Homeಅಂಕಣಗಳುಥೂತ್ತೇರಿ | ಯಾಹೂಮಂಡ್ಯದ ಸ್ವಾಭಿಮಾನ ಅಂದ್ರೆ ಏನನ್ನಕಂಡಿದ್ದಿರಿ ಸಾ! - ಥೂತ್ತೇರಿ.

ಮಂಡ್ಯದ ಸ್ವಾಭಿಮಾನ ಅಂದ್ರೆ ಏನನ್ನಕಂಡಿದ್ದಿರಿ ಸಾ! – ಥೂತ್ತೇರಿ.

- Advertisement -
- Advertisement -

ಕುರುಕ್ಷೇತ್ರದ ವಿವರವನ್ನು ದೃತರಾಷ್ಟ್ರ ಸಂಜಯನಿಂದ ತಿಳಿದುಕೊಳ್ಳುತ್ತಿದ್ದಂತೆ, ನಾವು ಕೂಡ ಯಾಕೆ ಮಂಡ್ಯ ಜಿಲ್ಲೆಯ ವಾಟಿಸ್ಸೆ ಮಾತನಾಡಿಸಿ, ಅಖಾಡದ ವಿವರ ಪಡೆಯಬಾರದು ಎನ್ನಿಸಿದ ಕೂಡಲೇ, ಖುಷಿಯಾಯ್ತು. ವಾಟಿಸ್ಸೆಗೆ ಪೋನ್ ಮಾಡಲಾಗಿ ರಿಂಗಾಯ್ತು ರಿಂಗ್ ಟೋನ್….. ಹಾ ಯಣ್ಣೆ ನಿಮ್ದು ಊಟ ನಮ್ದು…..

‘ಹಲೋ ಯಾರು ಮಾತಾಡಿ ಪ್ಲೀಸ್’

“ವಾಟಿಸ್ಸೆ, ನಾನು ಯಾಹೂ”

“ಓಹೊಹೊ ಗುಡ್ಡಾಪ್ಟರ್‍ನೂನ್ ಸರ್”

“ಎಲ್ಲಿದ್ದೀ”

“ನಮ್ಮ ಕ್ಷೇತ್ರದಲ್ಲಿದ್ದೀನಿ ಸಾ”

“ಯಾಗಿದೆ ವಾತಾವರಣ”

“ತುಂಬ ಹೀಟಾಗಿದೆ ಸಾರ್, ಅದರಲ್ಲೂ ಕುಮಾರಣ್ಣನ ಇಂಜನ್ನು ತುಂಬಾ ಬಾಯ್ಲಾಗಿ ಹ್ವೊಗೆ ಬತ್ತಾ ಅದೆ”

“ಜೊತೆಲಿ ರಾಧಿಕಾ ಇದ್ರೆ ಕೂಲಾಗಿರತಿದ್ರಲ್ಲವಾ”

“ಅಂಗೇಳಕ್ಕೆ ಬರದಿಲ್ಲ ಸಾರ್. ಆಗ್ಲೆ ಇಂಜನ್ನ ಯರಡು ಸತಿ ಹೊರಾಯಲ್ಲಾಗಿರದ್ರಿಂದ, ಅವರ ಬಾಳಿಕೆ ಕಡಿಮೆ ಅಂತ ಅವರಪ್ಪ ದ್ಯಾವೇಗೌಡ ಹೇಳವ್ರೆ”

“ಅದ್ಕೆ ನಿಖಿಲ್ ನಿಲ್ಸಿದ್ದರಂತೆ”

“ಅವ್ಯಲ್ಲ ಸುಳ್ಳು ಸಾರ್, ದ್ಯಾವೇಗೌಡ್ರು ಸುಳ್ಳು ಹೇಳಿ ಹೇಳಿ ಅದ್ನೆ ನಿಜ ಅನ್ನಕಂಡು ಬುಡ್ತರೆ. ಅವುರಿಗೆ ಸುಳ್ಳಿಗೂ ಸತ್ಯಕ್ಕೂ ವ್ಯತ್ಯಾಸನೆ ಹೊಂಟ್ಯೋಗ್ಯದೆ”

“ಅಂಗಂತಿಯಾ”

“ಸಾರ್, ನಾನು ಯಾವ ಕಾಲದಿಂದ ದ್ಯಾವೇಗೌಡ್ರ ನೋಡಿದ್ದಿನಿ ಅವುರ ಭಾಷಣ ಕೇಳಿದ್ದೀನಿ. ಯಲ್ಲಾ ರಿಕಾಲ್ಡ್ ನನ್ನತ್ರ ಅವೆ ಸರ್”

“ಚುನಾವಣೆ ಬಗ್ಗೆ ಏನೇಳ್ತೀರಿ, ಸುಮಲತ ಗೆಲ್ತರ?”

“ಅವುರು ಗೆದ್ದಾಯ್ತು ಸಾರ್, ಇನ್ನೇನಿದ್ರು ಲೀಡ್ ಲೆಕ್ಕ ಹಾಕಬೇಕು”

“ಅದ್ಯಂಗೇಳ್ತಿ”

“ವೆರಿ ಸಿಂಪಲ್ಲು ಸಾರ್, ಈ ಕುಮಾರಸ್ವಾಮಿ ದ್ಯಾವೇಗೌಡ್ರು ಯಾವತ್ತು ನಿಖಿಲನ್ನು ತಂದು ಮಂಡ್ಯಕ್ಕೆ ನಿಲ್ಲಿಸಿದ್ರೊ ಅವತ್ತೇ ಸೋತ. ಯಾಕಂದ್ರೆ ಮಂಡ್ಯದಲ್ಲಿ ಗಂಡುಸ್ರಿಲವೆ ಅಂತ ಜನ ತಿರಿಗಿಬಿದ್ರು. ಆಗ ಗಂಡಸರ ಮಾನ ಉಳಸಕ್ಕೆ ಸುಮಲತ ನಿಂತ್ರು. ನಿಜಕ್ಕೂ ಮಂಡ್ಯದ ಮರಿಯಾದಿ ಉಳಿಸಿದ ಗೌಡ್ತಿ ಸಾರವುಳು”

“ಕಾಂಗ್ರೆಸ್ಸಿನೋರು  ಯಂಗವರೆ”?

“ಅವುರದ್ರಲ್ಯ ಅಂಡರ್ ಗ್ರೌಂಡ್ ವರ್ಕ್ ಸಾ”

“ಯಾಕೆ”

“ಯಾಕೆ ಅಂದ್ರೆ, ನಮ್ಮ ಜಿಲ್ಲೆಲಿ ಕಾಂಗ್ರೆಸ್ ಜೆಡಿಎಸ್ ಅಂದ್ರೆ ಮ್ಯಾಗಲ ಕೇರಿ ಕ್ಯಾಳಗಲ ಕೇರಿ ನಾಯಿಗಳಿದ್ದಂಗೆ. ಯಾವಾಗ್ಲೂ ಕಡದಾಡ್ತವೆ. ಯಲಕ್ಷನ್ ಬಂದಾಗ ಯಾರಿಗಾರ ಓಟಾಕಿ ಒಂದಾಗಿರಿನ ಅನ್ನದ ಇವತ್ತಿಗೂ ತಿಳಿಕಂಡಿಲ್ಲ. ಈಗೆ ಕುಮಾರಸ್ವಾಮಿ ಮಗನಿಗಾಗಿ ಒಂದಾದಾರೆ?

“ಅಂಗಾದ್ರೆ ಮೈತ್ರಿ ಧರ್ಮದ ಕತೆ ಏನೂ.”

“ಅದ ಮುರುದಾಕಿರೋನೆ ಕುಮಾರಸ್ವಾಮಿ.”

“ಅದ್ಯಂಗೇ.”

“ಯಂಗೇ ಅಂದ್ರೆ ಕೆಲವು ಕಾಂಗ್ರೆಸ್ಸಿಗರು ನನಿಗೆ ಬೇಕಿಲ್ಲ ಅಂತನೆ. ಅಂದ್ರೆ ಮೈತ್ರಿ ಧರ್ಮ ಮುರದೋರ್ಯಾರು ಹೇಳಿಸಾ.”

“ಕುಮಾರಣ್ಣಂದೆ ತಪ್ಪು  ಅಂತಿರಾ.”

“ಒಂದಲ್ಲಾ ಸಾ. ತಪ್ಪು ದಿನಾ ಮಾಡ್ತನೇ ಹೋಯ್ತಾ ಅವುನೆ.”

“ಒಂದ್ಯರಡೇಳು ನೋಡಣ.”

“ನಿಖಿಲ್ ಎಲ್ಲಿದ್ದಿಯಪ್ಪಾ ಅಂದಿದ್ದು ಮೊದಲ್ನೆ ತಪ್ಪು, ಅವತ್ತಿಂದ ಮಗನ್ನ ಮಂಡ್ಯದಲ್ಲಿ ನಾಟಿಹಾಕಿ ಬ್ಯಳಸಕ್ಕೆ ಮಾಡಿದ ಕ್ಯಲಸಗಳ್ಯಲ್ಲ. ಪ್ರಾಮಾಣಿಕವಾದವಲ್ಲ ಅಂತ, ಜನಕ್ಕೆ ಈಗ ಗೊತ್ತಾಯ್ತಾ ಅದೆ ಸಾ. ಇನ್ನ ಆ ದರ್ಶನನ್ನ ಯಾಕೆ ಬೈಬೇಕು ಸಾ. ಇವುನ ಮಗನೂ ಹೀರೋ ಅಲ್ಲವೆ.”

“ಮಗನ್ನ ಗೆಲ್ಲಸಬೇಕಲವೆ.”

“ಗೆಲ್ಲಿಸಬೇಕು ಅಂತ ಅನ್ನೋ ಮಾತುಗಳೇ, ಅವುನ್ನ ಸೋಲುಸ್ತಾ ಅವೆ ಸಾ. ನಾನಂತು ಹುಟ್ಟಿದ್ ತಾವಿಂದ ಮಂಡ್ಯ ಜಿಲ್ಲೆ ಹಿಂಗೆ ಎದ್ದು ನಿಂತಿದ್ದ ನೋಡ್ನಿಲ್ಲ ಸಾ.”

“ಬರಿ ಅಂಬಿ ಅಭಿಮಾನಿಗಳಬ್ಬರವಂತೆ.”

“ಅವುರಬ್ಬರ ಸರಿ, ಸುಮ್ಮನಿರೋರ ಅಬ್ಬರ ಕೇಳಿಸಿಗಂಡಿದ್ದೀರಾ. ಅದು ಸಾಧಾರಣವಾದದ್ದಲ್ಲ ಸಾರ್. ಇಂದ್ರಾಗಾಂಧಿ, ರಾಜೀವ್‍ಗಾಂಧಿ ಜ್ವತೆಲಿದ್ದಿನಿ ಅಂತ ಮಂಡ್ಯನೆ ಮರತಿದ್ದ ಯಸ್ಸೆಂ ಕೃಷ್ಣನ್ನ ಶಂಕರೇಗೌಡ್ರೆದ್ರಿಗೆ ತಗದು ಯಸ್ತರಲ್ಲ ಅಂಥದೊಂದು ಅಬ್ಬರ ವಳಗೇ ಗುರುಗುಡತಾ ಅದೆ.”

“ಅಮರಾವತಿ ಚಂದ್ರಶೇಖರ ಸುಮಲತಾರಿಗೆ ಕೈಕೊಟ್ಟನಂತೆ.”

“ವ್ಯವಾರಸ್ತರಂಗೇ ಅಲವ ಸಾ, ಅಂಬಿ ಇರಗಂಟ ಅವುನ್ನ ತಂಬಿ ಅನ್ನಕಂಡು ಬದುಕಿದ, ಅವುನ ಮಂತ್ರಿಗಿರಿಗೂ ಕ್ಯಟ್ಟ ಹೆಸರು ತಂದ, ಈಗಂಬಿ ಇಲ್ಲ, ಅದ್ಕೆ ಕುಮಾರಣ್ಣ ನತÀ್ರಕ್ಕೋಗಿ ಕುಯ್ಯಿಗುಡ್ತಾ ಅವುನೆ. ಈ ಶತಮಾನದ ದ್ರೋಹ ಅಂದ್ರೆ ಅವiರಾವತಿ ಚಂದ್ರಶೇಖರ ಅಂಬರೀಶ್ಗೆ ಕೈ ಕೊಟ್ಟಿದ್ದು, ಯಸ್ಸೆಂ ಕೃಷ್ಣ ಕಾಂಗ್ರೆಸ್‍ಗೆ ಕೈಕೊಟ್ಟಿದ್ದು ಸಾ.”

“ಕೃಷ್ಣ ಕಾಂಗ್ರೆಸ್ ಬುಡಕ್ಕೆ ಸರಿಯಾದ ಕಾರಣ ಕೊಟ್ಟವುರೆ.”

“ಏನಾರ ಕೊಡ್ಳಿ, ಇವತ್ತು ಅವುನ ತಲೆಮ್ಯಾಲೆ ಹಾಕ್ಯಂಡವುನಲ್ಲ ವಿಗ್ಗುಮ ಅವು ಕಾಂಗ್ರೆಸ್ಸಿಂದು ಸಾ. ಅವುನ ಮನೆ ಮಠ ಆಸ್ತಿ ಪಾಸ್ತಿ ಬಟ್ಟಿ ಬರಿ ಯಲ್ಲಾ ಕಾಂಗ್ರೆಸ್ಸಿಂದು, ಸಾಯಕಡೆ ಸತಿ ಅದೂ ಬಿಜೆಪಿ ಗೋದ ನೋಡಿ ಅದ್ಕೆ ಅವುನ ದ್ರೋಹ ಈ ಶತಮಾನದ ದ್ರೋಹ ಸಾ.”

“ಅವುರೊಬ್ಬರೆ ಏನೋಗಿಲ್ಲ, ಅಂಥಾ ಡಿ.ಬಿ.ಚಂದ್ರೇಗೌಡ ಹೋದ, ಶ್ರೀಕಂಠಯ್ಯ ಹೋದ ಗೊತ್ತಾ.”

“ಅವುರು ದ್ಯಾವೇಗೌಡನ ರಾಜಕಾರಣದಿಂದ ಬೇಸತ್ತು ಹೋದ್ರು ಸಾ. ಇವುಂದೇಳಿ ಕಾಂಗ್ರೆಸ್ಸು ಇವುನ್ನ ಪ್ರಧಾನಿ ಮಾಡಲಿಲ್ಲ ಅಷ್ಟೇ. ಇನ್ಯಲ್ಲ ಸ್ಥಾನಕೊಟ್ಟಿತ್ತು ಅಲ್ವೆ, ಹೋಗ್ಲಿ ಬುಡಿ ಸತ್ತೋರ ಬಗ್ಗೆ ಯಾಕೆ ಮಾತಾಡದು.”

“ವಾಟಿಸ್ಸೆ ನೀನು ಕಾಂಗ್ರೆಸ್ಸಾ.”

“ಇಲ್ಲ ಸಾರ್, ಈಗ ಇಂಡಿಪೆಂಡೆಂಟು.”

“ಹ್ಯಂಗೆ ನ್ಯಡಿದದೆ ಪ್ರಚಾರ.”

“ನೋಡಿ, ಇವತ್ತು ಕುಮಾರಸ್ವಾಮಿ ಊರಿಗ್ಯಲ್ಲ ಬಸ್ಸು ಕಳಿಸಿ ಜನ ತಂದು ಮಂಡ್ಯದಲ್ಲಿ ಸುರಕಂಡು ಸುಮಲತನಿಗಿಂತ ನಾವು ಸ್ಟ್ರಾಂಗು ಅಂತ ತೋರ್ಯವುನೇ. ತಲಿಗೆ ಐದು ನೂರ್‍ವರ್ಗೂ ಬಟವಾಡೆ ಆಗಿದೆ. ಯಲಕ್ಷನ್ ಟೀಮಿಗೆ ಓಟಿಗಿಷ್ಟು ಅಂತ ತೀರ್ಮಾನ ಮಾಡಿ ಕೋಡ್ತಾರಂತೆ, ಯಾಕಂದ್ರೆ ಮುಖ್ಯಮಂತ್ರಿ ಮಗ ಸೋಲಬಾರದಂತೆ. ಅವುರಿಗೆ ಕಾರ್ಯಕರ್ತರವುರೆ ಎಂಟು ಜನ ಯಮ್ಮೆಲ್ಲೆ ಪೈಕಿ ಮೂರು ಜನ ಮಂತ್ರಿಗಳವುರೆ, ಆದ್ರಿಂದ ಬಟಾವಾಡೆಗೆ ಯಾವ ತ್ವಂದ್ರೆನು ಇಲ್ಲ.”

“ಜನ ದುಡ್ಡೀಸಗಳಕ್ಕೆ ತಯಾರಾಗಿದಾರ.”

“ಮತ್ತೆ ಯಾರಪ್ಪನ ಮನೆ ದುಡ್ಡು ಸಾರ್, ಮಂಡ್ಯದ ಮಣ್ಣಿನ ಮಕ್ಕಳ ದುಡ್ಡು ಬುಡಕ್ಕಾಯ್ತದಾ.”

“ನೀವು.”

“ನಾನು ಈಸಗಂಡು ಓಟು ಮಾತ್ರ ಸುಮಲತಾರಿಗಾಕ್ತಿನಿ.”

“ಥೂತ್ತೇರಿ.”

–    ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...