾರ್ಥಿಗಳನ್ನ ಕರೆತರುವಷ್ಟರಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ರಷ್ಯಾ ಶೆಲ್ ದಾಳಿಗೆ ಹತ್ಯೆಯಾದರು. ಮಕ್ಕಳನ್ನು ಕರೆತರುವಲ್ಲಿ ಆದ ವಿಳಂಬ, ಭಾರತದ ದೂತವಾಸದವರ ಕಣ್ಮರೆ ಇವೆಲ್ಲವನ್ನು ಗ್ರಹಿಸಿದ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ಹೇಳಿದ್ದಕ್ಕೆ, ಜಾಲತಾಣದ ಕೀಟಗಳು ಅವರ ನೋವನ್ನೂ ಲೆಕ್ಕಿಸದೆ ಕುಟುಕಿದವಂತಲ್ಲಾ. ಆಪರೇಷನ್ ಗಂಗಾ ಕಾರ್ಯಾಚರಣೆಯಿನ್ನೂ ಪೂರ್ಣಗೊಂಡಿಲ್ಲ, ಆಗಲೇ ನಮ್ಮ ಪ್ರಧಾನಿಗಳು ನಮ್ಮ ಕಾರ್ಯಾಚರಣೆಯಿಂದ ಭಾರತದ ವರ್ಚಸ್ಸು ಉತ್ತುಂಗದಲ್ಲಿ ಬೆಳಗುತ್ತಿದೆ ಎಂದಿದ್ದಾರಲ್ಲಾ. ಅಂತೂ ಕಳೆಗುಂದಿದ್ದ ಭಾರತದ ವರ್ಚಸ್ಸು ಏರಬೇಕಾದರೆ ಯುದ್ದ ಸಂಭವಿಸಬೇಕಾಯ್ತಂತಲ್ಲಾ. ಥೂ ಥೂ ಥೂತ್ತೇರಿ.

****

ಅರವಿಂದ ಬೆಲ್ಲದ್

ಯಾವ ಸಂದರ್ಭದಲ್ಲಿ ಹೇಗೆ ಪ್ರತಿಕ್ರಿಯಿಸಬೇಕು ಮತ್ತು ಹೇಗೆ ನಡೆದುಕೊಳ್ಳಬೇಕೆಂಬುದೆ ಈ ಬಿಜೆಪಿಗಳಿಗೆ ಗೊತ್ತಿಲ್ಲವಲ್ಲ ಎಂಬುದು ಭಾರತದ ಸಾಮಾನ್ಯ ಪ್ರಜೆಯ ಅಳಲಾಗಿದೆಯಂತಲ್ಲಾ. ಯುದ್ಧ ಪೀಡಿತ ಪ್ರದೇಶದಿಂದ ವಿದ್ಯಾರ್ಥಿಗಳನ್ನು ಕರೆತಂದ ಮಾತ್ರಕ್ಕೆ ಈ ದೇಶದ ವರ್ಚಸ್ಸು ಜಗತ್ತಿನಲ್ಲಿ ಬೆಳಗಬೇಕಾದರೆ ಅದಿನ್ನೆಂತಹ ಜಗತ್ತು ಇದಿನ್ನೆಂತಹ ದೇಶ ಎನ್ನುವಂತಹ ಕಿಡಿಗೇಡಿ ಮಾತುಗಳು ಬಿತ್ತರವಾಗುತ್ತಿವೆಯಂತಲ್ಲಾ. ಈ ಸಮಯದಲ್ಲಿ ಹಿಂದಿರುಗಿ ನೋಡಿದರೆ ನಮ್ಮನ್ನಾಳುವವರ ಬೇಜವಾಬ್ದಾರಿತನಗಳು ಸಾಲುಗಟ್ಟಿವೆಯಲ್ಲಾ. ಮುಖ್ಯವಾಗಿ ಕೊರೊನಾ ಭಾರತಕ್ಕೆ ಕಾಲಿಟ್ಟಾಗ ಆ ಬಗ್ಗೆ ಎಚ್ಚರವಹಿಸದ ನಾಯಕರು ಅಮೆರಿಕದ ಅಧ್ಯಕ್ಷನ ಜೊತೆ ಸಾರ್ವಜನಿಕ ಸಭೆ ಮಾಡಿ, ಮೆರವಣಿಗೆ ಮಾಡಿ, ಆತನನ್ನು ತಬ್ಬಿಕೊಂಡು ಕಳಿಸಿಕೊಡುವಷ್ಟರಲ್ಲಿ ಕೊರೊನಾ ಮಾರಿ ಭಾರತಾಂಬೆಯ ಸೆರಗಿನಲ್ಲಿ ಆಶ್ರಯ ಪಡೆದಾಗಿತ್ತಲ್ಲಾ. ಕೊರೊನಾ ಅನಾಹುತವನ್ನ ತಬ್ಲಿಗಿ ಮುಸ್ಲಿಮರ ಮೇಲೆ ಎತ್ತಿಹಾಕಿದ ಮತಾಂಧರು ಏಕದಂ ಲಾಕ್‌ಡೌನ್ ಮಾಡಿದ ಪರಿಣಾಮ ಸಾವಿರಾರು ಭಾರತಮಾತೆಯ ಪುತ್ರರು ಅಸುನೀಗಿದರು. ಇತಿಹಾಸ ತೋರಿಸಿದ ಭೀಕರತೆಯ ಬಗ್ಗೆ ಎಚ್ಚರಿಕೆಯಿದ್ದಿದ್ದರೆ, ಉಕ್ರೇನಿನಲ್ಲಿ ಸಿಕ್ಕಿಕೊಂಡ ವಿದ್ಯಾರ್ಥಿಗಳನ್ನು ತಿಂಗಳ ಮೊದಲೇ ಕರಕೊಂಡು ಬಂದಿದ್ದರೆ, ಐದುನೂರು ಜನ ಹುತಾತ್ಮ ರೈತರಿಂದ ಮಂಕಾಗಿರುವ ಭಾರತದ ವರ್ಚಸ್ಸು ಸುಧಾರಿಸುತ್ತಿಲ್ಲ. ಥೂತ್ತೇರಿ.

****

ಶಿವಮೊಗ್ಗದ ಮುಸ್ಲಿಮರು ಮತ್ತೊಮ್ಮೆ ಈಶ್ವರಪ್ಪನನ್ನು ಗೆಲ್ಲಿಸಿ ಕಳುಹಿಸುವ ಪಣತೊಟ್ಟಿದ್ದಾರಂತಲ್ಲಾ. ಹಾಗೆ ನೋಡಿದರೆ ಈಶ್ವರಪ್ಪ ಶಾಸಕನಾಗಿದ್ದೇ ಹತ್ಯೆಗೊಂಡವರ ಶವಯಾತ್ರೆಗಳನ್ನು ಮಾಡುವ ಮುಖಾಂತರ. ಪ್ರತಿವರ್ಷ ಗಣಪತಿ ಮೆರವಣಿಗೆ ಸಮಯದಲ್ಲಿ ಅಶ್ಲೀಲ ಘೋಷಣೆಗಳನ್ನು ಕೂಗುವುದು; ಇದು ಕೋಮುಘರ್ಷಣೆಗಳಿಗೆ ಕಾರಣವಾಗಿ ಹತ್ಯೆಗಳು ನಡೆಯುವುದು; ಕೂಡಲೇ ಈಶ್ವರಪ್ಪ ಓಡಿಬಂದು ಹತ್ಯೆಗೊಂಡವನ ಮೆರವಣಿಗೆ ಮಾಡಿ, ಚಿತಾಗಾರ ತಲುಪಿಸಿ ಬಂದು, ಭೀಕರ ಭಾಷಣ ಮಾಡಿ ಚಿತಾಗಾರದ ಕಾವು ಆರದಂತೆ ನೋಡಿಕೊಂಡು ಚುನಾವಣೆಗೆ ಹೋಗುವುದು; ಹೀಗೆ ಸುಮಾರು ಹತ್ಯೆ ನಡೆದ ನಂತರ ಈಶ್ವರಪ್ಪ ಶಾಸಕ ಮಂತ್ರಿ ಎಲ್ಲವೂ ಆದರು. ಈಗ ಮನೆಗೆ ಹೋಗಲಿದ್ದ ಈಶ್ವರಪ್ಪನನ್ನ ಮತ್ತಷ್ಟು ಬಲಿಷ್ಠಗೊಳಿಸುವ ತೀರ್ಮಾನ ತೆಗೆದುಕೊಂಡಿರುವಂತೆ ಕಾಣುತ್ತಿದೆಯಲ್ಲ; ಈಗ ನಡೆದಿರುವ ಕೊಲೆಯ ಹಿನ್ನೆಲೆಯಲ್ಲಿ ಎರಡೂ ಕಡೆಯ ಧರ್ಮಾಂಧರು ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ಈಶ್ವರಪ್ಪ ಮತ್ತೊಂದು ಚಾನ್ಸ್ ಹೊಡಿತಾರೆ ಅಂತಾ ಇದಾರಲ್ಲ. ಥೂತ್ತೇರಿ.


ಇದನ್ನೂ ಓದಿ: ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...