Homeಮುಖಪುಟದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ.

- Advertisement -
- Advertisement -

ಯಾರು ಈ ದೇಶವನ್ನು ಕಟ್ಟುತ್ತಾರೋ, ಒಗ್ಗೂಡಿಸುತ್ತಾರೊ ಅವರು ದೇಶಪ್ರೇಮಿಗಳು. ಹಿಂದೂ – ಮುಸ್ಲಿಂ, ಹಿಂದೂ – ಸಿಖ್ಖರ ನಡುವೆ ಜಗಳ ತರುವವರು ದೇಶದ್ರೋಹಿಗಳು ಎಂದು ಚಿಂತಕ, ಮಾನವ ಹಕ್ಕುಗಳ ಹೋರಾಟಗಾರ ಯೋಗೇಂದ್ರ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ನಡೆದ ಸಹಬಾಳ್ವೆ ಸಮಾವೇಶದಲ್ಲಿ ಮಾತನಾಡಿದ ಅವರು, “ಕೆಲವರು ಇಲ್ಲಿಯೇ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಾರೆ. ನಾವು ಇಲ್ಲಿಯೇ ಸಾಮರಸ್ಯ ಮೂಡಿಸುತ್ತೇವೆ, ಸ್ನೇಹ ಬೆಳೆಸುತ್ತೇವೆ ಎನ್ನುತ್ತೇವೆ. ಅವರು ಒಡೆಯುತ್ತಾರೆ, ನಾವು ಕೂಡಿಸುತ್ತೇವೆ. ಅದು ದೆಹಲಿ‌ ತನಕ‌ ಕೇಳಿಸಲಿ. ಇದು ನನ್ನೊಬ್ಬನ ಹೃದಯದ ಮಾತಲ್ಲ, ನಿಮ್ಮೆಲ್ಲರ ಹೃದಯದ ಮಾತಾಗಿದೆ” ಎಂದರು.

ಈ ಸಮಾವೇಶಕ್ಕೆ ಉಡುಪಿಯನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದಗಳು. ಏಕೆಂದರೆ ಇತ್ತೀಚಿನ ದ್ವೇಷದ ಅಲೆಗೆ ಉಡುಪಿಯನ್ನು ಆಯ್ದುಕೊಳ್ಳಲಾಗಿತ್ತು. ಉಡುಪಿಯ ಹೆಸರು ದೇಶದ ಎಲ್ಲಾ ಟಿವಿ ಚಾನೆಲ್‌ಗಳಲ್ಲಿ ಹರಡಿತು. ಕರಾವಳಿ ಕರ್ನಾಟಕ ಒಂದು ಸುಂದರ ತಾಣ. ಇಲ್ಲಿ ಎಲ್ಲವೂ ಬೆಳೆಯುತ್ತದೆ, ಇದು ಫಲವತ್ತಾದ ಸ್ಥಳವಾಗಿದೆ. ಹೀಗಾಗಿ ಇಲ್ಲೂ ಒಂದಿಷ್ಟು ದ್ವೇಷ ಬಿತ್ತೋಣ ಎಂದುಕೊಂಡಿದ್ದಾರೆ. ಆದರೆ ಅದರ ಫಸಲು ಬೆಳೆಯಲು ನಾವು ಬಿಡುವುದಿಲ್ಲ ಎಂದರು.

ಅವರು ಎರಡು ದರ್ಜೆಯ ಜನರನ್ನಾಗಿ ವಿಂಗಡಿಸಲು ಯತ್ನಿಸುತ್ತಾರೆ. ಪ್ರಥಮೆ, ಎರಡನೇ ದರ್ಜೆಯ ನಾಗರಿಕರನ್ನಾಗಿ ವಿಭಜಿಸಲು ಅವರು ಯತ್ನಿಸುತ್ತಾರೆ. ಮನೆಯ ಮಾಲಿಕ ಮತ್ತು ಮನೆಯ ಬಾಡಿಗೆದಾರ ಎಂಬ ವರ್ಗಗಳನ್ನು ಸೃಷ್ಟಿಸುತ್ತಾರೆ. ಹಿಂದಿ ರಾಷ್ಟ್ರ ಭಾಷೆ ಎಂದು ಕೆಲವರು ಹೇಳುತ್ತಾರೆ. ಹಿಂದಿ ಇನ್ನೂರು ವರ್ಷ ಹಳೆಯದು. ಆದರೆ ಕನ್ನಡ ಎರಡೂವರೆ ಸಾವಿರ ವರ್ಷ ಹಳೆಯದು. ಹೀಗಿರುವಾಗ ಹಿಂದಿ ಮಾತನಾಡುವ ಜನರು ಮನೆಯ ಮಾಲೀಕರು ಮತ್ತು ಕನ್ನಡ ಮಾತನಾಡುವ ಜನರು ಹೇಗೆ ಬಾಡಿಗೆದಾರರಾಗಲು ಸಾಧ್ಯ? ಅವರು ಒಂದು ಧರ್ಮದ ಜನರು ಮಾಲೀಕರಾಗಲು ಮತ್ತು ಉಳಿದ ಧರ್ಮದ ಜನರು ಬಾಡಿಗೆದಾರರಾಗುವಂತೆ ಮಾಡುತ್ತಿದ್ದಾರೆ. ನಾವು ಉಡುಪಿಯಲ್ಲಿ ಘೋಷಿಸುತ್ತೇವೆ. ಯಾರ್ಯಾರ ಪೂರ್ವಿಕರ ರಕ್ತ ಇಲ್ಲಿದೆಯೋ ಅವರೆಲ್ಲರೂ ಈ ದೇಶದ ಮಾಲೀಕರು. ನಾವು ಯಾರ ಗುಲಾಮರಲ್ಲ ಎಂದು ಯಾದವ್ ತಿಳಿಸಿದರು.

ಸೆಕ್ಯುಲರಿಸಂ ಎಂಬ ಪದ ಇಂದಿರಾಗಾಂಧಿ ಸಂವಿಧಾನದಲ್ಲಿ ಸೇರಿಸುವ ಮೊದಲು ಇರಲಿಲ್ಲ ಎಂದು ಅವರು ಹೇಳುತ್ತಾರೆ. ಸಮಾನತೆಯ ಹಕ್ಕು, ಸಾಂಸ್ಕೃತಿಕ ಹಕ್ಕು ಮತ್ತು ಧಾರ್ಮಿಕ ಸ್ವಾತಂತ್ರ್‍ಯದ ಹಕ್ಕು 1950 ರ ಸಂವಿಧಾನದಲ್ಲಿಯೇ ಇತ್ತು. ಅದೇ ಸೆಕ್ಯುಲರಿಸಂ. ಸಂವಿಧಾನದ ಕರಡು ರಚನೆ ಸಂದರ್ಭದಲ್ಲಿಯೇ ಈ ಆಶಯಗಳನ್ನು ಸೇರಿಸಲಾಗಿತ್ತು, ಅವು ಸ್ವಾತಂತ್ರ್‍ಯ ಹೋರಾಟದ ಫಲಗಳು ಎಂದು ಯಾದವ್ ಹೇಳಿದರು.

ಗೌತಮ ಬುದ್ಧ ಮೈತ್ರಿ ಬಗ್ಗೆ ಹೇಳುತ್ತಾರೆ. ಅಶೋಕ ಮತ್ತು ಅಕ್ಬರ್ ಕೂಡ ಮೈತ್ರಿ ಬಗ್ಗೆ ಮಾತನಾಡುತ್ತಾರೆ. ಇದು ಭಾರತದ ಪರಂಪರೆ. ಸೆಕ್ಯುಲರಿಸಂ ಬ್ರಿಟಿಷರ ಕೊಡುಗೆ ಅಲ್ಲ. ಐದು ಸಾವಿರ ವರ್ಷಗಳಿಂದ ಈ ದೇಶ ಹೀಗೆಯೇ ನಡೆಯುತ್ತಿದೆ. ಸಿಂಹಾಸನದ ಮೇಲೆ ಕುಳಿತಿರುವವರು ತಾವೇ ದೇವರು ಎಂದು ನಂಬಿದ್ದಾರೆ. ಅವರ ಮುಂಚೆಯೂ ಈ ದೇಶ ಇತ್ತು, ಅವರ ನಂತರವೂ ಈ ದೇಶ ಇರುತ್ತದೆ. ಎಲ್ಲರನ್ನೂ ಗೌರವಿಸುವ, ಒಟ್ಟಿಗೆ ಕರೆದೊಯ್ಯುವುದು ಈ ದೇಶದ ಧರ್ಮ ಎಂಬುದನ್ನು ಅವರು ಮರೆಯಬಾರದು ಎಂದರು.

ಇಂದು ದೇಶದಲ್ಲಿ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಕೇವಲ ಕಟ್ಟಡಗಳ ಮೇಲೆ ಅಲ್ಲ ಹಿಂದೂಸ್ಥಾನದ ಮೇಲೆ, ಸಂವಿಧಾನದ ಮೇಲೆ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಮೀಡಿಯಾ ಪ್ರಾಮಾಣಿಕವಾಗಿದ್ದರೆ ಈ ಉಡುಪಿ ಸಮಾವೇಶ ನಾಳೆ ಮುಖಪುಟದ ಹೆಡ್ಲೈನ್ ಆಗುತ್ತದೆ. ನಾನು ಪತ್ರಕರ್ತರನ್ನು ದೂರುವುದಿಲ್ಲ. ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಆದರೆ ಯಾರ ಬಳಿ ಹಣ ಮತ್ತು ಅಧಿಕಾರವಿದೆಯೇ ಅವರು ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದರು.

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ. ಪ್ರಶ್ನೆ ಇರುವುದು ನಾವು ಗೆದಿಲ್ಲ ಎನ್ನುವುದಲ್ಲ, ಹೇಗೆ ಮತ್ತು ಯಾವಾಗ ಗೆಲ್ಲುತ್ತೇವೆ ಎನ್ನುವುದಾಗಿದೆ. ದೊಡ್ಡ ಪರಂಪರೆ ನಮಗಿರುವುದರಿಂದ ಹೋರಾಡುತ್ತೇವೆ ಮತ್ತು ನಾವು ಗೆಲ್ಲುತ್ತೇವೆ ಎಂದರು.

ಇದನ್ನೂ ಓದಿ; ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯೂನಿಸ್ಟ್ ಉಗ್ರರು ಯಾವಾಗಲೂ ಮಾಡಿರುವ ದಾಖಲೆ ದೇಶ ಒಡೆಯುವ ಕೆಲಸವೇ ಅಲ್ಲವೇ ಪ್ರಪಂಚದ ಇತಿಹಾಸದಲ್ಲಿ

  2. ದ್ವೇಷದ ಹೋರಾಟ ಹೇಗೆ ಇಡೀ ಪ್ರಪಂಚಕ್ಕೆ ಸುದ್ದಿ ಮಾದ್ಯಮಗಳಲ್ಲಿ ಬಿತ್ತರವಾಯಿತೋ ಹಾಗೆಯೆ ಸಾಮರಸ್ಯದ ಹೋರಾಟವೂ ಪ್ರಪಂಚದೆಲ್ಲೆಡೆ ಪ್ರಸಾರವಾಗಲಿ ಎಂದು ಆಶಿಸುತ್ತೇನೆ. ಪ್ರಜಾಪ್ರಭಹತ್ವ=ಜಾತ್ಯಾತೀತತೆ, ಇದಕ್ಕೆ ಮತ್ತೊಂದು ವಿವರಣೆಯ ಅವಶ್ಯಕತೆ ಇಲ್ಲ. ಪ್ರಜೆ ಎಂದರೆ ಜಾತಿ, ಧರ್ಮ, ಭಾಷೆ, ಪ್ರದೇಶ, ಇತರೆ ಎಲ್ಲವನ್ನೂ ಮೀರಿದ ಭಾರತೀಯ. ಆನಂತರ ಅವೆಲ್ಲವನ್ನೂ ಪರಿಗಣಿಸ ಬಹುದು. ಈ ವಿಚಾರದಲ್ಲಿ ವಿದ್ಯಾವಂತರನ್ನೂ ತಪ್ಪು ದಾರಿಗೆಳೆಯಲಾಗುತ್ತಿದೆ. ಇದರಿಂದ ದೇಶ ಸರ್ವನಾಶದ ಕಡೆಗೆ ಹೆಜ್ಜೆ ಇಡುತ್ತಿದೆ. ಈ ಸಾಮರಸ್ಯದ ಸಮಾವೇಷ ಸಹಬಾಳ್ವಗೆ ಮತ್ತು ದೇಶದ ಏಳಿಗೆಯ ಆರಂಬ. ಇದನ್ನು ಆಯೋಜಿಸಿದವರೆಲ್ಲರಿಗೂ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...