Homeಮುಖಪುಟಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದನು: ಚುನಾವಣಾ ಫಲಿತಾಂಶಗಳ ಬಗ್ಗೆ RSS ನಾಯಕ ಪ್ರತಿಕ್ರಿಯೆ

ಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದನು: ಚುನಾವಣಾ ಫಲಿತಾಂಶಗಳ ಬಗ್ಗೆ RSS ನಾಯಕ ಪ್ರತಿಕ್ರಿಯೆ

- Advertisement -
- Advertisement -

ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಲೋಕಸಭೆ ಚುನಾವಣೆಯ ಫಲಿತಾಂಶಗಳ ಕುರಿತು ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಬಿಜೆಪಿಯ ಅಹಂಕಾರದ ವಿರುದ್ಧ ಟೀಕೆಯನ್ನು ಮಾಡಿದ್ದಾರೆ. ಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದ್ದಾನೆ ಎಂದು ಹೇಳಿದ್ದಾರೆ.

ಕನೋಟಾದ ಜೈಪುರ ಬಳಿ ರಾಮರಥ ಅಯೋಧ್ಯೆ ಯಾತ್ರೆ ದರ್ಶನ ಪೂಜಾನ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಆರೆಸ್ಸೆಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಯಾವುದೇ ಪಕ್ಷಗಳನ್ನು ಸ್ಪಷ್ಟವಾಗಿ ಹೆಸರಿಸಲಿಲ್ಲ ಆದರೆ ಅವರ ವರ್ತನೆಗಳು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.

ಭಗವಾನ್ ರಾಮನ ಭಕ್ತಿಯನ್ನು ಮಾಡಿದ ಪಕ್ಷವನ್ನು 241ರಲ್ಲಿ ನಿಲ್ಲಿಸಲಾಯಿತು ಆದರೆ ಅದನ್ನು ಅತಿದೊಡ್ಡ ಪಕ್ಷವನ್ನಾಗಿ ಮಾಡಲಾಯಿತು ಎಂದು ಅವರು ಲೋಕಸಭೆ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಪಡೆದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಹೇಳಿದ್ದಾರೆ.

ರಾಮನಲ್ಲಿ ನಂಬಿಕೆಯಿಲ್ಲದವವರನ್ನು ಒಟ್ಟಿಗೆ 234ರಲ್ಲಿ ನಿಲ್ಲಿಸಲಾಯಿತು ಎಂದು ಅವರು ಹೇಳಿದ್ದು, ಸ್ಪಷ್ಟವಾಗಿ ಇದು ಅವರು ಇಂಡಿಯಾ ಮೈತ್ರಿಕೂಟವನ್ನು ಉಲ್ಲೇಖಿಸಿ ಹೇಳಿರುವುದಾಗಿದೆ. ಪ್ರಜಾಪ್ರಭುತ್ವದಲ್ಲಿ ರಾಮರಾಜ್ಯದ ‘ವಿಧಾನ’ ನೋಡಿ; ರಾಮನ ಪೂಜೆ ಮಾಡಿದವರು ಕ್ರಮೇಣ ಅಹಂಕಾರಕ್ಕೆ ತಿರುಗಿದರು, ಆ ಪಕ್ಷವು ದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ಅವರ ದುರಹಂಕಾರದಿಂದ ನೀಡಬೇಕಾಗಿದ್ದ  ಅಧಿಕಾರವನ್ನು ದೇವರು ತಡೆದನು ಎಂದು ಹೇಳಿದ್ದಾರೆ.

ರಾಮನನ್ನು ವಿರೋಧಿಸಿದವರಿಗೆ ಯಾರಿಗೂ ಅಧಿಕಾರ ನೀಡಲಾಗಿಲ್ಲ, ಅವರಿಗೆ ಎರಡನೇ ಸ್ಥಾನ ದೊರೆಯಿತು. ದೇವರ ನ್ಯಾಯವು ನಿಜ ಮತ್ತು ಆನಂದದಾಯಕವಾಗಿದೆ ಎಂದು ಹೇಳಿದ್ದಾರೆ. ರಾಮನನ್ನು ಆರಾಧಿಸುವವರು ವಿನೀತರಾಗಿರಬೇಕು ಮತ್ತು ರಾಮನನ್ನು ವಿರೋಧಿಸಿದವರನ್ನು ರಾಮನೇ ನೋಡಿಕೊಂಡ. ರಾಮ ದೇವರು ಯಾರಿಗೂ ನೋವುಂಟು ಮಾಡುವುದಿಲ್ಲ, ಎಲ್ಲರಿಗೂ ನ್ಯಾಯ ಒದಗಿಸುತ್ತಾರೆ. ರಾಮ ಯಾವತ್ತೂ ನ್ಯಾಯದ ಪರವಾಗಿದ್ದಾರೆ ಎಂದು ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ.

ಭಗವಾನ್ ರಾಮನು ತಾರತಮ್ಯ ಮಾಡುವುದಿಲ್ಲ ಅಥವಾ ಶಿಕ್ಷಿಸುವುದಿಲ್ಲ. ರಾಮನು ಯಾರಿಗೂ ದುಃಖವನ್ನುಂಟು ಮಾಡುವುದಿಲ್ಲ. ರಾಮನು ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಾನೆ. ಅವನು ಯಾವಾಗಲೂ ನ್ಯಾಯಯುತನಾಗಿರುತ್ತಾನೆ ಮತ್ತು ನ್ಯಾಯದಿಂದಲೇ ಮುಂದುವರಿಯುತ್ತಾನೆ. ಭಗವಾನ್ ರಾಮನು ಜನರನ್ನು ರಕ್ಷಿಸಿದನು ಮತ್ತು ರಾವಣನಿಗೆ ಒಳ್ಳೆಯದನ್ನು ಮಾಡಿದನು ಎಂದು ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತದ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಕೇರಳದ ಸಚಿವೆ ವೀಣಾ ಜಾರ್ಜ್‌ಗೆ ಕೇಂದ್ರದಿಂದ ಅಡ್ಡಿ?

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...