Homeಅಂಕಣಗಳುಥೂತ್ತೇರಿ | ಯಾಹೂಮಂಡ್ಯದ ಸ್ವಾಭಿಮಾನ ಅಂದ್ರೆ ಏನನ್ನಕಂಡಿದ್ದಿರಿ ಸಾ! - ಥೂತ್ತೇರಿ.

ಮಂಡ್ಯದ ಸ್ವಾಭಿಮಾನ ಅಂದ್ರೆ ಏನನ್ನಕಂಡಿದ್ದಿರಿ ಸಾ! – ಥೂತ್ತೇರಿ.

- Advertisement -
- Advertisement -

ಕುರುಕ್ಷೇತ್ರದ ವಿವರವನ್ನು ದೃತರಾಷ್ಟ್ರ ಸಂಜಯನಿಂದ ತಿಳಿದುಕೊಳ್ಳುತ್ತಿದ್ದಂತೆ, ನಾವು ಕೂಡ ಯಾಕೆ ಮಂಡ್ಯ ಜಿಲ್ಲೆಯ ವಾಟಿಸ್ಸೆ ಮಾತನಾಡಿಸಿ, ಅಖಾಡದ ವಿವರ ಪಡೆಯಬಾರದು ಎನ್ನಿಸಿದ ಕೂಡಲೇ, ಖುಷಿಯಾಯ್ತು. ವಾಟಿಸ್ಸೆಗೆ ಪೋನ್ ಮಾಡಲಾಗಿ ರಿಂಗಾಯ್ತು ರಿಂಗ್ ಟೋನ್….. ಹಾ ಯಣ್ಣೆ ನಿಮ್ದು ಊಟ ನಮ್ದು…..

‘ಹಲೋ ಯಾರು ಮಾತಾಡಿ ಪ್ಲೀಸ್’

“ವಾಟಿಸ್ಸೆ, ನಾನು ಯಾಹೂ”

“ಓಹೊಹೊ ಗುಡ್ಡಾಪ್ಟರ್‍ನೂನ್ ಸರ್”

“ಎಲ್ಲಿದ್ದೀ”

“ನಮ್ಮ ಕ್ಷೇತ್ರದಲ್ಲಿದ್ದೀನಿ ಸಾ”

“ಯಾಗಿದೆ ವಾತಾವರಣ”

“ತುಂಬ ಹೀಟಾಗಿದೆ ಸಾರ್, ಅದರಲ್ಲೂ ಕುಮಾರಣ್ಣನ ಇಂಜನ್ನು ತುಂಬಾ ಬಾಯ್ಲಾಗಿ ಹ್ವೊಗೆ ಬತ್ತಾ ಅದೆ”

“ಜೊತೆಲಿ ರಾಧಿಕಾ ಇದ್ರೆ ಕೂಲಾಗಿರತಿದ್ರಲ್ಲವಾ”

“ಅಂಗೇಳಕ್ಕೆ ಬರದಿಲ್ಲ ಸಾರ್. ಆಗ್ಲೆ ಇಂಜನ್ನ ಯರಡು ಸತಿ ಹೊರಾಯಲ್ಲಾಗಿರದ್ರಿಂದ, ಅವರ ಬಾಳಿಕೆ ಕಡಿಮೆ ಅಂತ ಅವರಪ್ಪ ದ್ಯಾವೇಗೌಡ ಹೇಳವ್ರೆ”

“ಅದ್ಕೆ ನಿಖಿಲ್ ನಿಲ್ಸಿದ್ದರಂತೆ”

“ಅವ್ಯಲ್ಲ ಸುಳ್ಳು ಸಾರ್, ದ್ಯಾವೇಗೌಡ್ರು ಸುಳ್ಳು ಹೇಳಿ ಹೇಳಿ ಅದ್ನೆ ನಿಜ ಅನ್ನಕಂಡು ಬುಡ್ತರೆ. ಅವುರಿಗೆ ಸುಳ್ಳಿಗೂ ಸತ್ಯಕ್ಕೂ ವ್ಯತ್ಯಾಸನೆ ಹೊಂಟ್ಯೋಗ್ಯದೆ”

“ಅಂಗಂತಿಯಾ”

“ಸಾರ್, ನಾನು ಯಾವ ಕಾಲದಿಂದ ದ್ಯಾವೇಗೌಡ್ರ ನೋಡಿದ್ದಿನಿ ಅವುರ ಭಾಷಣ ಕೇಳಿದ್ದೀನಿ. ಯಲ್ಲಾ ರಿಕಾಲ್ಡ್ ನನ್ನತ್ರ ಅವೆ ಸರ್”

“ಚುನಾವಣೆ ಬಗ್ಗೆ ಏನೇಳ್ತೀರಿ, ಸುಮಲತ ಗೆಲ್ತರ?”

“ಅವುರು ಗೆದ್ದಾಯ್ತು ಸಾರ್, ಇನ್ನೇನಿದ್ರು ಲೀಡ್ ಲೆಕ್ಕ ಹಾಕಬೇಕು”

“ಅದ್ಯಂಗೇಳ್ತಿ”

“ವೆರಿ ಸಿಂಪಲ್ಲು ಸಾರ್, ಈ ಕುಮಾರಸ್ವಾಮಿ ದ್ಯಾವೇಗೌಡ್ರು ಯಾವತ್ತು ನಿಖಿಲನ್ನು ತಂದು ಮಂಡ್ಯಕ್ಕೆ ನಿಲ್ಲಿಸಿದ್ರೊ ಅವತ್ತೇ ಸೋತ. ಯಾಕಂದ್ರೆ ಮಂಡ್ಯದಲ್ಲಿ ಗಂಡುಸ್ರಿಲವೆ ಅಂತ ಜನ ತಿರಿಗಿಬಿದ್ರು. ಆಗ ಗಂಡಸರ ಮಾನ ಉಳಸಕ್ಕೆ ಸುಮಲತ ನಿಂತ್ರು. ನಿಜಕ್ಕೂ ಮಂಡ್ಯದ ಮರಿಯಾದಿ ಉಳಿಸಿದ ಗೌಡ್ತಿ ಸಾರವುಳು”

“ಕಾಂಗ್ರೆಸ್ಸಿನೋರು  ಯಂಗವರೆ”?

“ಅವುರದ್ರಲ್ಯ ಅಂಡರ್ ಗ್ರೌಂಡ್ ವರ್ಕ್ ಸಾ”

“ಯಾಕೆ”

“ಯಾಕೆ ಅಂದ್ರೆ, ನಮ್ಮ ಜಿಲ್ಲೆಲಿ ಕಾಂಗ್ರೆಸ್ ಜೆಡಿಎಸ್ ಅಂದ್ರೆ ಮ್ಯಾಗಲ ಕೇರಿ ಕ್ಯಾಳಗಲ ಕೇರಿ ನಾಯಿಗಳಿದ್ದಂಗೆ. ಯಾವಾಗ್ಲೂ ಕಡದಾಡ್ತವೆ. ಯಲಕ್ಷನ್ ಬಂದಾಗ ಯಾರಿಗಾರ ಓಟಾಕಿ ಒಂದಾಗಿರಿನ ಅನ್ನದ ಇವತ್ತಿಗೂ ತಿಳಿಕಂಡಿಲ್ಲ. ಈಗೆ ಕುಮಾರಸ್ವಾಮಿ ಮಗನಿಗಾಗಿ ಒಂದಾದಾರೆ?

“ಅಂಗಾದ್ರೆ ಮೈತ್ರಿ ಧರ್ಮದ ಕತೆ ಏನೂ.”

“ಅದ ಮುರುದಾಕಿರೋನೆ ಕುಮಾರಸ್ವಾಮಿ.”

“ಅದ್ಯಂಗೇ.”

“ಯಂಗೇ ಅಂದ್ರೆ ಕೆಲವು ಕಾಂಗ್ರೆಸ್ಸಿಗರು ನನಿಗೆ ಬೇಕಿಲ್ಲ ಅಂತನೆ. ಅಂದ್ರೆ ಮೈತ್ರಿ ಧರ್ಮ ಮುರದೋರ್ಯಾರು ಹೇಳಿಸಾ.”

“ಕುಮಾರಣ್ಣಂದೆ ತಪ್ಪು  ಅಂತಿರಾ.”

“ಒಂದಲ್ಲಾ ಸಾ. ತಪ್ಪು ದಿನಾ ಮಾಡ್ತನೇ ಹೋಯ್ತಾ ಅವುನೆ.”

“ಒಂದ್ಯರಡೇಳು ನೋಡಣ.”

“ನಿಖಿಲ್ ಎಲ್ಲಿದ್ದಿಯಪ್ಪಾ ಅಂದಿದ್ದು ಮೊದಲ್ನೆ ತಪ್ಪು, ಅವತ್ತಿಂದ ಮಗನ್ನ ಮಂಡ್ಯದಲ್ಲಿ ನಾಟಿಹಾಕಿ ಬ್ಯಳಸಕ್ಕೆ ಮಾಡಿದ ಕ್ಯಲಸಗಳ್ಯಲ್ಲ. ಪ್ರಾಮಾಣಿಕವಾದವಲ್ಲ ಅಂತ, ಜನಕ್ಕೆ ಈಗ ಗೊತ್ತಾಯ್ತಾ ಅದೆ ಸಾ. ಇನ್ನ ಆ ದರ್ಶನನ್ನ ಯಾಕೆ ಬೈಬೇಕು ಸಾ. ಇವುನ ಮಗನೂ ಹೀರೋ ಅಲ್ಲವೆ.”

“ಮಗನ್ನ ಗೆಲ್ಲಸಬೇಕಲವೆ.”

“ಗೆಲ್ಲಿಸಬೇಕು ಅಂತ ಅನ್ನೋ ಮಾತುಗಳೇ, ಅವುನ್ನ ಸೋಲುಸ್ತಾ ಅವೆ ಸಾ. ನಾನಂತು ಹುಟ್ಟಿದ್ ತಾವಿಂದ ಮಂಡ್ಯ ಜಿಲ್ಲೆ ಹಿಂಗೆ ಎದ್ದು ನಿಂತಿದ್ದ ನೋಡ್ನಿಲ್ಲ ಸಾ.”

“ಬರಿ ಅಂಬಿ ಅಭಿಮಾನಿಗಳಬ್ಬರವಂತೆ.”

“ಅವುರಬ್ಬರ ಸರಿ, ಸುಮ್ಮನಿರೋರ ಅಬ್ಬರ ಕೇಳಿಸಿಗಂಡಿದ್ದೀರಾ. ಅದು ಸಾಧಾರಣವಾದದ್ದಲ್ಲ ಸಾರ್. ಇಂದ್ರಾಗಾಂಧಿ, ರಾಜೀವ್‍ಗಾಂಧಿ ಜ್ವತೆಲಿದ್ದಿನಿ ಅಂತ ಮಂಡ್ಯನೆ ಮರತಿದ್ದ ಯಸ್ಸೆಂ ಕೃಷ್ಣನ್ನ ಶಂಕರೇಗೌಡ್ರೆದ್ರಿಗೆ ತಗದು ಯಸ್ತರಲ್ಲ ಅಂಥದೊಂದು ಅಬ್ಬರ ವಳಗೇ ಗುರುಗುಡತಾ ಅದೆ.”

“ಅಮರಾವತಿ ಚಂದ್ರಶೇಖರ ಸುಮಲತಾರಿಗೆ ಕೈಕೊಟ್ಟನಂತೆ.”

“ವ್ಯವಾರಸ್ತರಂಗೇ ಅಲವ ಸಾ, ಅಂಬಿ ಇರಗಂಟ ಅವುನ್ನ ತಂಬಿ ಅನ್ನಕಂಡು ಬದುಕಿದ, ಅವುನ ಮಂತ್ರಿಗಿರಿಗೂ ಕ್ಯಟ್ಟ ಹೆಸರು ತಂದ, ಈಗಂಬಿ ಇಲ್ಲ, ಅದ್ಕೆ ಕುಮಾರಣ್ಣ ನತÀ್ರಕ್ಕೋಗಿ ಕುಯ್ಯಿಗುಡ್ತಾ ಅವುನೆ. ಈ ಶತಮಾನದ ದ್ರೋಹ ಅಂದ್ರೆ ಅವiರಾವತಿ ಚಂದ್ರಶೇಖರ ಅಂಬರೀಶ್ಗೆ ಕೈ ಕೊಟ್ಟಿದ್ದು, ಯಸ್ಸೆಂ ಕೃಷ್ಣ ಕಾಂಗ್ರೆಸ್‍ಗೆ ಕೈಕೊಟ್ಟಿದ್ದು ಸಾ.”

“ಕೃಷ್ಣ ಕಾಂಗ್ರೆಸ್ ಬುಡಕ್ಕೆ ಸರಿಯಾದ ಕಾರಣ ಕೊಟ್ಟವುರೆ.”

“ಏನಾರ ಕೊಡ್ಳಿ, ಇವತ್ತು ಅವುನ ತಲೆಮ್ಯಾಲೆ ಹಾಕ್ಯಂಡವುನಲ್ಲ ವಿಗ್ಗುಮ ಅವು ಕಾಂಗ್ರೆಸ್ಸಿಂದು ಸಾ. ಅವುನ ಮನೆ ಮಠ ಆಸ್ತಿ ಪಾಸ್ತಿ ಬಟ್ಟಿ ಬರಿ ಯಲ್ಲಾ ಕಾಂಗ್ರೆಸ್ಸಿಂದು, ಸಾಯಕಡೆ ಸತಿ ಅದೂ ಬಿಜೆಪಿ ಗೋದ ನೋಡಿ ಅದ್ಕೆ ಅವುನ ದ್ರೋಹ ಈ ಶತಮಾನದ ದ್ರೋಹ ಸಾ.”

“ಅವುರೊಬ್ಬರೆ ಏನೋಗಿಲ್ಲ, ಅಂಥಾ ಡಿ.ಬಿ.ಚಂದ್ರೇಗೌಡ ಹೋದ, ಶ್ರೀಕಂಠಯ್ಯ ಹೋದ ಗೊತ್ತಾ.”

“ಅವುರು ದ್ಯಾವೇಗೌಡನ ರಾಜಕಾರಣದಿಂದ ಬೇಸತ್ತು ಹೋದ್ರು ಸಾ. ಇವುಂದೇಳಿ ಕಾಂಗ್ರೆಸ್ಸು ಇವುನ್ನ ಪ್ರಧಾನಿ ಮಾಡಲಿಲ್ಲ ಅಷ್ಟೇ. ಇನ್ಯಲ್ಲ ಸ್ಥಾನಕೊಟ್ಟಿತ್ತು ಅಲ್ವೆ, ಹೋಗ್ಲಿ ಬುಡಿ ಸತ್ತೋರ ಬಗ್ಗೆ ಯಾಕೆ ಮಾತಾಡದು.”

“ವಾಟಿಸ್ಸೆ ನೀನು ಕಾಂಗ್ರೆಸ್ಸಾ.”

“ಇಲ್ಲ ಸಾರ್, ಈಗ ಇಂಡಿಪೆಂಡೆಂಟು.”

“ಹ್ಯಂಗೆ ನ್ಯಡಿದದೆ ಪ್ರಚಾರ.”

“ನೋಡಿ, ಇವತ್ತು ಕುಮಾರಸ್ವಾಮಿ ಊರಿಗ್ಯಲ್ಲ ಬಸ್ಸು ಕಳಿಸಿ ಜನ ತಂದು ಮಂಡ್ಯದಲ್ಲಿ ಸುರಕಂಡು ಸುಮಲತನಿಗಿಂತ ನಾವು ಸ್ಟ್ರಾಂಗು ಅಂತ ತೋರ್ಯವುನೇ. ತಲಿಗೆ ಐದು ನೂರ್‍ವರ್ಗೂ ಬಟವಾಡೆ ಆಗಿದೆ. ಯಲಕ್ಷನ್ ಟೀಮಿಗೆ ಓಟಿಗಿಷ್ಟು ಅಂತ ತೀರ್ಮಾನ ಮಾಡಿ ಕೋಡ್ತಾರಂತೆ, ಯಾಕಂದ್ರೆ ಮುಖ್ಯಮಂತ್ರಿ ಮಗ ಸೋಲಬಾರದಂತೆ. ಅವುರಿಗೆ ಕಾರ್ಯಕರ್ತರವುರೆ ಎಂಟು ಜನ ಯಮ್ಮೆಲ್ಲೆ ಪೈಕಿ ಮೂರು ಜನ ಮಂತ್ರಿಗಳವುರೆ, ಆದ್ರಿಂದ ಬಟಾವಾಡೆಗೆ ಯಾವ ತ್ವಂದ್ರೆನು ಇಲ್ಲ.”

“ಜನ ದುಡ್ಡೀಸಗಳಕ್ಕೆ ತಯಾರಾಗಿದಾರ.”

“ಮತ್ತೆ ಯಾರಪ್ಪನ ಮನೆ ದುಡ್ಡು ಸಾರ್, ಮಂಡ್ಯದ ಮಣ್ಣಿನ ಮಕ್ಕಳ ದುಡ್ಡು ಬುಡಕ್ಕಾಯ್ತದಾ.”

“ನೀವು.”

“ನಾನು ಈಸಗಂಡು ಓಟು ಮಾತ್ರ ಸುಮಲತಾರಿಗಾಕ್ತಿನಿ.”

“ಥೂತ್ತೇರಿ.”

–    ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...