HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...