Homeಅಂಕಣಗಳುಥೂತ್ತೇರಿ | ಯಾಹೂಮಂಡ್ಯದ ಸ್ವಾಭಿಮಾನ ಅಂದ್ರೆ ಏನನ್ನಕಂಡಿದ್ದಿರಿ ಸಾ! - ಥೂತ್ತೇರಿ.

ಮಂಡ್ಯದ ಸ್ವಾಭಿಮಾನ ಅಂದ್ರೆ ಏನನ್ನಕಂಡಿದ್ದಿರಿ ಸಾ! – ಥೂತ್ತೇರಿ.

- Advertisement -
- Advertisement -

ಕುರುಕ್ಷೇತ್ರದ ವಿವರವನ್ನು ದೃತರಾಷ್ಟ್ರ ಸಂಜಯನಿಂದ ತಿಳಿದುಕೊಳ್ಳುತ್ತಿದ್ದಂತೆ, ನಾವು ಕೂಡ ಯಾಕೆ ಮಂಡ್ಯ ಜಿಲ್ಲೆಯ ವಾಟಿಸ್ಸೆ ಮಾತನಾಡಿಸಿ, ಅಖಾಡದ ವಿವರ ಪಡೆಯಬಾರದು ಎನ್ನಿಸಿದ ಕೂಡಲೇ, ಖುಷಿಯಾಯ್ತು. ವಾಟಿಸ್ಸೆಗೆ ಪೋನ್ ಮಾಡಲಾಗಿ ರಿಂಗಾಯ್ತು ರಿಂಗ್ ಟೋನ್….. ಹಾ ಯಣ್ಣೆ ನಿಮ್ದು ಊಟ ನಮ್ದು…..

‘ಹಲೋ ಯಾರು ಮಾತಾಡಿ ಪ್ಲೀಸ್’

“ವಾಟಿಸ್ಸೆ, ನಾನು ಯಾಹೂ”

“ಓಹೊಹೊ ಗುಡ್ಡಾಪ್ಟರ್‍ನೂನ್ ಸರ್”

“ಎಲ್ಲಿದ್ದೀ”

“ನಮ್ಮ ಕ್ಷೇತ್ರದಲ್ಲಿದ್ದೀನಿ ಸಾ”

“ಯಾಗಿದೆ ವಾತಾವರಣ”

“ತುಂಬ ಹೀಟಾಗಿದೆ ಸಾರ್, ಅದರಲ್ಲೂ ಕುಮಾರಣ್ಣನ ಇಂಜನ್ನು ತುಂಬಾ ಬಾಯ್ಲಾಗಿ ಹ್ವೊಗೆ ಬತ್ತಾ ಅದೆ”

“ಜೊತೆಲಿ ರಾಧಿಕಾ ಇದ್ರೆ ಕೂಲಾಗಿರತಿದ್ರಲ್ಲವಾ”

“ಅಂಗೇಳಕ್ಕೆ ಬರದಿಲ್ಲ ಸಾರ್. ಆಗ್ಲೆ ಇಂಜನ್ನ ಯರಡು ಸತಿ ಹೊರಾಯಲ್ಲಾಗಿರದ್ರಿಂದ, ಅವರ ಬಾಳಿಕೆ ಕಡಿಮೆ ಅಂತ ಅವರಪ್ಪ ದ್ಯಾವೇಗೌಡ ಹೇಳವ್ರೆ”

“ಅದ್ಕೆ ನಿಖಿಲ್ ನಿಲ್ಸಿದ್ದರಂತೆ”

“ಅವ್ಯಲ್ಲ ಸುಳ್ಳು ಸಾರ್, ದ್ಯಾವೇಗೌಡ್ರು ಸುಳ್ಳು ಹೇಳಿ ಹೇಳಿ ಅದ್ನೆ ನಿಜ ಅನ್ನಕಂಡು ಬುಡ್ತರೆ. ಅವುರಿಗೆ ಸುಳ್ಳಿಗೂ ಸತ್ಯಕ್ಕೂ ವ್ಯತ್ಯಾಸನೆ ಹೊಂಟ್ಯೋಗ್ಯದೆ”

“ಅಂಗಂತಿಯಾ”

“ಸಾರ್, ನಾನು ಯಾವ ಕಾಲದಿಂದ ದ್ಯಾವೇಗೌಡ್ರ ನೋಡಿದ್ದಿನಿ ಅವುರ ಭಾಷಣ ಕೇಳಿದ್ದೀನಿ. ಯಲ್ಲಾ ರಿಕಾಲ್ಡ್ ನನ್ನತ್ರ ಅವೆ ಸರ್”

“ಚುನಾವಣೆ ಬಗ್ಗೆ ಏನೇಳ್ತೀರಿ, ಸುಮಲತ ಗೆಲ್ತರ?”

“ಅವುರು ಗೆದ್ದಾಯ್ತು ಸಾರ್, ಇನ್ನೇನಿದ್ರು ಲೀಡ್ ಲೆಕ್ಕ ಹಾಕಬೇಕು”

“ಅದ್ಯಂಗೇಳ್ತಿ”

“ವೆರಿ ಸಿಂಪಲ್ಲು ಸಾರ್, ಈ ಕುಮಾರಸ್ವಾಮಿ ದ್ಯಾವೇಗೌಡ್ರು ಯಾವತ್ತು ನಿಖಿಲನ್ನು ತಂದು ಮಂಡ್ಯಕ್ಕೆ ನಿಲ್ಲಿಸಿದ್ರೊ ಅವತ್ತೇ ಸೋತ. ಯಾಕಂದ್ರೆ ಮಂಡ್ಯದಲ್ಲಿ ಗಂಡುಸ್ರಿಲವೆ ಅಂತ ಜನ ತಿರಿಗಿಬಿದ್ರು. ಆಗ ಗಂಡಸರ ಮಾನ ಉಳಸಕ್ಕೆ ಸುಮಲತ ನಿಂತ್ರು. ನಿಜಕ್ಕೂ ಮಂಡ್ಯದ ಮರಿಯಾದಿ ಉಳಿಸಿದ ಗೌಡ್ತಿ ಸಾರವುಳು”

“ಕಾಂಗ್ರೆಸ್ಸಿನೋರು  ಯಂಗವರೆ”?

“ಅವುರದ್ರಲ್ಯ ಅಂಡರ್ ಗ್ರೌಂಡ್ ವರ್ಕ್ ಸಾ”

“ಯಾಕೆ”

“ಯಾಕೆ ಅಂದ್ರೆ, ನಮ್ಮ ಜಿಲ್ಲೆಲಿ ಕಾಂಗ್ರೆಸ್ ಜೆಡಿಎಸ್ ಅಂದ್ರೆ ಮ್ಯಾಗಲ ಕೇರಿ ಕ್ಯಾಳಗಲ ಕೇರಿ ನಾಯಿಗಳಿದ್ದಂಗೆ. ಯಾವಾಗ್ಲೂ ಕಡದಾಡ್ತವೆ. ಯಲಕ್ಷನ್ ಬಂದಾಗ ಯಾರಿಗಾರ ಓಟಾಕಿ ಒಂದಾಗಿರಿನ ಅನ್ನದ ಇವತ್ತಿಗೂ ತಿಳಿಕಂಡಿಲ್ಲ. ಈಗೆ ಕುಮಾರಸ್ವಾಮಿ ಮಗನಿಗಾಗಿ ಒಂದಾದಾರೆ?

“ಅಂಗಾದ್ರೆ ಮೈತ್ರಿ ಧರ್ಮದ ಕತೆ ಏನೂ.”

“ಅದ ಮುರುದಾಕಿರೋನೆ ಕುಮಾರಸ್ವಾಮಿ.”

“ಅದ್ಯಂಗೇ.”

“ಯಂಗೇ ಅಂದ್ರೆ ಕೆಲವು ಕಾಂಗ್ರೆಸ್ಸಿಗರು ನನಿಗೆ ಬೇಕಿಲ್ಲ ಅಂತನೆ. ಅಂದ್ರೆ ಮೈತ್ರಿ ಧರ್ಮ ಮುರದೋರ್ಯಾರು ಹೇಳಿಸಾ.”

“ಕುಮಾರಣ್ಣಂದೆ ತಪ್ಪು  ಅಂತಿರಾ.”

“ಒಂದಲ್ಲಾ ಸಾ. ತಪ್ಪು ದಿನಾ ಮಾಡ್ತನೇ ಹೋಯ್ತಾ ಅವುನೆ.”

“ಒಂದ್ಯರಡೇಳು ನೋಡಣ.”

“ನಿಖಿಲ್ ಎಲ್ಲಿದ್ದಿಯಪ್ಪಾ ಅಂದಿದ್ದು ಮೊದಲ್ನೆ ತಪ್ಪು, ಅವತ್ತಿಂದ ಮಗನ್ನ ಮಂಡ್ಯದಲ್ಲಿ ನಾಟಿಹಾಕಿ ಬ್ಯಳಸಕ್ಕೆ ಮಾಡಿದ ಕ್ಯಲಸಗಳ್ಯಲ್ಲ. ಪ್ರಾಮಾಣಿಕವಾದವಲ್ಲ ಅಂತ, ಜನಕ್ಕೆ ಈಗ ಗೊತ್ತಾಯ್ತಾ ಅದೆ ಸಾ. ಇನ್ನ ಆ ದರ್ಶನನ್ನ ಯಾಕೆ ಬೈಬೇಕು ಸಾ. ಇವುನ ಮಗನೂ ಹೀರೋ ಅಲ್ಲವೆ.”

“ಮಗನ್ನ ಗೆಲ್ಲಸಬೇಕಲವೆ.”

“ಗೆಲ್ಲಿಸಬೇಕು ಅಂತ ಅನ್ನೋ ಮಾತುಗಳೇ, ಅವುನ್ನ ಸೋಲುಸ್ತಾ ಅವೆ ಸಾ. ನಾನಂತು ಹುಟ್ಟಿದ್ ತಾವಿಂದ ಮಂಡ್ಯ ಜಿಲ್ಲೆ ಹಿಂಗೆ ಎದ್ದು ನಿಂತಿದ್ದ ನೋಡ್ನಿಲ್ಲ ಸಾ.”

“ಬರಿ ಅಂಬಿ ಅಭಿಮಾನಿಗಳಬ್ಬರವಂತೆ.”

“ಅವುರಬ್ಬರ ಸರಿ, ಸುಮ್ಮನಿರೋರ ಅಬ್ಬರ ಕೇಳಿಸಿಗಂಡಿದ್ದೀರಾ. ಅದು ಸಾಧಾರಣವಾದದ್ದಲ್ಲ ಸಾರ್. ಇಂದ್ರಾಗಾಂಧಿ, ರಾಜೀವ್‍ಗಾಂಧಿ ಜ್ವತೆಲಿದ್ದಿನಿ ಅಂತ ಮಂಡ್ಯನೆ ಮರತಿದ್ದ ಯಸ್ಸೆಂ ಕೃಷ್ಣನ್ನ ಶಂಕರೇಗೌಡ್ರೆದ್ರಿಗೆ ತಗದು ಯಸ್ತರಲ್ಲ ಅಂಥದೊಂದು ಅಬ್ಬರ ವಳಗೇ ಗುರುಗುಡತಾ ಅದೆ.”

“ಅಮರಾವತಿ ಚಂದ್ರಶೇಖರ ಸುಮಲತಾರಿಗೆ ಕೈಕೊಟ್ಟನಂತೆ.”

“ವ್ಯವಾರಸ್ತರಂಗೇ ಅಲವ ಸಾ, ಅಂಬಿ ಇರಗಂಟ ಅವುನ್ನ ತಂಬಿ ಅನ್ನಕಂಡು ಬದುಕಿದ, ಅವುನ ಮಂತ್ರಿಗಿರಿಗೂ ಕ್ಯಟ್ಟ ಹೆಸರು ತಂದ, ಈಗಂಬಿ ಇಲ್ಲ, ಅದ್ಕೆ ಕುಮಾರಣ್ಣ ನತÀ್ರಕ್ಕೋಗಿ ಕುಯ್ಯಿಗುಡ್ತಾ ಅವುನೆ. ಈ ಶತಮಾನದ ದ್ರೋಹ ಅಂದ್ರೆ ಅವiರಾವತಿ ಚಂದ್ರಶೇಖರ ಅಂಬರೀಶ್ಗೆ ಕೈ ಕೊಟ್ಟಿದ್ದು, ಯಸ್ಸೆಂ ಕೃಷ್ಣ ಕಾಂಗ್ರೆಸ್‍ಗೆ ಕೈಕೊಟ್ಟಿದ್ದು ಸಾ.”

“ಕೃಷ್ಣ ಕಾಂಗ್ರೆಸ್ ಬುಡಕ್ಕೆ ಸರಿಯಾದ ಕಾರಣ ಕೊಟ್ಟವುರೆ.”

“ಏನಾರ ಕೊಡ್ಳಿ, ಇವತ್ತು ಅವುನ ತಲೆಮ್ಯಾಲೆ ಹಾಕ್ಯಂಡವುನಲ್ಲ ವಿಗ್ಗುಮ ಅವು ಕಾಂಗ್ರೆಸ್ಸಿಂದು ಸಾ. ಅವುನ ಮನೆ ಮಠ ಆಸ್ತಿ ಪಾಸ್ತಿ ಬಟ್ಟಿ ಬರಿ ಯಲ್ಲಾ ಕಾಂಗ್ರೆಸ್ಸಿಂದು, ಸಾಯಕಡೆ ಸತಿ ಅದೂ ಬಿಜೆಪಿ ಗೋದ ನೋಡಿ ಅದ್ಕೆ ಅವುನ ದ್ರೋಹ ಈ ಶತಮಾನದ ದ್ರೋಹ ಸಾ.”

“ಅವುರೊಬ್ಬರೆ ಏನೋಗಿಲ್ಲ, ಅಂಥಾ ಡಿ.ಬಿ.ಚಂದ್ರೇಗೌಡ ಹೋದ, ಶ್ರೀಕಂಠಯ್ಯ ಹೋದ ಗೊತ್ತಾ.”

“ಅವುರು ದ್ಯಾವೇಗೌಡನ ರಾಜಕಾರಣದಿಂದ ಬೇಸತ್ತು ಹೋದ್ರು ಸಾ. ಇವುಂದೇಳಿ ಕಾಂಗ್ರೆಸ್ಸು ಇವುನ್ನ ಪ್ರಧಾನಿ ಮಾಡಲಿಲ್ಲ ಅಷ್ಟೇ. ಇನ್ಯಲ್ಲ ಸ್ಥಾನಕೊಟ್ಟಿತ್ತು ಅಲ್ವೆ, ಹೋಗ್ಲಿ ಬುಡಿ ಸತ್ತೋರ ಬಗ್ಗೆ ಯಾಕೆ ಮಾತಾಡದು.”

“ವಾಟಿಸ್ಸೆ ನೀನು ಕಾಂಗ್ರೆಸ್ಸಾ.”

“ಇಲ್ಲ ಸಾರ್, ಈಗ ಇಂಡಿಪೆಂಡೆಂಟು.”

“ಹ್ಯಂಗೆ ನ್ಯಡಿದದೆ ಪ್ರಚಾರ.”

“ನೋಡಿ, ಇವತ್ತು ಕುಮಾರಸ್ವಾಮಿ ಊರಿಗ್ಯಲ್ಲ ಬಸ್ಸು ಕಳಿಸಿ ಜನ ತಂದು ಮಂಡ್ಯದಲ್ಲಿ ಸುರಕಂಡು ಸುಮಲತನಿಗಿಂತ ನಾವು ಸ್ಟ್ರಾಂಗು ಅಂತ ತೋರ್ಯವುನೇ. ತಲಿಗೆ ಐದು ನೂರ್‍ವರ್ಗೂ ಬಟವಾಡೆ ಆಗಿದೆ. ಯಲಕ್ಷನ್ ಟೀಮಿಗೆ ಓಟಿಗಿಷ್ಟು ಅಂತ ತೀರ್ಮಾನ ಮಾಡಿ ಕೋಡ್ತಾರಂತೆ, ಯಾಕಂದ್ರೆ ಮುಖ್ಯಮಂತ್ರಿ ಮಗ ಸೋಲಬಾರದಂತೆ. ಅವುರಿಗೆ ಕಾರ್ಯಕರ್ತರವುರೆ ಎಂಟು ಜನ ಯಮ್ಮೆಲ್ಲೆ ಪೈಕಿ ಮೂರು ಜನ ಮಂತ್ರಿಗಳವುರೆ, ಆದ್ರಿಂದ ಬಟಾವಾಡೆಗೆ ಯಾವ ತ್ವಂದ್ರೆನು ಇಲ್ಲ.”

“ಜನ ದುಡ್ಡೀಸಗಳಕ್ಕೆ ತಯಾರಾಗಿದಾರ.”

“ಮತ್ತೆ ಯಾರಪ್ಪನ ಮನೆ ದುಡ್ಡು ಸಾರ್, ಮಂಡ್ಯದ ಮಣ್ಣಿನ ಮಕ್ಕಳ ದುಡ್ಡು ಬುಡಕ್ಕಾಯ್ತದಾ.”

“ನೀವು.”

“ನಾನು ಈಸಗಂಡು ಓಟು ಮಾತ್ರ ಸುಮಲತಾರಿಗಾಕ್ತಿನಿ.”

“ಥೂತ್ತೇರಿ.”

–    ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...