Homeಮುಖಪುಟನ್ಯಾಯಾಧೀಶರನ್ನು ಟ್ರೋಲ್ ಮಾಡುವವರು ದೇಶ ವಿರೋಧಿಗಳು: ಸಿಎಂ ಜಗನ್ ಮೋಹನ್ ರೆಡ್ಡಿ

ನ್ಯಾಯಾಧೀಶರನ್ನು ಟ್ರೋಲ್ ಮಾಡುವವರು ದೇಶ ವಿರೋಧಿಗಳು: ಸಿಎಂ ಜಗನ್ ಮೋಹನ್ ರೆಡ್ಡಿ

- Advertisement -
- Advertisement -

ಸಾಮಾಜಿಕ ಮಾದ್ಯಮಗಳಲ್ಲಿ ಮತ್ತು ಟಿವಿ ಚರ್ಚೆಗಳಲ್ಲಿ ನ್ಯಾಯಾಲಯಗಳು ಮತ್ತು ನ್ಯಾಯಾಧೀಶರನ್ನು ಟ್ರೋಲ್ ಮಾಡುವವರು ದೇಶ ವಿರೋಧಿಗಳು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಹೇಳಿದ್ದಾರೆ.

ವಿಜಯವಾಡದ ಇಂದಿರಾಗಾಂಧಿ ಮುನ್ಸಿಪಲ್ ಸ್ಟೇಡಿಯಂನಲ್ಲಿ ಪೊಲೀಸ್ ಸ್ಮರಣಾರ್ಥ ಗೌರವ ವಂದನೆ ಸ್ವೀಕರಿಸಿ ಪೊಲೀಸ್ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಜಗನ್ ಮೋಹನ್ ರೆಡ್ಡಿ, ಪತ್ರಿಕಾ ಸ್ವಾತಂತ್ರ್ಯ, ಮಾನವ ಹಕ್ಕು ಮತ್ತು ಪ್ರಜಾಪ್ರಭುತ್ವದ ಹೆಸರಿನಲ್ಲಿ ಸ್ವಾರ್ಥಕ್ಕಾಗಿ ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸುವವರು ಸಮಾಜ ವಿರೋಧಿಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ಅಂಗಲ್ಲು ಮತ್ತು ಪುಂಗನೂರಿನಲ್ಲಿ ನಡೆದ ಹಿಂಸಾತ್ಮಕ ಘಟನೆಗಳಲ್ಲಿ ಪ್ರತಿಪಕ್ಷದ ಟಿಡಿಪಿ ನಾಯಕರು ಶಾಮೀಲಾಗಿದ್ದಾರೆಂದು ಉಲ್ಲೇಖಿಸಿದ ಜಗನ್ ಮೋಹನ್ ರೆಡ್ಡಿ ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಕೆಲವು ಗುಂಪುಗಳು ಸರ್ಕಾರದ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿವೆ. ಅವರು ಕೂಡ ಸಮಾಜ ವಿರೋಧಿಗಳು ಅವರ ವಿರುದ್ಧ ಪೊಲೀಸರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಾನೂನು ಮತ್ತು ನ್ಯಾಯಾಂಗದ ಅಧಿಕಾರಿಗಳನ್ನು ಸಹ ಸಾಮಾಜಿಕ ಮಾದ್ಯಮಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ ಮತ್ತು ಸಾಕ್ಷ್ಯಾಧಾರಗಳೊಂದಿಗೆ ಸಿಕ್ಕಿಬಿದ್ದ ನಂತರ ಅವರ ಪರವಾಗಿ ತೀರ್ಪುಗಳು ಸಿಕ್ಕಿಲ್ಲ ಎಂದು ಟ್ರೋಲ್‌ ಮಾಡಲಾಗುತ್ತಿದೆ ಮತ್ತು ಟಿವಿ ಚರ್ಚೆಗಳನ್ನು ನಡೆಸಲಾಗುತ್ತಿದೆ. ಇದು ಸಮಾಜ ವಿರೋಧಿ ಕೃತ್ಯ ಎಂದು ಹೇಳಿದ್ದಾರೆ.

ಟಿಡಿಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಯಾಗಿರುವ ಭ್ರಷ್ಟಾಚಾರ ಪ್ರಕರಣಗಳ ಕುರಿತು ನ್ಯಾಯಾಲಯದ ಆದೇಶಗಳನ್ನು ಉಲ್ಲೇಖಿಸಿದ ಜಗನ್ ಮೋಹನ್ ರೆಡ್ಡಿ, ನಾಗರಿಕ ಸ್ನೇಹಿಯಾಗಿದ್ದರೂ, ಮಾನವೀಯ ನೆಲೆಯಲ್ಲಿ ವರ್ತಿಸುತ್ತಿದ್ದರೂ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜಿ ಮಾಡಿಕೊಳ್ಳಬಾರದು ಮತ್ತು ಹೆಣ್ಣುಮಕ್ಕಳು, ಮಹಿಳೆಯರು, ವಿಶೇಷವಾಗಿ ಶೋಷಿತ ವರ್ಗಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಅಪರಾಧಿಗಳು ಆಧುನಿಕ ವಿಧಾನಗಳನ್ನು ಅಳವಡಿಸಿಕೊಳ್ಳುವ ಸಮಯದಲ್ಲಿ ಅಪರಾಧಗಳ ವೈಜ್ಞಾನಿಕ ತನಿಖೆಗೆ ಪೊಲೀಸರು ನವೀನ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು. ಆಂಧ್ರಪ್ರದೇಶ ಪೊಲೀಸರು 30 ಸೈಬರ್ ತಜ್ಞರಿರುವ ತಂಡವನ್ನು ಹೊಂದಿದ್ದು, ಸೈಬರ್ ಅಪರಾಧಗಳ ತನಿಖೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನು ಓದಿ: ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...