Homeಮುಖಪುಟಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’: ಪಿ.ಚಿದಂಬರಂ

ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’: ಪಿ.ಚಿದಂಬರಂ

- Advertisement -
- Advertisement -

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತವು ಜಾಗತಿಕ ಪ್ರಜಾಪ್ರಭುತ್ವ ಸೂಚ್ಯಂಕ ಶ್ರೇಯಾಂಕದಲ್ಲಿ 10 ಸ್ಥಾನಗಳನ್ನು ಕುಸಿದಿರುವುದನ್ನು ಉಲ್ಲೇಖಿಸಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದು ಆರೋಪಿಸಿದ್ದಾರೆ.

ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರವು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಮತ್ತು ಪ್ರಜಾಪ್ರಭುತ್ವವನ್ನು ಸವೆಸುತ್ತಿದೆ ಎಂದು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಕಳೆದ ಎರಡು ವರ್ಷಗಳ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ ಯಾರಿಗಾದರೂ ಪ್ರಜಾಪ್ರಭುತ್ವವು ಸವೆದುಹೋಗಿದೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳು ದುರ್ಬಲಗೊಂಡಿವೆ ಎಂಬುದು ತಿಳಿಯುತ್ತದೆ, ಅಧಿಕಾರದಲ್ಲಿರುವವರು ನಿಜವಾದ ‘ತುಕ್ಡೆ ತುಕ್ಡೆ’ ಗ್ಯಾಂಗ್ ಎಂದು ಅವರು ಆರೋಪಿಸಿದ್ದಾರೆ.

ದಿ ಎಕನಾಮಿಸ್ಟ್ ಗ್ರೂಪ್‌ನ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗವಾದ ದಿ ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್ ಸಿದ್ಧಪಡಿಸಿದ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ 160 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯ ಬಗ್ಗೆ ವರದಿ ಮುಂದಿಟ್ಟಿದ್ದು ಭಾರತವು 10 ಸ್ಥಾನ ಕುಸಿಯುವುದರೊಂದಿಗೆ ಸದ್ಯ 51 ನೇ ಸ್ಥಾನದಲ್ಲಿದೆ.

ಪ್ರಜಾಪ್ರಭುತ್ವ ಸೂಚ್ಯಂಕವು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ರದ್ದತಿ ಮತ್ತು ಅಸ್ಸಾಂನಲ್ಲಿನ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯ ವಿವಾದಾತ್ಮಕ ಅನುಷ್ಠಾನವನ್ನು ಉಲ್ಲೇಖಿಸಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ “ಪ್ರಜಾಪ್ರಭುತ್ವ ಹಿಂಜರಿತ” ಎಂದು ವಿವರಿಸಲಾಗಿದೆ.

ತುಕ್ಡೆ ತುಕ್ಡೆ ಗ್ಯಾಂಗ್ ಎನ್ನುವುದು ಆಡುಮಾತಿನ ಪದವಾಗಿದ್ದು, ಇದನ್ನು ಬಲಪಂಥೀಯ ಪಕ್ಷಗಳು ಎಡ-ಬೆಂಬಲಿತ ಗುಂಪುಗಳು ಮತ್ತು ಅವರ ಬೆಂಬಲಿಗರ ಮೇಲೆ ಆಕ್ರಮಣ ಮಾಡಲು ಬಳಸುತ್ತಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 2016ರ ಪ್ರತಿಭಟನೆಯ ನಂತರ ಬಿಜೆಪಿ ನಾಯಕರು ಈ ಪದವನ್ನು ಬಳಸಿದ್ದಾರೆ.

ಸಂಕೇತ್ ಗೋಖಲೆ ಎಂಬುವವರು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯೊಂದಕ್ಕೆ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಪ್ರತಿಕ್ರಿಯಿಸಿದೆ. ಇದನ್ನು ಸ್ವತಃ ಸಂಕೇತ್‌ ಗೋಖಲೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌, “ತುಕ್ಡೆ-ತುಕ್ಡೆ ಗ್ಯಾಂಗ್ ಇಂದಿಗೂ ಅಸ್ತಿತ್ವದಲ್ಲಿದೆ, ಅದು ಪ್ರಸ್ತುತ ಸರ್ಕಾರವಾಗಿದೆ” ಎಂದು ನಿನ್ನೆ ಹೇಳಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...