Homeಕರ್ನಾಟಕಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

ಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರಿನ ಡಿ.ಜೆ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ’ಅಕ್ಷಮ್ಯ’ ಎಂದು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಅವರು ಹೇಳಿದ್ದಾರೆ.

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ.
ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.

ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ.
ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಅವರು ಹೇಳಿದ್ದಾರೆ.

“ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ” ಎಂಬ ಕುರಾನಿನ ಆಲ್ ಹಿಜ್ರ್ ಅಧ್ಯಾಯದ ವಾಕ್ಯವನ್ನು ಉಲ್ಲೇಖಿಸಿ ಜೊತೆಗೆ, ದಯವಿಲ್ಲದ ಧರ್ಮವಾವುದಯ್ಯಾ?/ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ/ದಯವೇ ಧರ್ಮದ ಮೂಲವಯ್ಯಾ/ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಬಸವಣ್ಣನ ವಚನವನ್ನು ನೆನಪಿದ್ದಾರೆ.


ಓದಿ: ಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...