HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...