Homeಮುಖಪುಟಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ ಎಸ್.ಎ.ಬೋಬಡೆ!

ಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ ಎಸ್.ಎ.ಬೋಬಡೆ!

ಕೃಷಿ ಕ್ಷೇತ್ರಗಳಲ್ಲಿ ಸುಧಾರಣೆಗಳು ಅಗತ್ಯ. ಈಗ ಈ ಕಾನೂನುಗಳನ್ನು ಹಿಂಪಡೆದುಕೊಂಡರೆ, ಮುಂದಿನ 50 ವರ್ಷಗಳಲ್ಲಿ ಇಂತಹ ಕಾನೂನುಗಳನ್ನು ಯಾವುದೆ ರಾಜಕೀಯ ಪಕ್ಷಗಳು ಮರಳಿ ತರಲಾರವು- ಅನಿಲ್ ಘನ್ವತ್ (ಸಮಿತಿ ಸದಸ್ಯ)

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಬಗ್ಗೆ ರೈತರಿಗಿರುವ ಗೊಂದಲಗಳನ್ನು ನಿವಾರಿಸಲು ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿಯು ಮಂಗಳವಾರ ತನ್ನ ಮೊದಲ ಸಭೆಯನ್ನು ನಡೆಸಿದ್ದು, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳೂ ಸೇರಿದಂತೆ ರೈತರು ಮತ್ತು ಕೃಷಿ ತಜ್ಞರಿಂದ ಅಭಿಪ್ರಾಯಗಳನ್ನು ಪಡೆದುಕೊಳ್ಳಲು ಉದ್ದೇಶಿಸಲಾಗಿದೆ” ಎಂದು ಸಮಿತಿಯ ಸದಸ್ಯರಲ್ಲೊಬ್ಬರಾದ ಅನಿಲ ಘನ್ವತ್ ಅವರು ತಿಳಿಸಿದ್ದಾರೆ.

“ಸಮಿತಿಯು ವಸ್ತುನಿಷ್ಠತೆಯನ್ನು ಕಾಯ್ದುಕೊಳ್ಳಲಿದೆ ಮತ್ತು ಚರ್ಚೆಗಳ ನಡುವೆ ವೈಯಕ್ತಿಕ ಅಭಿಪ್ರಾಯಗಳಿಗೆ ಅವಕಾಶ ನೀಡುವುದಿಲ್ಲ. ಜೊತೆಗೆ ಸಮಿತಿಯ ಸದಸ್ಯರು ಯಾವುದೇ ರಾಜಕೀಯ ಪಕ್ಷ ಅಥವಾ ಸರ್ಕಾರದ ಪರವಾಗಿರುವುದಿಲ್ಲ” ಎಂದು ಘನ್ವತ್ ಒತ್ತಿ ಹೇಳಿದ್ದಾರೆ.

“ನಮ್ಮೊಂದಿಗೆ ಮಾತುಕತೆಗೆ ಬರುವಂತೆ ರೈತರ ಮನವೊಲಿಸುವುದೇ ಸಮಿತಿಯ ಪಾಲಿಗೆ ದೊಡ್ಡ ಸವಾಲು ಆಗಿದೆ. ನಮ್ಮ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತೇವೆ. ರೈತರು ಮತ್ತು ಇತರ ಪಾಲುದಾರರೊಂದಿಗೆ ಮೊದಲ ಸುತ್ತಿನ ಮಾತುಕತೆಯನ್ನು ಗುರುವಾರ ನಡೆಸಲು ನಿಗದಿಗೊಳಿಸಲಾಗಿದೆ. ನಮ್ಮೊಂದಿಗೆ ಮಾತನಾಡಿ. ನಾವು ನಿಮ್ಮ ಅಹವಾಲುಗಳನ್ನು ಆಲಿಸಿ, ನಿಮ್ಮ ಅಭಿಪ್ರಾಯಗಳನ್ನು ನ್ಯಾಯಾಲಯದ ಮುಂದಿಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

“ಆದರೆ, ಕೃಷಿ ಕ್ಷೇತ್ರಗಳಲ್ಲಿ ಸುಧಾರಣೆಗಳು ಅಗತ್ಯ. ಈಗ ಈ ಕಾನೂನುಗಳನ್ನು ಹಿಂಪಡೆದುಕೊಂಡರೆ, ಮುಂದಿನ 50 ವರ್ಷಗಳಲ್ಲಿ ಇಂತಹ ಕಾನೂನುಗಳನ್ನು ಯಾವುದೆ ರಾಜಕೀಯ ಪಕ್ಷಗಳು ಮರಳಿ ತರಲಾರವು” ಎಂದು ಅನಿಲ್ ಘನ್ವತ್ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಕೃಷಿ ಆರ್ಥಿಕ ತಜ್ಞರಾದ ಅಶೋಕ್ ಗುಲಾಟಿ ಮತ್ತು ಪ್ರಮೋದ್ ಕುಮಾರ್ ಜೋಶಿ ಅವರು ಸಮಿತಿಯ ಇತರ ಸದಸ್ಯರಾಗಿದ್ದಾರೆ. ಬೂಪಿಂದರ್ ಸಿಂಗ್ ಈ ಹಿಂದೆಯೇ ಸಮಿತಿಯಿಂದ ಹೊರ ಬಂದು, ತಾನು ರೈತರ ಪರವಾಗಿರುವುದಾಗಿ ಘೋಷಿಸಿದ್ದರು.

ಸರ್ವೋಚ್ಚ ನ್ಯಾಯಾಲಯವು ನೇಮಿಸಿರುವ ಸಮಿತಿಯ ಸದಸ್ಯರು ಈ ಕೃಷಿ ಕಾನೂನುಗಳ ಪರವಾಗಿದ್ದಾರೆ ಎಂಬ ರೈತರ ದೂರುಗಳ ನಡುವೆಯೇ ಭಾರತದ ಮುಖ್ಯ ನ್ಯಾಯಾಧೀಶ ಎಸ್.ಎ.ಬೋಬಡೆ ಪ್ರತಿಕ್ರಿಯಿಸಿ, “ಸಮಿತಿಯ ಸದಸ್ಯರು ಆಯ್ಕೆಗೆ ಮುನ್ನ ಕೃಷಿ ಕಾನೂನುಗಳ ಬಗ್ಗೆ ವ್ಯಕ್ತಪಡಿಸಿದ್ದ ಅಭಿಪ್ರಾಯಗಳು ಅವರ ಅನರ್ಹತೆಗೆ ಕಾರಣವಾಗುವುದಿಲ್ಲ. ಜೊತೆಗೆ ಅವರ ಅಭಿಪ್ರಾಯಗಳು ಮುಂದೆ ಬದಲಾಗಲೂಬಹುದು” ಎಂದು ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.


ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...