HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...