Homeಮುಖಪುಟದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ.

- Advertisement -
- Advertisement -

ಯಾರು ಈ ದೇಶವನ್ನು ಕಟ್ಟುತ್ತಾರೋ, ಒಗ್ಗೂಡಿಸುತ್ತಾರೊ ಅವರು ದೇಶಪ್ರೇಮಿಗಳು. ಹಿಂದೂ – ಮುಸ್ಲಿಂ, ಹಿಂದೂ – ಸಿಖ್ಖರ ನಡುವೆ ಜಗಳ ತರುವವರು ದೇಶದ್ರೋಹಿಗಳು ಎಂದು ಚಿಂತಕ, ಮಾನವ ಹಕ್ಕುಗಳ ಹೋರಾಟಗಾರ ಯೋಗೇಂದ್ರ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ನಡೆದ ಸಹಬಾಳ್ವೆ ಸಮಾವೇಶದಲ್ಲಿ ಮಾತನಾಡಿದ ಅವರು, “ಕೆಲವರು ಇಲ್ಲಿಯೇ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಾರೆ. ನಾವು ಇಲ್ಲಿಯೇ ಸಾಮರಸ್ಯ ಮೂಡಿಸುತ್ತೇವೆ, ಸ್ನೇಹ ಬೆಳೆಸುತ್ತೇವೆ ಎನ್ನುತ್ತೇವೆ. ಅವರು ಒಡೆಯುತ್ತಾರೆ, ನಾವು ಕೂಡಿಸುತ್ತೇವೆ. ಅದು ದೆಹಲಿ‌ ತನಕ‌ ಕೇಳಿಸಲಿ. ಇದು ನನ್ನೊಬ್ಬನ ಹೃದಯದ ಮಾತಲ್ಲ, ನಿಮ್ಮೆಲ್ಲರ ಹೃದಯದ ಮಾತಾಗಿದೆ” ಎಂದರು.

ಈ ಸಮಾವೇಶಕ್ಕೆ ಉಡುಪಿಯನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದಗಳು. ಏಕೆಂದರೆ ಇತ್ತೀಚಿನ ದ್ವೇಷದ ಅಲೆಗೆ ಉಡುಪಿಯನ್ನು ಆಯ್ದುಕೊಳ್ಳಲಾಗಿತ್ತು. ಉಡುಪಿಯ ಹೆಸರು ದೇಶದ ಎಲ್ಲಾ ಟಿವಿ ಚಾನೆಲ್‌ಗಳಲ್ಲಿ ಹರಡಿತು. ಕರಾವಳಿ ಕರ್ನಾಟಕ ಒಂದು ಸುಂದರ ತಾಣ. ಇಲ್ಲಿ ಎಲ್ಲವೂ ಬೆಳೆಯುತ್ತದೆ, ಇದು ಫಲವತ್ತಾದ ಸ್ಥಳವಾಗಿದೆ. ಹೀಗಾಗಿ ಇಲ್ಲೂ ಒಂದಿಷ್ಟು ದ್ವೇಷ ಬಿತ್ತೋಣ ಎಂದುಕೊಂಡಿದ್ದಾರೆ. ಆದರೆ ಅದರ ಫಸಲು ಬೆಳೆಯಲು ನಾವು ಬಿಡುವುದಿಲ್ಲ ಎಂದರು.

ಅವರು ಎರಡು ದರ್ಜೆಯ ಜನರನ್ನಾಗಿ ವಿಂಗಡಿಸಲು ಯತ್ನಿಸುತ್ತಾರೆ. ಪ್ರಥಮೆ, ಎರಡನೇ ದರ್ಜೆಯ ನಾಗರಿಕರನ್ನಾಗಿ ವಿಭಜಿಸಲು ಅವರು ಯತ್ನಿಸುತ್ತಾರೆ. ಮನೆಯ ಮಾಲಿಕ ಮತ್ತು ಮನೆಯ ಬಾಡಿಗೆದಾರ ಎಂಬ ವರ್ಗಗಳನ್ನು ಸೃಷ್ಟಿಸುತ್ತಾರೆ. ಹಿಂದಿ ರಾಷ್ಟ್ರ ಭಾಷೆ ಎಂದು ಕೆಲವರು ಹೇಳುತ್ತಾರೆ. ಹಿಂದಿ ಇನ್ನೂರು ವರ್ಷ ಹಳೆಯದು. ಆದರೆ ಕನ್ನಡ ಎರಡೂವರೆ ಸಾವಿರ ವರ್ಷ ಹಳೆಯದು. ಹೀಗಿರುವಾಗ ಹಿಂದಿ ಮಾತನಾಡುವ ಜನರು ಮನೆಯ ಮಾಲೀಕರು ಮತ್ತು ಕನ್ನಡ ಮಾತನಾಡುವ ಜನರು ಹೇಗೆ ಬಾಡಿಗೆದಾರರಾಗಲು ಸಾಧ್ಯ? ಅವರು ಒಂದು ಧರ್ಮದ ಜನರು ಮಾಲೀಕರಾಗಲು ಮತ್ತು ಉಳಿದ ಧರ್ಮದ ಜನರು ಬಾಡಿಗೆದಾರರಾಗುವಂತೆ ಮಾಡುತ್ತಿದ್ದಾರೆ. ನಾವು ಉಡುಪಿಯಲ್ಲಿ ಘೋಷಿಸುತ್ತೇವೆ. ಯಾರ್ಯಾರ ಪೂರ್ವಿಕರ ರಕ್ತ ಇಲ್ಲಿದೆಯೋ ಅವರೆಲ್ಲರೂ ಈ ದೇಶದ ಮಾಲೀಕರು. ನಾವು ಯಾರ ಗುಲಾಮರಲ್ಲ ಎಂದು ಯಾದವ್ ತಿಳಿಸಿದರು.

ಸೆಕ್ಯುಲರಿಸಂ ಎಂಬ ಪದ ಇಂದಿರಾಗಾಂಧಿ ಸಂವಿಧಾನದಲ್ಲಿ ಸೇರಿಸುವ ಮೊದಲು ಇರಲಿಲ್ಲ ಎಂದು ಅವರು ಹೇಳುತ್ತಾರೆ. ಸಮಾನತೆಯ ಹಕ್ಕು, ಸಾಂಸ್ಕೃತಿಕ ಹಕ್ಕು ಮತ್ತು ಧಾರ್ಮಿಕ ಸ್ವಾತಂತ್ರ್‍ಯದ ಹಕ್ಕು 1950 ರ ಸಂವಿಧಾನದಲ್ಲಿಯೇ ಇತ್ತು. ಅದೇ ಸೆಕ್ಯುಲರಿಸಂ. ಸಂವಿಧಾನದ ಕರಡು ರಚನೆ ಸಂದರ್ಭದಲ್ಲಿಯೇ ಈ ಆಶಯಗಳನ್ನು ಸೇರಿಸಲಾಗಿತ್ತು, ಅವು ಸ್ವಾತಂತ್ರ್‍ಯ ಹೋರಾಟದ ಫಲಗಳು ಎಂದು ಯಾದವ್ ಹೇಳಿದರು.

ಗೌತಮ ಬುದ್ಧ ಮೈತ್ರಿ ಬಗ್ಗೆ ಹೇಳುತ್ತಾರೆ. ಅಶೋಕ ಮತ್ತು ಅಕ್ಬರ್ ಕೂಡ ಮೈತ್ರಿ ಬಗ್ಗೆ ಮಾತನಾಡುತ್ತಾರೆ. ಇದು ಭಾರತದ ಪರಂಪರೆ. ಸೆಕ್ಯುಲರಿಸಂ ಬ್ರಿಟಿಷರ ಕೊಡುಗೆ ಅಲ್ಲ. ಐದು ಸಾವಿರ ವರ್ಷಗಳಿಂದ ಈ ದೇಶ ಹೀಗೆಯೇ ನಡೆಯುತ್ತಿದೆ. ಸಿಂಹಾಸನದ ಮೇಲೆ ಕುಳಿತಿರುವವರು ತಾವೇ ದೇವರು ಎಂದು ನಂಬಿದ್ದಾರೆ. ಅವರ ಮುಂಚೆಯೂ ಈ ದೇಶ ಇತ್ತು, ಅವರ ನಂತರವೂ ಈ ದೇಶ ಇರುತ್ತದೆ. ಎಲ್ಲರನ್ನೂ ಗೌರವಿಸುವ, ಒಟ್ಟಿಗೆ ಕರೆದೊಯ್ಯುವುದು ಈ ದೇಶದ ಧರ್ಮ ಎಂಬುದನ್ನು ಅವರು ಮರೆಯಬಾರದು ಎಂದರು.

ಇಂದು ದೇಶದಲ್ಲಿ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಕೇವಲ ಕಟ್ಟಡಗಳ ಮೇಲೆ ಅಲ್ಲ ಹಿಂದೂಸ್ಥಾನದ ಮೇಲೆ, ಸಂವಿಧಾನದ ಮೇಲೆ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಮೀಡಿಯಾ ಪ್ರಾಮಾಣಿಕವಾಗಿದ್ದರೆ ಈ ಉಡುಪಿ ಸಮಾವೇಶ ನಾಳೆ ಮುಖಪುಟದ ಹೆಡ್ಲೈನ್ ಆಗುತ್ತದೆ. ನಾನು ಪತ್ರಕರ್ತರನ್ನು ದೂರುವುದಿಲ್ಲ. ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಆದರೆ ಯಾರ ಬಳಿ ಹಣ ಮತ್ತು ಅಧಿಕಾರವಿದೆಯೇ ಅವರು ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದರು.

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ. ಪ್ರಶ್ನೆ ಇರುವುದು ನಾವು ಗೆದಿಲ್ಲ ಎನ್ನುವುದಲ್ಲ, ಹೇಗೆ ಮತ್ತು ಯಾವಾಗ ಗೆಲ್ಲುತ್ತೇವೆ ಎನ್ನುವುದಾಗಿದೆ. ದೊಡ್ಡ ಪರಂಪರೆ ನಮಗಿರುವುದರಿಂದ ಹೋರಾಡುತ್ತೇವೆ ಮತ್ತು ನಾವು ಗೆಲ್ಲುತ್ತೇವೆ ಎಂದರು.

ಇದನ್ನೂ ಓದಿ; ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯೂನಿಸ್ಟ್ ಉಗ್ರರು ಯಾವಾಗಲೂ ಮಾಡಿರುವ ದಾಖಲೆ ದೇಶ ಒಡೆಯುವ ಕೆಲಸವೇ ಅಲ್ಲವೇ ಪ್ರಪಂಚದ ಇತಿಹಾಸದಲ್ಲಿ

  2. ದ್ವೇಷದ ಹೋರಾಟ ಹೇಗೆ ಇಡೀ ಪ್ರಪಂಚಕ್ಕೆ ಸುದ್ದಿ ಮಾದ್ಯಮಗಳಲ್ಲಿ ಬಿತ್ತರವಾಯಿತೋ ಹಾಗೆಯೆ ಸಾಮರಸ್ಯದ ಹೋರಾಟವೂ ಪ್ರಪಂಚದೆಲ್ಲೆಡೆ ಪ್ರಸಾರವಾಗಲಿ ಎಂದು ಆಶಿಸುತ್ತೇನೆ. ಪ್ರಜಾಪ್ರಭಹತ್ವ=ಜಾತ್ಯಾತೀತತೆ, ಇದಕ್ಕೆ ಮತ್ತೊಂದು ವಿವರಣೆಯ ಅವಶ್ಯಕತೆ ಇಲ್ಲ. ಪ್ರಜೆ ಎಂದರೆ ಜಾತಿ, ಧರ್ಮ, ಭಾಷೆ, ಪ್ರದೇಶ, ಇತರೆ ಎಲ್ಲವನ್ನೂ ಮೀರಿದ ಭಾರತೀಯ. ಆನಂತರ ಅವೆಲ್ಲವನ್ನೂ ಪರಿಗಣಿಸ ಬಹುದು. ಈ ವಿಚಾರದಲ್ಲಿ ವಿದ್ಯಾವಂತರನ್ನೂ ತಪ್ಪು ದಾರಿಗೆಳೆಯಲಾಗುತ್ತಿದೆ. ಇದರಿಂದ ದೇಶ ಸರ್ವನಾಶದ ಕಡೆಗೆ ಹೆಜ್ಜೆ ಇಡುತ್ತಿದೆ. ಈ ಸಾಮರಸ್ಯದ ಸಮಾವೇಷ ಸಹಬಾಳ್ವಗೆ ಮತ್ತು ದೇಶದ ಏಳಿಗೆಯ ಆರಂಬ. ಇದನ್ನು ಆಯೋಜಿಸಿದವರೆಲ್ಲರಿಗೂ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...