HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...