HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...