Homeಕರ್ನಾಟಕಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

ಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರಿನ ಡಿ.ಜೆ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ’ಅಕ್ಷಮ್ಯ’ ಎಂದು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಅವರು ಹೇಳಿದ್ದಾರೆ.

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ.
ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.

ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ.
ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಅವರು ಹೇಳಿದ್ದಾರೆ.

“ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ” ಎಂಬ ಕುರಾನಿನ ಆಲ್ ಹಿಜ್ರ್ ಅಧ್ಯಾಯದ ವಾಕ್ಯವನ್ನು ಉಲ್ಲೇಖಿಸಿ ಜೊತೆಗೆ, ದಯವಿಲ್ಲದ ಧರ್ಮವಾವುದಯ್ಯಾ?/ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ/ದಯವೇ ಧರ್ಮದ ಮೂಲವಯ್ಯಾ/ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಬಸವಣ್ಣನ ವಚನವನ್ನು ನೆನಪಿದ್ದಾರೆ.


ಓದಿ: ಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...