HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...