HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...