HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...