HomeಚಳವಳಿJNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ...

JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಿನ್ನೆ ರಾತ್ರಿ ನಡೆದ ಹಿಂಸಾಚಾರದಿಂದ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಹಲವು ಫೋಟೊಗಳು ಸಾಕ್ಷಿ ಒದಗಿಸಿವೆ.

ಎಬಿವಿಪಿಯ ಜೆಎನ್‌ಯು ಕಾರ್ಯಕಾರಿ ಸಮಿತಿಯ ಸದಸ್ಯನಾದ ವಿಕಾಸ್ ಪಟೇಲ್ ಎಂದು ಗುರುತಿಸಲ್ಪಟ್ಟ ಯುವಕನು ಲಾಠಿಗಳೊಂದಿಗೆ ಶಸ್ತ್ರಸಜ್ಜಿತವಾದ ಹತ್ತಾರು ಯುವಕರ ಗುಂಪಿನೊಂದಿಗೆ ನಿಂತಿರುವ ಫೋಟೊ ಸಿಕ್ಕಿದೆ.

ವಿಕಾಸ್ ಪಟೇಲ್ ದೆಹಲಿ ಪೊಲೀಸರು ಬಳಸುವಂತಹ ಫೈಬರ್-ಗ್ಲಾಸ್ ಲಾಠಿ ಹಿಡಿದುಕೊಂಡು ನಿಂತಿದ್ದರೆ, ನೀಲಿ ಮತ್ತು ಹಳದಿ ಬಣ್ಣದ ಸ್ವೆಟರ್‌ ಧರಿಸಿ ಅವನ ಪಕ್ಕದಲ್ಲಿ ನಿಂತಿರುವುದು ಜೆಎನ್‌ಯುನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಶಿವ ಪೂಜನ್ ಮಂಡಲ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನೂ ಸಹ ಎಬಿವಿಪಿ ಸದಸ್ಯನೆಂದು ಹೇಳಲಾಗಿದೆ.

ಬಲಭಾಗದಲ್ಲಿ ನಿಂತಿರುವ ವಿಕಾಸ್ ಪಟೇಲ್, ಹಳದಿ ನೀಲಿ ಸ್ವೆಟರ್ ಹಾಕಿರುವ ಮಂಡಲ್‌

ಈ ಫೋಟೊವನ್ನು ಜೆಎನ್‌ಯು ಮೇಲೆ ದಾಳಿ ನಡೆಯುವ ಮೊದಲು ಅಂದರೆ ಭಾನುವಾರ ಮಧ್ಯಾಹ್ನ ತೆಗೆಯಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಬಗ್ಗೆ ಮಾತಾಡಿಕೊಳ್ಳಲು ಅವರೆಲ್ಲರೂ ಒಂದೇಡೆ ಸೇರಿದ್ದಾಗ ತೆಗೆದಿರುವ ಫೋಟೊ ಇದಾಗಿದೆ.

ಮತ್ತೊಂದು ಗುಂಪಿನ ಫೋಟೊದಲ್ಲಿ ಶಿವ ಪೂಜನ್ ಮಂಡಲ್ ದೊಡ್ಡ ಗುಂಪಿನ ಜೊತೆ ಲಾಠಿಗಳನ್ನಿಡಿದು ಕ್ಯಾಂಪಸ್‌ ಕಡೆಗೆ ಸಾಗುತ್ತಿರುವ ಫೋಟೊ ಸಿಕ್ಕಿದೆ. ಇನ್ನೊಂದು ಫೋಟೊ ಕ್ಯಾಂಪಸ್‌ ಒಳಗೆ ಅವರು ಹೋಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಅದೇ ಗುಂಪು ಲಾಠಿಗಳೊಂದಿಗೆ ಕ್ಯಾಂಪಸ್‌ ಒಳಗೆ ಹೋಗುತ್ತಿರುವುದು

ಮುಂದುವರಿದು ಜೆಎನ್‌ಯು ಮೇಲೆ ದಾಳಿಯ ನಂತರ ಆ ಸಶಸ್ತ್ರ ಗುಂಪು ಜೆಎನ್‌ಯು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಸಹ ಶಿವ ಪೂಜನ್ ಮಂಡಲ್ ಕಂಡುಬಂದಿದ್ದಾನೆ. ಅಲ್ಲದೇ ಪೊಲೀಸರು ಈ ದಾಳಿಕೋರರನ್ನು ಬೇಗ ಬೇಗ ಹೋಗಿ ಎಂದು ಮಾರ್ಗದರ್ಶನ ಮಾಡುವುದು ಕಂಡುಬಂದಿರುವುದರಿಂದ ದಾಳಿಗೆ ಪೊಲೀಸರ ಬೆಂಬಲವಿದೆ ಎಂಬ  ಅನುಮಾನಗಳು ಮೂಡುವಂತಾಗಿದೆ. ವಿಡಿಯೋ ನೋಡಿ

ಜೆಎನ್‌ಯು ದಾಳಿಯ ವಿಚಾರ ದೇಶಾದ್ಯಂತ ವೈರಲ್‌ ಆದ ಕೂಡಲೇ ಪಟೇಲ್ ಮತ್ತು ಮಂಡಲ್ ಇಬ್ಬರೂ ಸಹ ತಮ್ಮ ಸಾಮಾಜಿಕ ಮಾಧ್ಯಮಗಳ ಎಲ್ಲಾ ಖಾತೆಗಳನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಮುಂದುವರಿದು ಫ್ರೆಂಡ್ಸ್‌ ಆಫ್‌ ಆರ್‌ಎಸ್‌ಎಸ್‌ ಎಂಬ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್‌ನಲ್ಲಿ ಪಟೇಲ್ ಅವರ ಸಂಖ್ಯೆಯೂ ಇದೆ. ಇದರಲ್ಲಿ ಎಬಿವಿಪಿ ಸದಸ್ಯರ ಗುಂಪು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಡ ವಿದ್ಯಾರ್ಥಿಗಳ ಮೇಲೆ ನಡೆಸುವ ದಾಳಿಯ ಬಗ್ಗೆ ಚರ್ಚಿಸಿರುವುದು ಕಂಡುಬಂದಿದೆ.

ಅದೇ ಗುಂಪಿನ ಚಾಟ್‌ನಲ್ಲಿರುವ ಇತರರಲ್ಲಿ ಜೆಎನ್‌ಯುನಲ್ಲಿ ಸಂಸ್ಕೃತ ವಿದ್ಯಾರ್ಥಿ ಯೋಗೇಂದ್ರ ಭಾರದ್ವಾಜ್ ಮತ್ತು ಜೆಎನ್‌ಯುನಲ್ಲಿ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿ ಸಂದೀಪ್ ಸಿಂಗ್ ಸೇರಿದ್ದಾರೆ. ಭಾರದ್ವಾಜ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್‌ ಮಾಡಿದ್ದಾರೆ. ಆದರೆ ಅವರ ಟ್ವಿಟ್ಟರ್ ಪ್ರೊಫೈಲ್‌ನ ಸ್ಕ್ರೀನ್‌ಶಾಟ್‌ಗಳು ಅವರನ್ನು ಎಬಿವಿಪಿ ಸದಸ್ಯರೆಂದು ಗುರುತಿಸುತ್ತಿವೆ. ಸಂದೀಪ್ ಸಿಂಗ್ ಅವರ ಖಾತೆ ಸಕ್ರಿಯವಾಗಿದೆ.

ಯೋಗೇಂದ್ರ ಭಾರದ್ವಾಜ್

ವಾಟ್ಸಾಪ್ ಚಾಟ್‌ನಲ್ಲಿ, ಯೋಗೇಂದ್ರ ಭಾರದ್ವಾಜ್ ಅವರು “ಎಡ ಭಯೋತ್ಪಾದನೆ” ಯನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಾರೆ ಮತ್ತು “ನಾವು ಅವರನ್ನು ಹಿಡಿದು ಹೊಡೆಯಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

abvpಗೆ ಸೇರಿರುವ ಸಾಕ್ಷ್ಯ.. ಸಿಎಎ ಪರ ಪ್ರತಿಭಟನೆ ನಡೆಸಿರುವುದು

ದೆಹಲಿ ವಿಶ್ವವಿದ್ಯಾನಿಲಯದ ಹುಡುಗರು ಸೇರಿದಂತೆ ಹೊರಗಿನಿಂದ ಜೆಎನ್‌ಯುಗೆ ಹಲವಾರು ಹುಡುಗರು ಬಂದು ಹಲ್ಲೆ ನಡೆಸುವ ಕುರಿತು ಯೋಜನೆಯ ವಿವಿಧ ಅಂಶಗಳನ್ನು ಈ ಮೂವರೂ ಚರ್ಚಿಸಿದ್ದಾರೆ. ಈ ವಾಟ್ಸಾಪ್‌ ಗುಂಪಿಗೆ ಸೇರಲು ಲಿಂಕ್‌ಗಳನ್ನು ಹಲವರಿಗೆ ಹಂಚಿದಾಗ ಅದರಲ್ಲಿ ಕೆಲ ಎಡಪಕ್ಷದ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ಗೊತ್ತಾದ ಕೂಡಲೇ ಅವರನ್ನು ರಿಮೂವ್‌ ಮಾಡಿ ಮತ್ತು ಇಡೀ ಗ್ರೂಪ್‌ ಅನ್ನೇ ಡಿಲೀಟ್‌ ಮಾಡಿ ಎಂಬ ಸಂದೇಶಗಳು ಕೂಡ ಬಂದಿದೆ.

ಸಂದೀಪ್‌ ಸಿಂಗ್‌ ಎಬಿವಿಪಿ ಎಂಬುದು.. ಅಲ್ಲದೇ ಪಿಎಚ್‌ಡಿ ವಿದ್ಯಾರ್ಥಿ

ಎಬಿವಿಪಿ ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದೆ, ಫೋಟೊಗಳು ಮತ್ತು ವಾಟ್ಸಾಪ್ ಚಾಟ್‌ಗಳನ್ನು ಫೋಟೊಶಾಪ್‌ ಮಾಡಲಾಗಿದೆ ಎಂದು ಹೇಳಿದೆ.

ಕೃಪೆ; ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...