HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...