Homeಮುಖಪುಟಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ ಎಸ್.ಎ.ಬೋಬಡೆ!

ಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ ಎಸ್.ಎ.ಬೋಬಡೆ!

ಕೃಷಿ ಕ್ಷೇತ್ರಗಳಲ್ಲಿ ಸುಧಾರಣೆಗಳು ಅಗತ್ಯ. ಈಗ ಈ ಕಾನೂನುಗಳನ್ನು ಹಿಂಪಡೆದುಕೊಂಡರೆ, ಮುಂದಿನ 50 ವರ್ಷಗಳಲ್ಲಿ ಇಂತಹ ಕಾನೂನುಗಳನ್ನು ಯಾವುದೆ ರಾಜಕೀಯ ಪಕ್ಷಗಳು ಮರಳಿ ತರಲಾರವು- ಅನಿಲ್ ಘನ್ವತ್ (ಸಮಿತಿ ಸದಸ್ಯ)

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಬಗ್ಗೆ ರೈತರಿಗಿರುವ ಗೊಂದಲಗಳನ್ನು ನಿವಾರಿಸಲು ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿಯು ಮಂಗಳವಾರ ತನ್ನ ಮೊದಲ ಸಭೆಯನ್ನು ನಡೆಸಿದ್ದು, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳೂ ಸೇರಿದಂತೆ ರೈತರು ಮತ್ತು ಕೃಷಿ ತಜ್ಞರಿಂದ ಅಭಿಪ್ರಾಯಗಳನ್ನು ಪಡೆದುಕೊಳ್ಳಲು ಉದ್ದೇಶಿಸಲಾಗಿದೆ” ಎಂದು ಸಮಿತಿಯ ಸದಸ್ಯರಲ್ಲೊಬ್ಬರಾದ ಅನಿಲ ಘನ್ವತ್ ಅವರು ತಿಳಿಸಿದ್ದಾರೆ.

“ಸಮಿತಿಯು ವಸ್ತುನಿಷ್ಠತೆಯನ್ನು ಕಾಯ್ದುಕೊಳ್ಳಲಿದೆ ಮತ್ತು ಚರ್ಚೆಗಳ ನಡುವೆ ವೈಯಕ್ತಿಕ ಅಭಿಪ್ರಾಯಗಳಿಗೆ ಅವಕಾಶ ನೀಡುವುದಿಲ್ಲ. ಜೊತೆಗೆ ಸಮಿತಿಯ ಸದಸ್ಯರು ಯಾವುದೇ ರಾಜಕೀಯ ಪಕ್ಷ ಅಥವಾ ಸರ್ಕಾರದ ಪರವಾಗಿರುವುದಿಲ್ಲ” ಎಂದು ಘನ್ವತ್ ಒತ್ತಿ ಹೇಳಿದ್ದಾರೆ.

“ನಮ್ಮೊಂದಿಗೆ ಮಾತುಕತೆಗೆ ಬರುವಂತೆ ರೈತರ ಮನವೊಲಿಸುವುದೇ ಸಮಿತಿಯ ಪಾಲಿಗೆ ದೊಡ್ಡ ಸವಾಲು ಆಗಿದೆ. ನಮ್ಮ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತೇವೆ. ರೈತರು ಮತ್ತು ಇತರ ಪಾಲುದಾರರೊಂದಿಗೆ ಮೊದಲ ಸುತ್ತಿನ ಮಾತುಕತೆಯನ್ನು ಗುರುವಾರ ನಡೆಸಲು ನಿಗದಿಗೊಳಿಸಲಾಗಿದೆ. ನಮ್ಮೊಂದಿಗೆ ಮಾತನಾಡಿ. ನಾವು ನಿಮ್ಮ ಅಹವಾಲುಗಳನ್ನು ಆಲಿಸಿ, ನಿಮ್ಮ ಅಭಿಪ್ರಾಯಗಳನ್ನು ನ್ಯಾಯಾಲಯದ ಮುಂದಿಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

“ಆದರೆ, ಕೃಷಿ ಕ್ಷೇತ್ರಗಳಲ್ಲಿ ಸುಧಾರಣೆಗಳು ಅಗತ್ಯ. ಈಗ ಈ ಕಾನೂನುಗಳನ್ನು ಹಿಂಪಡೆದುಕೊಂಡರೆ, ಮುಂದಿನ 50 ವರ್ಷಗಳಲ್ಲಿ ಇಂತಹ ಕಾನೂನುಗಳನ್ನು ಯಾವುದೆ ರಾಜಕೀಯ ಪಕ್ಷಗಳು ಮರಳಿ ತರಲಾರವು” ಎಂದು ಅನಿಲ್ ಘನ್ವತ್ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಕೃಷಿ ಆರ್ಥಿಕ ತಜ್ಞರಾದ ಅಶೋಕ್ ಗುಲಾಟಿ ಮತ್ತು ಪ್ರಮೋದ್ ಕುಮಾರ್ ಜೋಶಿ ಅವರು ಸಮಿತಿಯ ಇತರ ಸದಸ್ಯರಾಗಿದ್ದಾರೆ. ಬೂಪಿಂದರ್ ಸಿಂಗ್ ಈ ಹಿಂದೆಯೇ ಸಮಿತಿಯಿಂದ ಹೊರ ಬಂದು, ತಾನು ರೈತರ ಪರವಾಗಿರುವುದಾಗಿ ಘೋಷಿಸಿದ್ದರು.

ಸರ್ವೋಚ್ಚ ನ್ಯಾಯಾಲಯವು ನೇಮಿಸಿರುವ ಸಮಿತಿಯ ಸದಸ್ಯರು ಈ ಕೃಷಿ ಕಾನೂನುಗಳ ಪರವಾಗಿದ್ದಾರೆ ಎಂಬ ರೈತರ ದೂರುಗಳ ನಡುವೆಯೇ ಭಾರತದ ಮುಖ್ಯ ನ್ಯಾಯಾಧೀಶ ಎಸ್.ಎ.ಬೋಬಡೆ ಪ್ರತಿಕ್ರಿಯಿಸಿ, “ಸಮಿತಿಯ ಸದಸ್ಯರು ಆಯ್ಕೆಗೆ ಮುನ್ನ ಕೃಷಿ ಕಾನೂನುಗಳ ಬಗ್ಗೆ ವ್ಯಕ್ತಪಡಿಸಿದ್ದ ಅಭಿಪ್ರಾಯಗಳು ಅವರ ಅನರ್ಹತೆಗೆ ಕಾರಣವಾಗುವುದಿಲ್ಲ. ಜೊತೆಗೆ ಅವರ ಅಭಿಪ್ರಾಯಗಳು ಮುಂದೆ ಬದಲಾಗಲೂಬಹುದು” ಎಂದು ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.


ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...