Homeಮುಖಪುಟಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’: ಪಿ.ಚಿದಂಬರಂ

ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’: ಪಿ.ಚಿದಂಬರಂ

- Advertisement -
- Advertisement -

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತವು ಜಾಗತಿಕ ಪ್ರಜಾಪ್ರಭುತ್ವ ಸೂಚ್ಯಂಕ ಶ್ರೇಯಾಂಕದಲ್ಲಿ 10 ಸ್ಥಾನಗಳನ್ನು ಕುಸಿದಿರುವುದನ್ನು ಉಲ್ಲೇಖಿಸಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದು ಆರೋಪಿಸಿದ್ದಾರೆ.

ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರವು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಮತ್ತು ಪ್ರಜಾಪ್ರಭುತ್ವವನ್ನು ಸವೆಸುತ್ತಿದೆ ಎಂದು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಕಳೆದ ಎರಡು ವರ್ಷಗಳ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ ಯಾರಿಗಾದರೂ ಪ್ರಜಾಪ್ರಭುತ್ವವು ಸವೆದುಹೋಗಿದೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳು ದುರ್ಬಲಗೊಂಡಿವೆ ಎಂಬುದು ತಿಳಿಯುತ್ತದೆ, ಅಧಿಕಾರದಲ್ಲಿರುವವರು ನಿಜವಾದ ‘ತುಕ್ಡೆ ತುಕ್ಡೆ’ ಗ್ಯಾಂಗ್ ಎಂದು ಅವರು ಆರೋಪಿಸಿದ್ದಾರೆ.

ದಿ ಎಕನಾಮಿಸ್ಟ್ ಗ್ರೂಪ್‌ನ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗವಾದ ದಿ ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್ ಸಿದ್ಧಪಡಿಸಿದ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ 160 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯ ಬಗ್ಗೆ ವರದಿ ಮುಂದಿಟ್ಟಿದ್ದು ಭಾರತವು 10 ಸ್ಥಾನ ಕುಸಿಯುವುದರೊಂದಿಗೆ ಸದ್ಯ 51 ನೇ ಸ್ಥಾನದಲ್ಲಿದೆ.

ಪ್ರಜಾಪ್ರಭುತ್ವ ಸೂಚ್ಯಂಕವು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ರದ್ದತಿ ಮತ್ತು ಅಸ್ಸಾಂನಲ್ಲಿನ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯ ವಿವಾದಾತ್ಮಕ ಅನುಷ್ಠಾನವನ್ನು ಉಲ್ಲೇಖಿಸಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ “ಪ್ರಜಾಪ್ರಭುತ್ವ ಹಿಂಜರಿತ” ಎಂದು ವಿವರಿಸಲಾಗಿದೆ.

ತುಕ್ಡೆ ತುಕ್ಡೆ ಗ್ಯಾಂಗ್ ಎನ್ನುವುದು ಆಡುಮಾತಿನ ಪದವಾಗಿದ್ದು, ಇದನ್ನು ಬಲಪಂಥೀಯ ಪಕ್ಷಗಳು ಎಡ-ಬೆಂಬಲಿತ ಗುಂಪುಗಳು ಮತ್ತು ಅವರ ಬೆಂಬಲಿಗರ ಮೇಲೆ ಆಕ್ರಮಣ ಮಾಡಲು ಬಳಸುತ್ತಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 2016ರ ಪ್ರತಿಭಟನೆಯ ನಂತರ ಬಿಜೆಪಿ ನಾಯಕರು ಈ ಪದವನ್ನು ಬಳಸಿದ್ದಾರೆ.

ಸಂಕೇತ್ ಗೋಖಲೆ ಎಂಬುವವರು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯೊಂದಕ್ಕೆ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಪ್ರತಿಕ್ರಿಯಿಸಿದೆ. ಇದನ್ನು ಸ್ವತಃ ಸಂಕೇತ್‌ ಗೋಖಲೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌, “ತುಕ್ಡೆ-ತುಕ್ಡೆ ಗ್ಯಾಂಗ್ ಇಂದಿಗೂ ಅಸ್ತಿತ್ವದಲ್ಲಿದೆ, ಅದು ಪ್ರಸ್ತುತ ಸರ್ಕಾರವಾಗಿದೆ” ಎಂದು ನಿನ್ನೆ ಹೇಳಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....