Homeಮುಖಪುಟಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’: ಪಿ.ಚಿದಂಬರಂ

ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’: ಪಿ.ಚಿದಂಬರಂ

- Advertisement -
- Advertisement -

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತವು ಜಾಗತಿಕ ಪ್ರಜಾಪ್ರಭುತ್ವ ಸೂಚ್ಯಂಕ ಶ್ರೇಯಾಂಕದಲ್ಲಿ 10 ಸ್ಥಾನಗಳನ್ನು ಕುಸಿದಿರುವುದನ್ನು ಉಲ್ಲೇಖಿಸಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದು ಆರೋಪಿಸಿದ್ದಾರೆ.

ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರವು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಮತ್ತು ಪ್ರಜಾಪ್ರಭುತ್ವವನ್ನು ಸವೆಸುತ್ತಿದೆ ಎಂದು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಕಳೆದ ಎರಡು ವರ್ಷಗಳ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ ಯಾರಿಗಾದರೂ ಪ್ರಜಾಪ್ರಭುತ್ವವು ಸವೆದುಹೋಗಿದೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳು ದುರ್ಬಲಗೊಂಡಿವೆ ಎಂಬುದು ತಿಳಿಯುತ್ತದೆ, ಅಧಿಕಾರದಲ್ಲಿರುವವರು ನಿಜವಾದ ‘ತುಕ್ಡೆ ತುಕ್ಡೆ’ ಗ್ಯಾಂಗ್ ಎಂದು ಅವರು ಆರೋಪಿಸಿದ್ದಾರೆ.

ದಿ ಎಕನಾಮಿಸ್ಟ್ ಗ್ರೂಪ್‌ನ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗವಾದ ದಿ ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್ ಸಿದ್ಧಪಡಿಸಿದ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ 160 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯ ಬಗ್ಗೆ ವರದಿ ಮುಂದಿಟ್ಟಿದ್ದು ಭಾರತವು 10 ಸ್ಥಾನ ಕುಸಿಯುವುದರೊಂದಿಗೆ ಸದ್ಯ 51 ನೇ ಸ್ಥಾನದಲ್ಲಿದೆ.

ಪ್ರಜಾಪ್ರಭುತ್ವ ಸೂಚ್ಯಂಕವು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ರದ್ದತಿ ಮತ್ತು ಅಸ್ಸಾಂನಲ್ಲಿನ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯ ವಿವಾದಾತ್ಮಕ ಅನುಷ್ಠಾನವನ್ನು ಉಲ್ಲೇಖಿಸಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ “ಪ್ರಜಾಪ್ರಭುತ್ವ ಹಿಂಜರಿತ” ಎಂದು ವಿವರಿಸಲಾಗಿದೆ.

ತುಕ್ಡೆ ತುಕ್ಡೆ ಗ್ಯಾಂಗ್ ಎನ್ನುವುದು ಆಡುಮಾತಿನ ಪದವಾಗಿದ್ದು, ಇದನ್ನು ಬಲಪಂಥೀಯ ಪಕ್ಷಗಳು ಎಡ-ಬೆಂಬಲಿತ ಗುಂಪುಗಳು ಮತ್ತು ಅವರ ಬೆಂಬಲಿಗರ ಮೇಲೆ ಆಕ್ರಮಣ ಮಾಡಲು ಬಳಸುತ್ತಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 2016ರ ಪ್ರತಿಭಟನೆಯ ನಂತರ ಬಿಜೆಪಿ ನಾಯಕರು ಈ ಪದವನ್ನು ಬಳಸಿದ್ದಾರೆ.

ಸಂಕೇತ್ ಗೋಖಲೆ ಎಂಬುವವರು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯೊಂದಕ್ಕೆ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಪ್ರತಿಕ್ರಿಯಿಸಿದೆ. ಇದನ್ನು ಸ್ವತಃ ಸಂಕೇತ್‌ ಗೋಖಲೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌, “ತುಕ್ಡೆ-ತುಕ್ಡೆ ಗ್ಯಾಂಗ್ ಇಂದಿಗೂ ಅಸ್ತಿತ್ವದಲ್ಲಿದೆ, ಅದು ಪ್ರಸ್ತುತ ಸರ್ಕಾರವಾಗಿದೆ” ಎಂದು ನಿನ್ನೆ ಹೇಳಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...