Homeಮುಖಪುಟಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ ಎಸ್.ಎ.ಬೋಬಡೆ!

ಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ ಎಸ್.ಎ.ಬೋಬಡೆ!

ಕೃಷಿ ಕ್ಷೇತ್ರಗಳಲ್ಲಿ ಸುಧಾರಣೆಗಳು ಅಗತ್ಯ. ಈಗ ಈ ಕಾನೂನುಗಳನ್ನು ಹಿಂಪಡೆದುಕೊಂಡರೆ, ಮುಂದಿನ 50 ವರ್ಷಗಳಲ್ಲಿ ಇಂತಹ ಕಾನೂನುಗಳನ್ನು ಯಾವುದೆ ರಾಜಕೀಯ ಪಕ್ಷಗಳು ಮರಳಿ ತರಲಾರವು- ಅನಿಲ್ ಘನ್ವತ್ (ಸಮಿತಿ ಸದಸ್ಯ)

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಬಗ್ಗೆ ರೈತರಿಗಿರುವ ಗೊಂದಲಗಳನ್ನು ನಿವಾರಿಸಲು ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿಯು ಮಂಗಳವಾರ ತನ್ನ ಮೊದಲ ಸಭೆಯನ್ನು ನಡೆಸಿದ್ದು, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳೂ ಸೇರಿದಂತೆ ರೈತರು ಮತ್ತು ಕೃಷಿ ತಜ್ಞರಿಂದ ಅಭಿಪ್ರಾಯಗಳನ್ನು ಪಡೆದುಕೊಳ್ಳಲು ಉದ್ದೇಶಿಸಲಾಗಿದೆ” ಎಂದು ಸಮಿತಿಯ ಸದಸ್ಯರಲ್ಲೊಬ್ಬರಾದ ಅನಿಲ ಘನ್ವತ್ ಅವರು ತಿಳಿಸಿದ್ದಾರೆ.

“ಸಮಿತಿಯು ವಸ್ತುನಿಷ್ಠತೆಯನ್ನು ಕಾಯ್ದುಕೊಳ್ಳಲಿದೆ ಮತ್ತು ಚರ್ಚೆಗಳ ನಡುವೆ ವೈಯಕ್ತಿಕ ಅಭಿಪ್ರಾಯಗಳಿಗೆ ಅವಕಾಶ ನೀಡುವುದಿಲ್ಲ. ಜೊತೆಗೆ ಸಮಿತಿಯ ಸದಸ್ಯರು ಯಾವುದೇ ರಾಜಕೀಯ ಪಕ್ಷ ಅಥವಾ ಸರ್ಕಾರದ ಪರವಾಗಿರುವುದಿಲ್ಲ” ಎಂದು ಘನ್ವತ್ ಒತ್ತಿ ಹೇಳಿದ್ದಾರೆ.

“ನಮ್ಮೊಂದಿಗೆ ಮಾತುಕತೆಗೆ ಬರುವಂತೆ ರೈತರ ಮನವೊಲಿಸುವುದೇ ಸಮಿತಿಯ ಪಾಲಿಗೆ ದೊಡ್ಡ ಸವಾಲು ಆಗಿದೆ. ನಮ್ಮ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತೇವೆ. ರೈತರು ಮತ್ತು ಇತರ ಪಾಲುದಾರರೊಂದಿಗೆ ಮೊದಲ ಸುತ್ತಿನ ಮಾತುಕತೆಯನ್ನು ಗುರುವಾರ ನಡೆಸಲು ನಿಗದಿಗೊಳಿಸಲಾಗಿದೆ. ನಮ್ಮೊಂದಿಗೆ ಮಾತನಾಡಿ. ನಾವು ನಿಮ್ಮ ಅಹವಾಲುಗಳನ್ನು ಆಲಿಸಿ, ನಿಮ್ಮ ಅಭಿಪ್ರಾಯಗಳನ್ನು ನ್ಯಾಯಾಲಯದ ಮುಂದಿಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

“ಆದರೆ, ಕೃಷಿ ಕ್ಷೇತ್ರಗಳಲ್ಲಿ ಸುಧಾರಣೆಗಳು ಅಗತ್ಯ. ಈಗ ಈ ಕಾನೂನುಗಳನ್ನು ಹಿಂಪಡೆದುಕೊಂಡರೆ, ಮುಂದಿನ 50 ವರ್ಷಗಳಲ್ಲಿ ಇಂತಹ ಕಾನೂನುಗಳನ್ನು ಯಾವುದೆ ರಾಜಕೀಯ ಪಕ್ಷಗಳು ಮರಳಿ ತರಲಾರವು” ಎಂದು ಅನಿಲ್ ಘನ್ವತ್ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಕೃಷಿ ಆರ್ಥಿಕ ತಜ್ಞರಾದ ಅಶೋಕ್ ಗುಲಾಟಿ ಮತ್ತು ಪ್ರಮೋದ್ ಕುಮಾರ್ ಜೋಶಿ ಅವರು ಸಮಿತಿಯ ಇತರ ಸದಸ್ಯರಾಗಿದ್ದಾರೆ. ಬೂಪಿಂದರ್ ಸಿಂಗ್ ಈ ಹಿಂದೆಯೇ ಸಮಿತಿಯಿಂದ ಹೊರ ಬಂದು, ತಾನು ರೈತರ ಪರವಾಗಿರುವುದಾಗಿ ಘೋಷಿಸಿದ್ದರು.

ಸರ್ವೋಚ್ಚ ನ್ಯಾಯಾಲಯವು ನೇಮಿಸಿರುವ ಸಮಿತಿಯ ಸದಸ್ಯರು ಈ ಕೃಷಿ ಕಾನೂನುಗಳ ಪರವಾಗಿದ್ದಾರೆ ಎಂಬ ರೈತರ ದೂರುಗಳ ನಡುವೆಯೇ ಭಾರತದ ಮುಖ್ಯ ನ್ಯಾಯಾಧೀಶ ಎಸ್.ಎ.ಬೋಬಡೆ ಪ್ರತಿಕ್ರಿಯಿಸಿ, “ಸಮಿತಿಯ ಸದಸ್ಯರು ಆಯ್ಕೆಗೆ ಮುನ್ನ ಕೃಷಿ ಕಾನೂನುಗಳ ಬಗ್ಗೆ ವ್ಯಕ್ತಪಡಿಸಿದ್ದ ಅಭಿಪ್ರಾಯಗಳು ಅವರ ಅನರ್ಹತೆಗೆ ಕಾರಣವಾಗುವುದಿಲ್ಲ. ಜೊತೆಗೆ ಅವರ ಅಭಿಪ್ರಾಯಗಳು ಮುಂದೆ ಬದಲಾಗಲೂಬಹುದು” ಎಂದು ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.


ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...