Homeಮುಖಪುಟದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ.

- Advertisement -
- Advertisement -

ಯಾರು ಈ ದೇಶವನ್ನು ಕಟ್ಟುತ್ತಾರೋ, ಒಗ್ಗೂಡಿಸುತ್ತಾರೊ ಅವರು ದೇಶಪ್ರೇಮಿಗಳು. ಹಿಂದೂ – ಮುಸ್ಲಿಂ, ಹಿಂದೂ – ಸಿಖ್ಖರ ನಡುವೆ ಜಗಳ ತರುವವರು ದೇಶದ್ರೋಹಿಗಳು ಎಂದು ಚಿಂತಕ, ಮಾನವ ಹಕ್ಕುಗಳ ಹೋರಾಟಗಾರ ಯೋಗೇಂದ್ರ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ನಡೆದ ಸಹಬಾಳ್ವೆ ಸಮಾವೇಶದಲ್ಲಿ ಮಾತನಾಡಿದ ಅವರು, “ಕೆಲವರು ಇಲ್ಲಿಯೇ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಾರೆ. ನಾವು ಇಲ್ಲಿಯೇ ಸಾಮರಸ್ಯ ಮೂಡಿಸುತ್ತೇವೆ, ಸ್ನೇಹ ಬೆಳೆಸುತ್ತೇವೆ ಎನ್ನುತ್ತೇವೆ. ಅವರು ಒಡೆಯುತ್ತಾರೆ, ನಾವು ಕೂಡಿಸುತ್ತೇವೆ. ಅದು ದೆಹಲಿ‌ ತನಕ‌ ಕೇಳಿಸಲಿ. ಇದು ನನ್ನೊಬ್ಬನ ಹೃದಯದ ಮಾತಲ್ಲ, ನಿಮ್ಮೆಲ್ಲರ ಹೃದಯದ ಮಾತಾಗಿದೆ” ಎಂದರು.

ಈ ಸಮಾವೇಶಕ್ಕೆ ಉಡುಪಿಯನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದಗಳು. ಏಕೆಂದರೆ ಇತ್ತೀಚಿನ ದ್ವೇಷದ ಅಲೆಗೆ ಉಡುಪಿಯನ್ನು ಆಯ್ದುಕೊಳ್ಳಲಾಗಿತ್ತು. ಉಡುಪಿಯ ಹೆಸರು ದೇಶದ ಎಲ್ಲಾ ಟಿವಿ ಚಾನೆಲ್‌ಗಳಲ್ಲಿ ಹರಡಿತು. ಕರಾವಳಿ ಕರ್ನಾಟಕ ಒಂದು ಸುಂದರ ತಾಣ. ಇಲ್ಲಿ ಎಲ್ಲವೂ ಬೆಳೆಯುತ್ತದೆ, ಇದು ಫಲವತ್ತಾದ ಸ್ಥಳವಾಗಿದೆ. ಹೀಗಾಗಿ ಇಲ್ಲೂ ಒಂದಿಷ್ಟು ದ್ವೇಷ ಬಿತ್ತೋಣ ಎಂದುಕೊಂಡಿದ್ದಾರೆ. ಆದರೆ ಅದರ ಫಸಲು ಬೆಳೆಯಲು ನಾವು ಬಿಡುವುದಿಲ್ಲ ಎಂದರು.

ಅವರು ಎರಡು ದರ್ಜೆಯ ಜನರನ್ನಾಗಿ ವಿಂಗಡಿಸಲು ಯತ್ನಿಸುತ್ತಾರೆ. ಪ್ರಥಮೆ, ಎರಡನೇ ದರ್ಜೆಯ ನಾಗರಿಕರನ್ನಾಗಿ ವಿಭಜಿಸಲು ಅವರು ಯತ್ನಿಸುತ್ತಾರೆ. ಮನೆಯ ಮಾಲಿಕ ಮತ್ತು ಮನೆಯ ಬಾಡಿಗೆದಾರ ಎಂಬ ವರ್ಗಗಳನ್ನು ಸೃಷ್ಟಿಸುತ್ತಾರೆ. ಹಿಂದಿ ರಾಷ್ಟ್ರ ಭಾಷೆ ಎಂದು ಕೆಲವರು ಹೇಳುತ್ತಾರೆ. ಹಿಂದಿ ಇನ್ನೂರು ವರ್ಷ ಹಳೆಯದು. ಆದರೆ ಕನ್ನಡ ಎರಡೂವರೆ ಸಾವಿರ ವರ್ಷ ಹಳೆಯದು. ಹೀಗಿರುವಾಗ ಹಿಂದಿ ಮಾತನಾಡುವ ಜನರು ಮನೆಯ ಮಾಲೀಕರು ಮತ್ತು ಕನ್ನಡ ಮಾತನಾಡುವ ಜನರು ಹೇಗೆ ಬಾಡಿಗೆದಾರರಾಗಲು ಸಾಧ್ಯ? ಅವರು ಒಂದು ಧರ್ಮದ ಜನರು ಮಾಲೀಕರಾಗಲು ಮತ್ತು ಉಳಿದ ಧರ್ಮದ ಜನರು ಬಾಡಿಗೆದಾರರಾಗುವಂತೆ ಮಾಡುತ್ತಿದ್ದಾರೆ. ನಾವು ಉಡುಪಿಯಲ್ಲಿ ಘೋಷಿಸುತ್ತೇವೆ. ಯಾರ್ಯಾರ ಪೂರ್ವಿಕರ ರಕ್ತ ಇಲ್ಲಿದೆಯೋ ಅವರೆಲ್ಲರೂ ಈ ದೇಶದ ಮಾಲೀಕರು. ನಾವು ಯಾರ ಗುಲಾಮರಲ್ಲ ಎಂದು ಯಾದವ್ ತಿಳಿಸಿದರು.

ಸೆಕ್ಯುಲರಿಸಂ ಎಂಬ ಪದ ಇಂದಿರಾಗಾಂಧಿ ಸಂವಿಧಾನದಲ್ಲಿ ಸೇರಿಸುವ ಮೊದಲು ಇರಲಿಲ್ಲ ಎಂದು ಅವರು ಹೇಳುತ್ತಾರೆ. ಸಮಾನತೆಯ ಹಕ್ಕು, ಸಾಂಸ್ಕೃತಿಕ ಹಕ್ಕು ಮತ್ತು ಧಾರ್ಮಿಕ ಸ್ವಾತಂತ್ರ್‍ಯದ ಹಕ್ಕು 1950 ರ ಸಂವಿಧಾನದಲ್ಲಿಯೇ ಇತ್ತು. ಅದೇ ಸೆಕ್ಯುಲರಿಸಂ. ಸಂವಿಧಾನದ ಕರಡು ರಚನೆ ಸಂದರ್ಭದಲ್ಲಿಯೇ ಈ ಆಶಯಗಳನ್ನು ಸೇರಿಸಲಾಗಿತ್ತು, ಅವು ಸ್ವಾತಂತ್ರ್‍ಯ ಹೋರಾಟದ ಫಲಗಳು ಎಂದು ಯಾದವ್ ಹೇಳಿದರು.

ಗೌತಮ ಬುದ್ಧ ಮೈತ್ರಿ ಬಗ್ಗೆ ಹೇಳುತ್ತಾರೆ. ಅಶೋಕ ಮತ್ತು ಅಕ್ಬರ್ ಕೂಡ ಮೈತ್ರಿ ಬಗ್ಗೆ ಮಾತನಾಡುತ್ತಾರೆ. ಇದು ಭಾರತದ ಪರಂಪರೆ. ಸೆಕ್ಯುಲರಿಸಂ ಬ್ರಿಟಿಷರ ಕೊಡುಗೆ ಅಲ್ಲ. ಐದು ಸಾವಿರ ವರ್ಷಗಳಿಂದ ಈ ದೇಶ ಹೀಗೆಯೇ ನಡೆಯುತ್ತಿದೆ. ಸಿಂಹಾಸನದ ಮೇಲೆ ಕುಳಿತಿರುವವರು ತಾವೇ ದೇವರು ಎಂದು ನಂಬಿದ್ದಾರೆ. ಅವರ ಮುಂಚೆಯೂ ಈ ದೇಶ ಇತ್ತು, ಅವರ ನಂತರವೂ ಈ ದೇಶ ಇರುತ್ತದೆ. ಎಲ್ಲರನ್ನೂ ಗೌರವಿಸುವ, ಒಟ್ಟಿಗೆ ಕರೆದೊಯ್ಯುವುದು ಈ ದೇಶದ ಧರ್ಮ ಎಂಬುದನ್ನು ಅವರು ಮರೆಯಬಾರದು ಎಂದರು.

ಇಂದು ದೇಶದಲ್ಲಿ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಕೇವಲ ಕಟ್ಟಡಗಳ ಮೇಲೆ ಅಲ್ಲ ಹಿಂದೂಸ್ಥಾನದ ಮೇಲೆ, ಸಂವಿಧಾನದ ಮೇಲೆ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಮೀಡಿಯಾ ಪ್ರಾಮಾಣಿಕವಾಗಿದ್ದರೆ ಈ ಉಡುಪಿ ಸಮಾವೇಶ ನಾಳೆ ಮುಖಪುಟದ ಹೆಡ್ಲೈನ್ ಆಗುತ್ತದೆ. ನಾನು ಪತ್ರಕರ್ತರನ್ನು ದೂರುವುದಿಲ್ಲ. ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಆದರೆ ಯಾರ ಬಳಿ ಹಣ ಮತ್ತು ಅಧಿಕಾರವಿದೆಯೇ ಅವರು ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದರು.

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ. ಪ್ರಶ್ನೆ ಇರುವುದು ನಾವು ಗೆದಿಲ್ಲ ಎನ್ನುವುದಲ್ಲ, ಹೇಗೆ ಮತ್ತು ಯಾವಾಗ ಗೆಲ್ಲುತ್ತೇವೆ ಎನ್ನುವುದಾಗಿದೆ. ದೊಡ್ಡ ಪರಂಪರೆ ನಮಗಿರುವುದರಿಂದ ಹೋರಾಡುತ್ತೇವೆ ಮತ್ತು ನಾವು ಗೆಲ್ಲುತ್ತೇವೆ ಎಂದರು.

ಇದನ್ನೂ ಓದಿ; ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯೂನಿಸ್ಟ್ ಉಗ್ರರು ಯಾವಾಗಲೂ ಮಾಡಿರುವ ದಾಖಲೆ ದೇಶ ಒಡೆಯುವ ಕೆಲಸವೇ ಅಲ್ಲವೇ ಪ್ರಪಂಚದ ಇತಿಹಾಸದಲ್ಲಿ

  2. ದ್ವೇಷದ ಹೋರಾಟ ಹೇಗೆ ಇಡೀ ಪ್ರಪಂಚಕ್ಕೆ ಸುದ್ದಿ ಮಾದ್ಯಮಗಳಲ್ಲಿ ಬಿತ್ತರವಾಯಿತೋ ಹಾಗೆಯೆ ಸಾಮರಸ್ಯದ ಹೋರಾಟವೂ ಪ್ರಪಂಚದೆಲ್ಲೆಡೆ ಪ್ರಸಾರವಾಗಲಿ ಎಂದು ಆಶಿಸುತ್ತೇನೆ. ಪ್ರಜಾಪ್ರಭಹತ್ವ=ಜಾತ್ಯಾತೀತತೆ, ಇದಕ್ಕೆ ಮತ್ತೊಂದು ವಿವರಣೆಯ ಅವಶ್ಯಕತೆ ಇಲ್ಲ. ಪ್ರಜೆ ಎಂದರೆ ಜಾತಿ, ಧರ್ಮ, ಭಾಷೆ, ಪ್ರದೇಶ, ಇತರೆ ಎಲ್ಲವನ್ನೂ ಮೀರಿದ ಭಾರತೀಯ. ಆನಂತರ ಅವೆಲ್ಲವನ್ನೂ ಪರಿಗಣಿಸ ಬಹುದು. ಈ ವಿಚಾರದಲ್ಲಿ ವಿದ್ಯಾವಂತರನ್ನೂ ತಪ್ಪು ದಾರಿಗೆಳೆಯಲಾಗುತ್ತಿದೆ. ಇದರಿಂದ ದೇಶ ಸರ್ವನಾಶದ ಕಡೆಗೆ ಹೆಜ್ಜೆ ಇಡುತ್ತಿದೆ. ಈ ಸಾಮರಸ್ಯದ ಸಮಾವೇಷ ಸಹಬಾಳ್ವಗೆ ಮತ್ತು ದೇಶದ ಏಳಿಗೆಯ ಆರಂಬ. ಇದನ್ನು ಆಯೋಜಿಸಿದವರೆಲ್ಲರಿಗೂ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....