Homeಕರ್ನಾಟಕಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಧರ್ಮಾಂಧರು: ಸಿಎಂ ಸಿದ್ದರಾಮಯ್ಯ

ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಧರ್ಮಾಂಧರು: ಸಿಎಂ ಸಿದ್ದರಾಮಯ್ಯ

"ಕನ್ನಡ ತಾಯಿ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಕನ್ನಡದಲ್ಲಿ ಬರೆಯುತ್ತಾರೆಯೇ?"

- Advertisement -
- Advertisement -

ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಬಗ್ಗೆ ‘ಧರ್ಮಾಂಧರು’ ಮಾತ್ರ ಮಾತನಾಡುತ್ತಾರೆ. ಅವರಿಗೆ ಇತಿಹಾಸ ತಿಳಿದಿಲ್ಲ, ಇತಿಹಾಸವನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ, ಅದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಸ್ಪಷ್ಟಪಡಿಸಿದರು.

ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಿದೆ. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ ಎಂದು ತಿಳಿಸಿದರು.

ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿಗಳು ಬಹಳ ಕಡಿಮೆ ಎಂದು ಸಿಎಂ ಹೇಳಿದರು.

ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಕನ್ನಡದಲ್ಲಿ ಬರೆಯುತ್ತಾರೆಯೇ?

ಜನ ಸಾಹಿತ್ಯ ಸಮ್ಮೇಳನದಲ್ಲಿ ಬಾನು ಮುಷ್ತಾಕ್ ಅವರು ಕನ್ನಡ ತಾಯಿಯ ಬಗ್ಗೆ ಗೌರವವಿಲ್ಲದೆ ಮಾತನಾಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, “ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಕನ್ನಡದಲ್ಲಿ ಬರೆಯುತ್ತಾರೆಯೇ?. ಬಿಜೆಪಿಯವರು ಕುಂಟು ನೆಪವನ್ನು ಹುಡುಕುತ್ತಿದ್ದಾರೆ. ಅವರು ರಾಜಕೀಯವಾಗಿ ಮಾತನಾಡುತ್ತಾರೆಯೇ ಹೊರತು, ಜಾತ್ಯಾತೀತವಾಗಿ ಮಾತನಾಡುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಢೋಂಗಿಗಳ ಮಾತು: ದನದ ಮಾಂಸ ತಿಂದು ಬರುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಇದೆಲ್ಲಾ ಢೋಂಗಿಗಳು ಮಾತನಾಡುವುದು. ಅವರು ಮಾತನಾಡುವುದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದರು.

ದೀಪಾ ಭಾಸ್ತಿಯವರನ್ನು ಸನ್ಮಾನಿಸಲಾಗಿದೆ

ಎದೆಯ ಹಣತೆ ಭಾಷಾಂತರ ಮಾಡಿದ ದೀಪಾ ಭಾಸ್ತಿಯವರಿಗೂ ಅರಮನೆಯ ಮುಂದೆ ಗೌರವ ಸಲ್ಲಿಸಬೇಕಿತ್ತು ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ದೀಪಾ ಭಾಸ್ತಿ ಹಾಗೂ ಬಾನು ಮುಸ್ತಾಕ್ ಅವರಿಗೆ ತಲಾ ಹತ್ತು ಲಕ್ಷ ರೂಗಳನ್ನು ನೀಡಿ ಇಬ್ಬರನ್ನು ಸರ್ಕಾರ ಈಗಾಗಲೇ ಸನ್ಮಾನಿಸಿ, ಗೌರವಿಸಿದೆ ಎಂದು ತಿಳಿಸಿದರು.

ಧರ್ಮಯಾತ್ರೆ: ಬಿಜೆಪಿಯವರದ್ದು ಎಲ್ಲದರಲ್ಲೂ ರಾಜಕೀಯ

ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಳ್ಳುತ್ತಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮುಯ್ಯ, “ಬಿಜೆಪಿಯವರು ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಾರೆ. ಯಾತ್ರೆ ಹೋದರೆ ಹೋಗಲಿ. ಎಸ್‌ಐಟಿ ರಚನೆಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್‌ಐಟಿ ರಚನೆ ಮಾಡಲಾಗಿದೆ ಎಂದರು.

ದೂರುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ, ಸಂಸ್ಥೆಗಳು ಎಸ್‌ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದರು. ಬಿಜೆಪಿಯವರು ಕೂಡ ಇದನ್ನು ಸ್ವಾಗತಿಸಿದ್ದರು. ಈಗ ಮಾತ್ರ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಧರ್ಮ ಗೊತ್ತಿಲ್ಲ ಎಂದು ಹೇಳಿದರು.

ಜಿಎಸ್‌ಟಿ ಎರಡು ಸ್ಲ್ಯಾಬ್ : ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟ

ಕೇಂದ್ರ ಸರ್ಕಾರ ಜಿಎಸ್‌ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ. ಆದರೆ, ಹಣಕಾಸಿನ (Revenue Protection) ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದೆ ಎಂದು ತಿಳಿಸಿದರು.

ಸಿನ್ ಗೂಡ್ಸ್ ಮೇಲೆ ಸೆಸ್ ಹಾಕಿ ಪರಿಹಾರ ಒದಗಿಸಲು ಜಿಎಸ್ ಟಿ ಮಂಡಳಿಗೆ ಸಲಹೆ

2017ರಲ್ಲಿ ಜಿಎಸ್‌ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. ಈಗ ಸುಮಾರು 12% ತೆರಿಗೆ ಬೆಳವಣಿಗೆಯಾಗಿದೆ. ಲಕ್ಷುರಿ(ಸಿನ್ ಗೂಡ್ಸ್ ) ವಸ್ತುಗಳಾದ ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಬೆಂಜ್ ಕಾರುಗಳಲ್ಲಿ ಓಡಾಡುವವ ಮೇಲೆ ಸೆಸ್ ಹಾಕಿ ನಮಗೆ ಪರಿಹಾರ ಕೊಡಿ ಎಂದು ಸಲಹೆ ನೀಡಿದ್ದೇವೆ. ಸಚಿವ ಕೃಷ್ಣಭೈರೇಗೌಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೇ ಈಗ ಎಂಟು ರಾಜ್ಯಗಳ ಆರ್ಥಿಕ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿರುವ ಸಭೆಯಲ್ಲಿ ಇದನ್ನು ಪ್ರಸ್ತಾಪ ಮಾಡಲಿದ್ದಾರೆ ಎಂದರು.

ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಬಿಜೆಪಿಯವರು ಯಾವಾಗ ಧ್ವನಿ ಎತ್ತಿದ್ದಾರೆ?

ಜಿಎಸ್‌ಟಿ ವಿಚಾರವಾಗಿ ರಾಜ್ಯದ ಸಚಿವರು ಹಾಗೂ ಸಂಸದರು ನಿಯೋಗ ತೆರಳಲಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಬಿಜೆಪಿಯ ಸಂಸದರು ಎಂದಿಗೂ ಇದನ್ನು ಒತ್ತಾಯಿಸುವುದಿಲ್ಲ. ಕರ್ನಾಟಕಕ್ಕೆ 11,950 ಕೋಟಿಗಳು ನಷ್ಟವಾಯಿತು. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಿಯೇ ಇಲ್ಲ. ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದ್ದಾರೆ. ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಯಾವಾಗ ಮಾತನಾಡಿದ್ದಾರೆ? ಧರ್ಮಸ್ಥಳದ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಸಮನಾಗಿ ಆಸ್ತಿ ನೋಂದಣಿ ಹೆಚ್ಚಳ

ಆಸ್ತಿ ನೋಂದಣಿ ಶುಲ್ಕ ಹೆಚ್ಚಳವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಸಮಾನವಾಗಿ ಶೇಕಡ ಒಂದರಷ್ಟನ್ನು ಹೆಚ್ಚಿಸಲಾಗಿದೆ ಎಂದರು.

ಧರ್ಮಸ್ಥಳ ಪ್ರಕರಣ:ಬೇರೆ ತನಿಖೆ ಅಗತ್ಯವಿಲ್ಲ

ಧರ್ಮಸ್ಥಳದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂಬ ಬಿಜೆಪಿ ಒತ್ತಾಯವಿರುವ ಬಗ್ಗೆ ಮಾತನಾಡಿದ ಸಿಎಂ, “ಬಿಜೆಪಿ ಅಧಿಕಾರದಲ್ಲಿದ್ದು, ಸಿಬಿಐಗೆ ಯಾವ ಪ್ರಕರಣವನ್ನು ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು. ಎಸ್‌ಐಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆಯ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದರು.

ಧರ್ಮಸ್ಥಳ: ಸತ್ಯ ತಿಳಿಯಬೇಕಿದೆ

ತನಿಖೆ ನಡೆಯುವಾಗ ಎಲ್ಲಾ ಪಕ್ಷಗಳು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಮಾತನಾಡಿದ ಸಿಎಂ ಧರ್ಮದ ಪರವಾಗಿ ಯಾತ್ರೆ ಮಾಡುತ್ತಿದ್ದು, ದೂರಿನ ಆಧಾರದ ಮೇಲೆ ಸತ್ಯವನ್ನು ತಿಳಿಯಬೇಕಾಗಿದೆ ಎಂದರು. ದಸರಾ ಏರ್ ಶೋ ವಿಜಯದಶಮಿ ದಿನವೇ ನಡೆಯಲಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

ದ್ವಿಭಾಷಾ ಸೂತ್ರ ಜಾರಿಗೆ ಹೆಚ್ಚಿದ ಒತ್ತಡ; ರವೀಂದ್ರ ಕಲಾಕ್ಷೇತ್ರದ ಒಟ್ಟುಗೂಡಿದ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....