Homeಮುಖಪುಟಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ ಎಸ್.ಎ.ಬೋಬಡೆ!

ಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ ಎಸ್.ಎ.ಬೋಬಡೆ!

ಕೃಷಿ ಕ್ಷೇತ್ರಗಳಲ್ಲಿ ಸುಧಾರಣೆಗಳು ಅಗತ್ಯ. ಈಗ ಈ ಕಾನೂನುಗಳನ್ನು ಹಿಂಪಡೆದುಕೊಂಡರೆ, ಮುಂದಿನ 50 ವರ್ಷಗಳಲ್ಲಿ ಇಂತಹ ಕಾನೂನುಗಳನ್ನು ಯಾವುದೆ ರಾಜಕೀಯ ಪಕ್ಷಗಳು ಮರಳಿ ತರಲಾರವು- ಅನಿಲ್ ಘನ್ವತ್ (ಸಮಿತಿ ಸದಸ್ಯ)

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಬಗ್ಗೆ ರೈತರಿಗಿರುವ ಗೊಂದಲಗಳನ್ನು ನಿವಾರಿಸಲು ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿಯು ಮಂಗಳವಾರ ತನ್ನ ಮೊದಲ ಸಭೆಯನ್ನು ನಡೆಸಿದ್ದು, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳೂ ಸೇರಿದಂತೆ ರೈತರು ಮತ್ತು ಕೃಷಿ ತಜ್ಞರಿಂದ ಅಭಿಪ್ರಾಯಗಳನ್ನು ಪಡೆದುಕೊಳ್ಳಲು ಉದ್ದೇಶಿಸಲಾಗಿದೆ” ಎಂದು ಸಮಿತಿಯ ಸದಸ್ಯರಲ್ಲೊಬ್ಬರಾದ ಅನಿಲ ಘನ್ವತ್ ಅವರು ತಿಳಿಸಿದ್ದಾರೆ.

“ಸಮಿತಿಯು ವಸ್ತುನಿಷ್ಠತೆಯನ್ನು ಕಾಯ್ದುಕೊಳ್ಳಲಿದೆ ಮತ್ತು ಚರ್ಚೆಗಳ ನಡುವೆ ವೈಯಕ್ತಿಕ ಅಭಿಪ್ರಾಯಗಳಿಗೆ ಅವಕಾಶ ನೀಡುವುದಿಲ್ಲ. ಜೊತೆಗೆ ಸಮಿತಿಯ ಸದಸ್ಯರು ಯಾವುದೇ ರಾಜಕೀಯ ಪಕ್ಷ ಅಥವಾ ಸರ್ಕಾರದ ಪರವಾಗಿರುವುದಿಲ್ಲ” ಎಂದು ಘನ್ವತ್ ಒತ್ತಿ ಹೇಳಿದ್ದಾರೆ.

“ನಮ್ಮೊಂದಿಗೆ ಮಾತುಕತೆಗೆ ಬರುವಂತೆ ರೈತರ ಮನವೊಲಿಸುವುದೇ ಸಮಿತಿಯ ಪಾಲಿಗೆ ದೊಡ್ಡ ಸವಾಲು ಆಗಿದೆ. ನಮ್ಮ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತೇವೆ. ರೈತರು ಮತ್ತು ಇತರ ಪಾಲುದಾರರೊಂದಿಗೆ ಮೊದಲ ಸುತ್ತಿನ ಮಾತುಕತೆಯನ್ನು ಗುರುವಾರ ನಡೆಸಲು ನಿಗದಿಗೊಳಿಸಲಾಗಿದೆ. ನಮ್ಮೊಂದಿಗೆ ಮಾತನಾಡಿ. ನಾವು ನಿಮ್ಮ ಅಹವಾಲುಗಳನ್ನು ಆಲಿಸಿ, ನಿಮ್ಮ ಅಭಿಪ್ರಾಯಗಳನ್ನು ನ್ಯಾಯಾಲಯದ ಮುಂದಿಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

“ಆದರೆ, ಕೃಷಿ ಕ್ಷೇತ್ರಗಳಲ್ಲಿ ಸುಧಾರಣೆಗಳು ಅಗತ್ಯ. ಈಗ ಈ ಕಾನೂನುಗಳನ್ನು ಹಿಂಪಡೆದುಕೊಂಡರೆ, ಮುಂದಿನ 50 ವರ್ಷಗಳಲ್ಲಿ ಇಂತಹ ಕಾನೂನುಗಳನ್ನು ಯಾವುದೆ ರಾಜಕೀಯ ಪಕ್ಷಗಳು ಮರಳಿ ತರಲಾರವು” ಎಂದು ಅನಿಲ್ ಘನ್ವತ್ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಕೃಷಿ ಆರ್ಥಿಕ ತಜ್ಞರಾದ ಅಶೋಕ್ ಗುಲಾಟಿ ಮತ್ತು ಪ್ರಮೋದ್ ಕುಮಾರ್ ಜೋಶಿ ಅವರು ಸಮಿತಿಯ ಇತರ ಸದಸ್ಯರಾಗಿದ್ದಾರೆ. ಬೂಪಿಂದರ್ ಸಿಂಗ್ ಈ ಹಿಂದೆಯೇ ಸಮಿತಿಯಿಂದ ಹೊರ ಬಂದು, ತಾನು ರೈತರ ಪರವಾಗಿರುವುದಾಗಿ ಘೋಷಿಸಿದ್ದರು.

ಸರ್ವೋಚ್ಚ ನ್ಯಾಯಾಲಯವು ನೇಮಿಸಿರುವ ಸಮಿತಿಯ ಸದಸ್ಯರು ಈ ಕೃಷಿ ಕಾನೂನುಗಳ ಪರವಾಗಿದ್ದಾರೆ ಎಂಬ ರೈತರ ದೂರುಗಳ ನಡುವೆಯೇ ಭಾರತದ ಮುಖ್ಯ ನ್ಯಾಯಾಧೀಶ ಎಸ್.ಎ.ಬೋಬಡೆ ಪ್ರತಿಕ್ರಿಯಿಸಿ, “ಸಮಿತಿಯ ಸದಸ್ಯರು ಆಯ್ಕೆಗೆ ಮುನ್ನ ಕೃಷಿ ಕಾನೂನುಗಳ ಬಗ್ಗೆ ವ್ಯಕ್ತಪಡಿಸಿದ್ದ ಅಭಿಪ್ರಾಯಗಳು ಅವರ ಅನರ್ಹತೆಗೆ ಕಾರಣವಾಗುವುದಿಲ್ಲ. ಜೊತೆಗೆ ಅವರ ಅಭಿಪ್ರಾಯಗಳು ಮುಂದೆ ಬದಲಾಗಲೂಬಹುದು” ಎಂದು ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.


ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...